ಮಿಂಚಿದ ಅಗಲ್ಪಾಡಿ ಪ್ರೌಢ ಶಾಲಾ ಯಕ್ಷಗಾನ ತಂಡ


Team Udayavani, Dec 12, 2018, 1:05 AM IST

agalpadi-11-12.jpg

ವಿದ್ಯಾನಗರ: ಆಲಪ್ಪುಳದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಪ್ರೌಢ ಶಾಲಾ ಯಕ್ಷಗಾನ ತಂಡವು ಎ ಗ್ರೇಡ್‌ನೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿ ಮತ್ತೂಮ್ಮೆ ಗಡಿನಾಡಿನ ಜನತೆ ಹೆಮ್ಮೆ ಪಡುವಂತೆ ಮಾಡಿದೆ. ಐವತ್ತೂಂಬತ್ತನೇ ರಾಜ್ಯಮಟ್ಟದ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶಾಲೆಯ ಯಕ್ಷಪ್ರತಿಭೆಗಳು ಮುರಾಸುರ ವಧೆ ಎಂಬ ಯಕ್ಷಗಾನವನ್ನು ಪ್ರದರ್ಶಿಸಿ ಅಪಾರವಾದ ಮೆಚ್ಚುಗೆ ಹಾಗೂ ಬಹುಮಾನವನ್ನು ತಮ್ಮದಾಗಿಸಿಕೊಂಡರು.

ಹತ್ತು ಜಿಲ್ಲೆಗಳಿಂದ ಬಂದ ಯಕ್ಷಗಾನ ತಂಡಗಳೊಂದಿಗೆ ಪೈಪೋಟಿ ನೀಡಿ ಈ ಸಾಧನೆಯನ್ನು ಮಾಡಿದ್ದಾರೆ. ಹೆಸರಾಂತ ನಾಟ್ಯಗುರು, ಜಾನಪದ ಲೋಕ ಪ್ರಶಸ್ತಿ ಪುರಸ್ಕೃತ ಜಯರಾಮ ಪಾಟಾಳಿ ಎಡಮಲೆ ನಿರ್ದೇಶನದಲ್ಲಿ ನಡೆದ ಯಕ್ಷಗಾನವು ಮಲಯಾಳ ಮಣ್ಣಿನಲ್ಲಿ ಯಕ್ಷಲೋಕ ಸೃಷ್ಟಿ ಬೆರಗುಗಣ್ಣಿನಿಂದ ನೋಡುವಂತೆ ಮಾಡಿತು. ಕಿಕ್ಕಿರಿದು ನೆರೆದ ಪ್ರೇಕ್ಷಕರನ್ನು ಯಕ್ಷಗಾನದ ಅದ್ಬುತ ಲೋಕದೊಳಗೆ ಹರಿಸುವಂತೆ ಮಾಡಿತು.

ಯಕ್ಷಗಾನದ ಮೂಲ ಪರಂಪರೆಗೆ ಧಕ್ಕೆಯಾಗದಂತೆ ಪ್ರದರ್ಶಿಸಲ್ಪಟ್ಟ ಯಕ್ಷಗಾನ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಮುರಾಸುರನ ಪಾತ್ರ ದಲ್ಲಿ ದೀಕ್ಷಿತ್‌ ಕುಮಾರ್‌, ದೇವೇಂದ್ರನಾಗಿ ಶ್ರೀರಾಮ ಗಮನ ಸೆಳೆದರು. ದೇವಬಲವಾಗಿ ನಂದಕಿಶೋರ ಡಿ. ಹಾಗೂ ರಾಕ್ಷಸಬಲವಾಗಿ ಕೆ.ಆರ್‌.ದೀಕ್ಷಾ ತಮ್ಮ ನಾಟ್ಯದ, ಧಿಂಗಿಣದ ಸೊಬಗಿನಿಂದ ಪ್ರೇಕ್ಷಕರನ್ನು ಸೆಳೆದರು.

ದೂತನಾಗಿ ಪ್ರಜ್ವಲ್‌ ಶೆಟ್ಟಿ ನೋಡುಗರನ್ನು ನಗೆಗಡಲಲ್ಲಿ ತೇಲಾಡುವಂತೆ ಮಾಡಿದರು. ಸುಪ್ರೀತಾ ಸುಧೀರ್‌ ರೈ ಕೃಷ್ಣನ ಪಾತ್ರಕ್ಕೆ ಜೀವ ತುಂಬಿದರೆ ಭಾವನಾಕೃಷ್ಣ ಜಗನ್ಮಾತೆಯಾಗಿ ಮಂಗಳವನ್ನುಂಟು ಮಾಡಿದರು. ಮುಮ್ಮೇಳದಲ್ಲಿ ಪುಟ್ಟ ಮಕ್ಕಳ ಉತ್ಸಾಹ ಜನಸಾಗರವನ್ನು ಹಿಡಿದಿಡುವಲ್ಲಿ ಯಶಸ್ವಿಯಾಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮನೋಹರ್‌ ಬಲ್ಲಾಳ್‌, ಚೆಂಡೆ ಮದ್ದಳೆಯಲ್ಲಿ ಶ್ರೀಧರ ಪಡ್ರೆ, ಚಕ್ರತಾಳದಲ್ಲಿ ಉದಯ ಸಹಕರಿಸಿದರು. ನೇಪಥ್ಯದಲ್ಲಿ ವಸ್ತ್ರಾಲಂಕಾರ ಹಾಗೂ ಮುಖವರ್ಣಿಕೆಯಲ್ಲಿ ಮೋಹನ್‌ ಹಾಗೂ ಸಂಗಡಿಗರು ಸಹಕರಿಸಿದರು.

ಪ್ರದರ್ಶಿಸಿ ಗೆದ್ದಿರುವುದು ಸಂತೋಷ
ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಈ ಗೆಲುಗೆ ಕಾರಣ. ಸತತವಾಗಿ ಉತ್ಸಾಹದಿಂದ ಅಭ್ಯಾಸ ಮಾಡಿ ವೇದಿಕೆಯಲ್ಲಿ ಪ್ರದರ್ಶನ ನೀಡಿದ್ದಾರೆ. ಶಿಕ್ಷಕವೃಂದದವರ ಮತ್ತು ಹೆತ್ತವರ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನಮ್ಮೊಂದಿಗಿತ್ತು. ಕಾಸರಗೋಡಿನ ಯಕ್ಷಗಾನದ ಮಹತ್ವವನ್ನು, ಆಕರ್ಷಣೆಯನ್ನು ಮತ್ತೂಮ್ಮೆ ಕಲೋತ್ಸವದ ವೇದಿಕೆಯಲ್ಲಿ ಪ್ರದರ್ಶಿಸಿ ಗೆದ್ದು ಬಂದಿರುವುದು ಸಂತೋಷ.
– ಜಯರಾಮ ಪಾಟಾಳಿ ಪಡುಮಲೆ, ನಾಟ್ಯಗುರು

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.