ಮುಂದಿನ ತಿಂಗಳು ಅಮಿತ್‌ ಶಾ ಕೇರಳ ಭೇಟಿ


Team Udayavani, May 10, 2017, 12:02 PM IST

shah.jpg

ತಿರುವನಂತಪುರ: ಕೇರಳದಲ್ಲಿ ಎನ್‌ಡಿಎ ನೆಲೆಯನ್ನು ವಿಸ್ತರಿಸುವ ರಣತಂತ್ರ ರೂಪಿಸುವ ಸಲುವಾಗಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮುಂದಿನ ತಿಂಗಳು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಎನ್‌ಡಿಎ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಯಾರಿದೆ. ಮುಂಬರುವ ಚುನಾವಣೆಗಾಗುವಾಗ ರಾಜ್ಯದಲ್ಲಿ ಎನ್‌ಡಿಎ ಬಲಿಷ್ಠ ತೃತೀಯ ಪರ್ಯಾಯವಾಗಿ ಹೊರಹೊಮ್ಮಬೇಕೆನ್ನುವುದು ನಮ್ಮ ಅಪೇಕ್ಷೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್‌ ಹೇಳಿದ್ದಾರೆ. ಅತಿಕ್ರಮಣ ತೆರವು ಕಾರ್ಯಾಚರಣೆಯಿಂದಾಗಿ ಭಾರೀ ವಿವಾದದ ಗೂಡಾಗಿರುವ ಇಡುಕ್ಕಿ ಜಿಲ್ಲೆಯ ಮುನ್ನಾರ್‌ಗೆ ಮೇ 14ರಂದು ಬಿಜೆಪಿ ಸಂಸದರ ನಿಯೋಗ ಭೇಟಿ ನೀಡಲಿದೆ ಎಂದು ಅವರು ಇದೇ ವೇಳೆ ತಿಳಿಸಿದರು. 

ಅತಿಕ್ರಮಣದ ಕುರಿತಾದ ವಾಸ್ತವ ವರದಿಯನ್ನು ಬಿಜೆಪಿ ನಿಯೋಗ ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ. ಮುನ್ನಾರ್‌ ಅತಿಕ್ರಮಣ ವಿವಾದದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಬೇಕೆಂದು ಆಗ್ರಹಿಸುವ ಉದ್ದೇಶದಿಂದ ಬಿಜೆಪಿ ಸಂಸದರ ನಿಯೋಗ ಸತ್ಯ ಶೋಧನಾ ವರದಿ ತಯಾರಿಸಲಿದೆ ಎಂದಿದ್ದಾರೆ. ರಾಜ್ಯಸಭಾ ಸದಸ್ಯ ಸುರೇಶ್‌ ಗೋಪಿ, ಎನ್‌ಡಿಎ ಉಪಾಧ್ಯಕ್ಷ ರಾಜೀವ್‌ ಚಂದ್ರಶೇಖರ್‌, ಮಾಜಿ ಸಚಿವ ಹಾಗೂ ಶಾಸಕ ಓ. ರಾಜಗೋಪಾಲ್‌ ಬಿಜೆಪಿ ನಿಯೋಗದಲ್ಲಿರುತ್ತಾರೆ. 
ಎಲ್‌ಡಿಎಫ್ ಮತ್ತು ಯುಡಿಎಫ್ ಸರಕಾರಗಳು ತಮ್ಮ ಆಳ್ವಿಕೆ ಕಾಲದಲ್ಲಿ ಮುನ್ನಾರ್‌ನಲ್ಲಿ ಅತಿಕ್ರಮಣಕ್ಕೆ ಕುಮ್ಮಕ್ಕು ನೀಡಿರುವುದರಿಂದಲೇ ಪರಿಸ್ಥಿತಿ ಈಗ ಹದಗೆಟ್ಟಿದೆ ಎಂದು ಕುಮ್ಮನಂ ಆರೋಪಿಸಿದ್ದಾರೆ.

ಮಾಜಿ ಹಣಕಾಸು ಸಚಿವ ಕೆ. ಎಂ. ಮಾಣಿ ನೇತೃತ್ವದ ಕೇರಳ ಕಾಂಗ್ರೆಸ್‌ (ಎಂ) ಎನ್‌ಡಿಎ ಕೂಟದಲ್ಲಿ ಸೇರಿಕೊಳ್ಳಲಿದೆಯೇ ಎಂದು ಕೇಳಿದಾಗ ಮೊದಲು ಕೆಸಿ(ಎಂ) ತನ್ನ ನಿಲುವು ಬಹಿರಂಗಪಡಿಸಲಿ ಎಂದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.