ಕಲಿಯುವ ಮನಸ್ಸಿದ್ದರೆ ವಯಸ್ಸು ತಡೆಯದು

61ನೇ ವಯಸ್ಸಿನಲ್ಲೂ ಕಲಿಕೆ ಮುಂದುವರಿಸಿದ ಅಬ್ದುಲ್ಲ ಮೌಲವಿ

Team Udayavani, Jul 3, 2019, 5:12 AM IST

moulavi

ಕಾಸರಗೋಡು: ಅರುವತ್ತೂಂದನೆಯ ವಯೋಮಾನದಲ್ಲೂ ಅರಿವು ಮತ್ತು ಸಾಹಿತ್ಯದ ಅನಂತತೆಯನ್ನು ಮನನ ಮಾಡಿಕೊಳ್ಳುವ ಯತ್ನದಲ್ಲಿ ಅಬ್ದುಲ್ಲ ಮೌಲವಿ ಅವರು ಇತರರಿಗೆ ಮಾದರಿಯಾಗಿದ್ದಾರೆ.

ವಾಚನ ಪಕ್ಷಾಚರಣೆ ಅಂಗವಾಗಿ ಜಿಲ್ಲಾ ಸಾಕ್ಷರತಾ ಮಿಷನ್‌ ಮತ್ತು ಜಿಲ್ಲಾ ವಾರ್ತಾ ಇಲಾಖೆ ಜಂಟಿಯಾಗಿ ಜಿಲ್ಲಾ ಪಂಚಾಯತ್‌ ಅನೆಕ್ಸ್‌ ಸಭಾಂಗಣದಲ್ಲಿ ಸೋಮವಾರ ನಡೆಸಿದ ಸಾಹಿತ್ಯ ಕೃತಿಗಳ (ಕತೆ, ಕವನ, ಪುಸ್ತಕ ವಾಚನ) ರಚನೆ ಸ್ಪರ್ಧೆ ಯಲ್ಲಿ ಅಬ್ದುಲ್ಲ ಮೌಲವಿ ಎಲ್ಲರ ಕುತೂಹಲಕ್ಕೆ ಪಾತ್ರರಾಗಿದ್ದರು.

ಅವರು ಸಾಕ್ಷರತಾ ಮಿಷನ್‌ ನಡೆಸುತ್ತಿರುವ ಹತ್ತನೇ ತರಗತಿ ತತ್ಸಮಾನ ಕಲಿಕೆಯ ವಿದ್ಯಾರ್ಥಿ. ವಯೋಮಾನದ ಅಶಕ್ತಿಯನ್ನು ಕಡೆಗಣಿಸಿ ಪುಟ್ಟ ಮಕ್ಕಳಂತೆ ಸ್ಪರ್ಧೆಗಳಲ್ಲಿ ಭಾಗಿಯಾದ ಮೌಲವಿ ಅವರು ಸಹಜವಾಗಿಯೇ ಕುತೂಹಲಕ್ಕೆ ಕಾರಣರಾಗಿದ್ದರು.

ಹಿಂದೆಯೂ ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದ ಕತೆ, ಕವನ ರಚನೆ ಸ್ಪರ್ಧೆಗಳಲ್ಲಿ ಅವರು ಭಾಗವಹಿಸಿ ಬಹುಮಾನ ಗೆದ್ದಿದ್ದಾರೆ.

ಅಜಾನೂರು ಗ್ರಾಮ ಪಂಚಾಯತ್‌ ನಿವಾಸಿ ಅಬ್ದುಲ್ಲ ಮೌಲವಿ ಬಾಲ್ಯದಿಂದಲೇ ಕಲಿಕೆಯಲ್ಲಿ ಆಸಕ್ತಿ ಹೊಂದಿದ್ದವರು. ಆದರೆ ತಂದೆಯವರ ಅಕಾಲಿಕ ನಿಧನ ಅವರ ಕಲಿಕೆಯ ಕನಸಿಗೆ ತಣ್ಣೀರೆರಚಿತ್ತು. ಅನಂತರ ಬದುಕಿಗಾಗಿ ಯಾತ್ರೆಗಳನ್ನು ನಡೆಸಬೇಕಾಗಿ ಬಂದುದು ಶಾಲಾ ಕಲಿಕೆಯ ಆಗ್ರಹಕ್ಕೆ ವಿಳಂಬ ತಂದಿತ್ತು. ಜೊತೆಗೆ ಮತೀಯ ಕಲಿಕೆಯನ್ನು ನಡೆಸಿದ್ದರು. ಸಾಕ್ಷರತಾ ಮಿಷನ್‌ ಮೂಲಕ ನಡೆಸಲಾಗುವ ತತ್ಸಮಾನ ತರಗತಿಗಳು ಅವರಲ್ಲಿ ಕಲಿಕೆಯ ಬಗೆಗಿನ ಆಸಕ್ತಿಯನ್ನು ಮತ್ತೆ ಕೆರಳುವಂತೆ ಮಾಡಿದೆ.

ಕಾಸರಗೋಡಿನ ನೆಲ್ಲಿಕುಂಜೆ ಮದ್ರಸಾದಲ್ಲಿ ಶಿಕ್ಷಕರಾಗಿ ಅವರು ಕಾಯಕ ನಡೆಸುತ್ತಿದ್ದಾರೆ. ಪತ್ನಿ ಹೈರುನ್ನೀಸಾ ಮತ್ತು 7 ಮಂದಿ ಮಕ್ಕಳು ಇವರ ಕಲಿಕೆಯ ಆಸಕ್ತಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಸಾಕ್ಷರತಾ ಮಿಷನ್‌ ಮೂಲಕ ನಡೆಯುತ್ತಿರುವ ತತ್ಸಮಾನ ಶಿಕ್ಷಣ ಸಾಧಾರಣ ವ್ಯಕ್ತಿಯೊಬ್ಬನ ಬದುಕಿನಲ್ಲಿ ಅರ್ಧದಲ್ಲಿ ಮೊಟಕುಗೊಂಡ ನಿರೀಕ್ಷೆಯನ್ನು ಮರಳಿ ತಂದುಕೊಡುವ ಬಲುದೊಡ್ಡ ಸಹಾಯ ಹಸ್ತವಾಗಿದೆ ಎಂದು ಅಬ್ದುಲ್ಲ ಮೌಲವಿ ಅವರು ಸಂತೃಪ್ತಿಯಿಂದ ಅಭಿಪ್ರಾಯಪಡುತ್ತಾರೆ.

ಕಲಿಯುವ ಮನಸ್ಸಿದ್ದರೆ ವಯಸ್ಸು ಸಹಿತ ವಿಚಾರಗಳು ಒಂದು ತಡೆಯೇ ಅಲ್ಲ ಎಂಬುದು ಅವರ ಖಚಿತ ನಿಲುವು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.