ವಾರ್ಷಿಕ ಜಾತ್ರೆ: ಇಂದು ಕುಂಬಳೆ ಬೆಡಿ
Team Udayavani, Jan 17, 2019, 12:30 AM IST
ಕುಂಬಳೆ: ಕುಂಬಳೆ ಕಣಿಪುರ ಶ್ರೀಗೋಪಾಲಕೃಷ್ಣ ಕ್ಷೇತ್ರದ ವಾರ್ಷಿಕ ಜಾತ್ರೆಯ ತೃತೀಯ ದಿನವಾದ ಬುಧವಾರ ಬೆಳಗ್ಗೆ ಉತ್ಸವ ಶ್ರೀಬಲಿ, ಭಜನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿಯ ಬಳಿಕ ಅನ್ನಸಂತರ್ಪಣೆ ನಡೆಯಿತು.
ಸಂಜೆ ನಡೆ ತೆರೆದ ಬಳಿಕ ದೀಪಾ ರಾಧನೆ, ಸೀಮೆಯ ಭಕ್ತವೃಂದದ ವರಿಂದ ವಿಶ್ವರೂಪ ದರ್ಶನ ನಡೆ ಯಿತು. ರಾತ್ರಿ ಸಣ್ಣ ದೀಪೋತ್ಸವ, ಶ್ರೀಬಲಿ, ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೂರ್ಯ ಸಂಗೀತ ಬಳಗ ಯುವಪ್ರತಿಭೆ ಬಾಲಗಾಯಕಿ ಸೂರ್ಯ ಗಾಯತ್ರಿ ಅವರಿಂದ ಭಕ್ತಿ ಸಂಗೀತ ರಂಜಿಸಿತು.
ದ್ವಿತೀಯ ದಿನದಂದು ಬೆಳಗ್ಗೆ ಉತ್ಸವ ಶ್ರೀಬಲಿ, ಭಜನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ನಡೆ ತೆರೆದ ಬಳಿಕ ದೀಪಾರಾಧನೆ, ಕೇಳಿಕೊಟ್ಟು ಸೇವೆ, ರಾತ್ರಿ ಸಣ್ಣ ದೀಪೋತ್ಸವ, ಶ್ರೀಬಲಿ, ಪೂಜೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಂಗಲ್ಪಾಡಿ ಕೂಟ ಮಹಾಜಗತ್ತು ಮಹಿಳಾ ವೇದಿಕೆಯ ಸದಸ್ಯೆಯರಿಂದ ಯಕ್ಷಗಾನ ತಾಳಮದ್ದಳೆ ಮತ್ತು ಕಟೀಲು ಮೇಳದಿಂದ “ಶ್ರೀ ಕಟೀಲು ಕ್ಷೇತ್ರ ಮಹಾತೆ¾’ ಯಕ್ಷಗಾನ ಬಯಲಾಟ ಜರಗಿತು. ಜ. 17ರಂದು ರಾತ್ರಿ 9.45ರಿಂದ ಇತಿಹಾಸ ಪ್ರಸಿದ್ಧ ಕುಂಬಳೆ ಬೆಡಿಯ ಸಿಡಿಮದ್ದು ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್