ಫ‌ಲಕಗಳೆಲ್ಲ ಪೊದೆಗಳಿಂದಾವೃತ;ಸಂಪೂರ್ಣ ಹಾಳಾದ ರಸ್ತೆ


Team Udayavani, Sep 8, 2018, 6:00 AM IST

img20180906091447.jpg

ಇದೀಗ ಮಳೆಗಾಲವು ಕ್ರಮೇಣ ಸರಿಯುತ್ತಾ ಇದೆ. ಈಗಲೇ ರಸ್ತೆ ದುರಸ್ತಿ ಮಾಡಲು ಬೇಕಾದ ಅನುದಾನ, ಅಂಗೀಕಾರ, ಕರಾರು ವಹಿಸುವಿಕೆ ಮೊದಲಾದ ತಾಂತ್ರಿಕ ತಯಾರಿ ನಡೆದರೆ ಮುಂದಿನ ಮಳೆಗಾಲಕ್ಕಿಂತ ಮೊದಲು ರಸ್ತೆ ದುರಸ್ತಿಗೊಳ್ಳಬಹುದು. ಇಲ್ಲದಿದ್ದರೆ ಈ ರಸ್ತೆಯಲ್ಲಿ ಸಂಚರಿಸುವವರ ಗತಿ ಅಧೋಗತಿ. 

ಪೆರ್ಲ: ಕಾಸರಗೋಡು-ಕಲ್ಲಡ್ಕ ರಾಜ್ಯ ಹೆದ್ದಾರಿಯ ಗೋಳು ಕೇಳುವವರಿಲ್ಲದ ಪರಿಸ್ಥಿತಿ.ಒಂದು ಕಡೆ ರಸ್ತೆಯು ಹದಗೆಟ್ಟು ಸಂಚರಿಸಲಾಗದ ಪರಿಸ್ಥಿತಿ. ಇದೀಗ ರಸ್ತೆ ಸೂಚಕಗಳು, ಪ್ರತಿಫ‌ಲನಗಳು, ಸ್ಥಳ ನಾಮ ಫ‌ಲಕಗಳೆಲ್ಲವೂ ಕಾಡು ಪೊದೆಗಳ ಮಧ್ಯೆ ಮುಚ್ಚಿ ಹೋಗಿವೆ. ಕೆಲವು ಕಡೆ ಡಾಮರು ರಸ್ತೆಯ ಎರಡೂ ಬದಿಗಳಲ್ಲಿ ಒಂದಿಂಚೂ ಬಿಡದೆ ಕಾಡು ಆವರಿಸಿದೆ. ರಾತ್ರಿ ಸಮಯದಲ್ಲಿ ಸಂಚರಿಸುವ ವಾಹನಗಳ ಚಾಲಕರಿಗೆ ಸರಿಯಾಗಿ ಸೂಚಕಗಳೂ, ಪ್ರತಿಫ‌ಲಕಗಳು ಗೋಚರಿಸದೆ ಅಪಘಾತವಾಗುವ ಸಾಧ್ಯತೆ ಹೆಚ್ಚಾಗಿದೆ.ಕೆಲವು ಕಡೆ ರಸ್ತೆ ಅಪಘಾತಗಳು ಸಂಭವಿಸಿವೆ ಕೂಡ.

ಕೆಲವು ವರ್ಷಗಳ ಹಿಂದೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರಸ್ತೆಯ ಎರಡೂ ಬದಿಗಳಲ್ಲಿರುವ ಕಾಡು ಕಡಿದು ಸಂಚಾರ ಯೋಗ್ಯ ಗೊಳಿಸುತ್ತಿದ್ದರು. ಮಾತ್ರವಲ್ಲದೆ ಚರಂಡಿಯ ಮಣ್ಣು ತೆಗೆದು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದೀಚೆ ಉದ್ಯೋಗ ಖಾತ್ರಿ ಯೋಜನೆಯಡಿ ಕಾಡು ಕಡಿಯುವ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ. ಅವರು ಈಗ ಅಸೆಟ್‌ ಕ್ರಿಯೇಷನ್‌ ಕೆಲಸಗಳನ್ನು ಮಾತ್ರ ಮಾಡಲು ನಿರ್ದೇಶನವಿದೆ’ ಎಂದು ಹೇಳುತ್ತಾರೆ.

ಹೆಚ್ಚಿನ ಕಡೆಗಳಲ್ಲಿ ಮಳೆಗಾಲದಲ್ಲಿ ನೀರು ರಸ್ತೆ ಮಧ್ಯದಲ್ಲಿಯೇ ಹರಿಯುತ್ತಿರುತ್ತದೆ. ಇದರಿಂದ ರಸ್ತೆ ಕೆಟ್ಟು ಹೊಂಡಗಳು ಉಂಟಾಗಲು ಪ್ರಧಾನ ಕಾರಣಗಳಾಗಿವೆ. ಆದರೆ ರಸ್ತೆಯ ಉಸ್ತುವಾರಿಯನ್ನು ನೋಡಿಕೊಳ್ಳುವ ಲೋಕೋಪ ಯೋಗಿ ಇಲಾಖೆಯು ‘ಇದಕ್ಕೂ ನಮಗೂ ಸಂಬಂಧವೇ ಇಲ್ಲ’ ಎಂಬ ರೀತಿಯಲ್ಲಿದ್ದಾರೆ.

ಕಳೆದ ವರ್ಷವೇ ಹಲವಾರು ಧರಣಿಗಳು, ರಸ್ತೆ ತಡೆಗಳೂ ನಡೆಸಿ, ಪತ್ರಿಕೆಯಲ್ಲಿ ಸರಣಿ ವರದಿ ಬಂದ ಅನಂತರ ಅಧಿಕೃತರು ಎಚ್ಚೆತ್ತು ಅಲ್ಲಲ್ಲಿ ತೇಪೆ ಹಾಕಿ ಸುಮ್ಮಗಾದರು. ಅದು ಈ ಮಳೆಗಾಲದಲ್ಲಿ ಎದ್ದು ಹೋಗಿ ಇನ್ನಷ್ಟು ಬೃಹತ್‌ ಗಾತ್ರದ ಹೊಂಡಗಳು ಉಂಟಾಗಿವೆ. ಕೆಲವು ಕಡೆ ಸೇತುವೆಗಳು, ಕಿರು ಸಂಕಗಳ (ಮೋರಿ ಸಂಕ) ದುರಸ್ತಿಯೂ ಆಗಬೇಕು. ಪಳ್ಳತಡ್ಕ ಸೇತುವೆಯ ಕೆಳಭಾಗದ ಕಾಂಕ್ರೀಟ್‌ ಕಳಚಿಕೊಳ್ಳಲು ತೊಡಗಿ ಕೆಲವು ವರ್ಷಗಳಾದವು. ಈಗ ಮೇಲ್ಭಾಗದ ಕಾಂಕ್ರೀಟ್‌ ಕೂಡ ಅಲ್ಲಲ್ಲಿ ಕಿತ್ತು ಹೋಗಿ ಹೊಂಡಗಳಾಗಿವೆ. ಇದರಲ್ಲಿ ಘನ ವಾಹನಗಳು ಸಂಚರಿಸುವುದು ಅಪಾಯ ಎಂದು ಫ‌ಲಕ ನೆಟ್ಟಿದ್ದಾರೆ. ಆದರೆ ಅದನ್ನು ಲೆಕ್ಕಿಸದೆ ಘನವಾಹನಗಳು ಸಂಚರಿಸುತ್ತಲೇ ಇವೆ. ಈ ಸೇತುವೆಯ ಪುನರ್ನಿರ್ಮಾಣವು ಕೂಡ ಆಗ ಬೇಕಾಗಿದೆ.
 
ಕೆಲವು ಸ್ಥಳಗಳಲ್ಲಿ ಮಾರ್ಗದ ಬದಿ ಜರಿದು ಹೊಂಡಗಳೆದ್ದಿವೆ. ಇದರಿಂದಾಗಿ “ವಾಹನಗಳ ಬಿಡಿಭಾಗಗಳು ಕೆಟ್ಟು ಆಗಾಗ ದುರಸ್ತಿ ಮಾಡಬೇಕಾಗುತ್ತದೆ’ ಎಂದು ಕಳೆದ ಇಪ್ಪತ್ತು ವರುಷ ಗಳಿಂದ ವಾಹನದ ಚಾಲಕನಾಗಿ ದುಡಿಯುತ್ತಿರುವ ಹಸೈನಾರ್‌ ಬದಿಯಡ್ಕ ಹೇಳುತ್ತಾರೆ. “ಬಾಡಿಗೆ ಸಿಕ್ಕ ಅರ್ಧ ಹಣವನ್ನು ಸಂಜೆ ವಾಹನ ದುರಸ್ತಿ ಗೊಳಿಸಲು ಬೇಕಾಗಿದೆ’ ಎಂದು ಆಟೊ ಚಾಲಕರಾದ ಸತೀಶ್‌ ತಮ್ಮಕಷ್ಟ ಹೇಳುತ್ತಾರೆ. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.