ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ಇಲ್ಲವೇ?

ಪೆರಡಾಲ ಕೊರಗ ಕಾಲನಿಯಲ್ಲಿ ನೀರಿಲ್ಲ

Team Udayavani, May 22, 2019, 6:10 AM IST

koragara-colony

ಬದಿಯಡ್ಕ: ಧರೆ ಹೊತ್ತಿ ಉರಿಯುವಂತೆ ಭಾಸವಾಗುವ ಸುಡುಬಿಸಿಲಿನ ಬೇಗೆಯಲಿ ಭೂಜಲವೆಲ್ಲ ಬತ್ತಿಹೋಗಿ ಎಲ್ಲೆಲ್ಲೂ ನೀರಿಗಾಗಿ ಹಾಹಾಕಾರ ಭುಗಿಲೆದ್ದಿದೆ. ಪೇಟೆ ಪಟ್ಟಣಗಳಲ್ಲದೆ ಹಳ್ಳಿಗಳಲ್ಲೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಬದಿಯಡ್ಕ ಪೆರಡಾಲ ಕೊರಗ ಕಾಲನಿಯು ಇದಕ್ಕೆ ಹೊರತಾಗಿಲ್ಲ. ಇಲ್ಲಿನ ನಿವಾಸಿಗಳು ಒಂದು ಕೊಡ ನೀರಿಗಾಗಿ ಅಲೆದಾಡುವಂತಾಗಿದೆ.

ಪಂಚಾಯತ್‌ನಾದ್ಯಂತ ನೀರು ಸರಬರಾಜು ಮಾಡುವ ಮೂಲಕ ಜನರ ಸಮಸ್ಯೆಯನ್ನು ಒಂದಷ್ಟು ಕಡಿಮೆಗೊಳಿಸುವ ಪ್ರಯತ್ನವನ್ನು ಪಂಚಾಯತ್‌ ಕೈಗೊಂಡಿದೆಯಾದರೂ ಕಾಲನಿಗೆ ಇದುವರೆಗೂ ನೀರು ತಲುಪದಿ ರುವುದು ಆತಂಕಕ್ಕೀಡು ಮಾಡಿದೆ.

40 ಕುಟುಂಬಗಳಲ್ಲಿ 150ರಷ್ಟು ಮಂದಿ ವಾಸಿಸುತ್ತಿದ್ದು ಏಕ ಅಧ್ಯಾಪಕ ಶಾಲೆ ಹಾಗೂ ಅಂಗನವಾಡಿ ಈ ಕಾಲನಿಯಲ್ಲಿದೆ. ಕುಡಿಯುವ ನೀರಿಗಾಗಿ ಕೊಳವೆ ಬಾವಿಯಿಂದ ಟ್ಯಾಂಕ್‌ಗೆ ಪಂಪ್‌ ಮೂಲಕ ನೀರು ಹಾಯಿಸಲಾಗುತ್ತದೆ.

ಅಲ್ಲದೇ ಒಂದು ಬಾವಿಯೂ ಇದೆ. ಆದರೆ ಈ ವರ್ಷ ಬೇಸಗೆಯ ಬೇಗೆಯಲ್ಲಿ ನೀರು ಸಂಪೂರ್ಣ ಬತ್ತಿಹೋಗಿದೆ. ಹಲವು ವರ್ಷಗಳಿಂದ ಈ ಬಾವಿಯ ಹೂಳೆತ್ತದ ಕಾರಣ ನೀರು ಬತ್ತಿದ್ದು ಬಾವಿ ಸ್ವತ್ಛಗೊಳಿಸಿದಲ್ಲಿ ಅಗತ್ಯದ ನೀರು ಸಂಗ್ರಹವಾಗುವ ಸಾಧ್ಯತೆ ಇದೆ. ಆದರೆ ಈ ಸಂಬಂಧವಾಗಿ ಅಧಿಕಾರಿಗಳು ಇದು ವರೆಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪ್ರಾಥಮಿಕ ಅಗತ್ಯಗಳಿಗೂ ಕೂಡ ದೂರದಿಂದ ನೀರು ತರಬೇಕಾದ ಪರಿಸ್ಥಿತಿ. ನೀರಿನ ûಾಮ ತೀವ್ರಗೊಂಡ ಕಾರಣ ನೆರೆಮನೆಗಳಿಂದಲೂ ನೀರು ಸಿಗದಂತಾಗಿದೆ.

ಮಳೆಗಾಲ ಪ್ರಾರಂಭವಾದರೆ ಸಾಂಕ್ರಾ ಮಿಕ ರೋಗಗಳ ಗೂಡಾಗುವ ಈ ಕೋಲನಿಯಲ್ಲಿ ಕಳೆದ ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಬಾಧಿಸಿ ಒಬ್ಬರು ಮೃತಪಟ್ಟಿದ್ದರು. 10ರಷ್ಟು ಮಂದಿ ಚಿಕಿತ್ಸೆ ಗೊಳಗಾಗಿದ್ದರು. ಆದರೂ ಈ ವರ್ಷವೂ ಆರೋಗ್ಯ ಇಲಾಖೆಯ ಮುಂಜಾಗ್ರತಾ ಕ್ರಮಗಳು ಈ ಕಾಲನಿಯಲ್ಲಿ ನಡೆಯ ಲಿಲ್ಲ ಎಂದು ಕಾಲನಿ ನಿವಾಸಿಗಳು ಹೇಳುತ್ತಿದ್ದಾರೆ.

ಹತ್ತು ಹಲವು ಯೋಜನೆಗಳನ್ನು ಮತ್ತು ಅವುಗಳನ್ನು ಕಾರ್ಯಗತಗೊಳಿಸಲು ಪ್ರೊಮೋಟರ್‌ಗಳನ್ನು ಸರಕಾರದಿಂದ ನೇಮಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳೂ ಇತ್ತ ಗಮನ ಹರಿಸದಿರು ವುದು ಕಾಲನಿ ನಿವಾಸಿಗಳನ್ನು ಮತ್ತೂ ಸಂಕಷ್ಟಕ್ಕೀಡು ಮಾಡಿದೆ. ಆದರೆ ಅವರೂ ಪೆರಡಾಲ ಕಾಲನಿಯೆಡೆ ತೋರುವ ನಿರ್ಲಕ್ಷ್ಯ ಒಂದು ದುರಂತವೇ ಸರಿ.

ಪಂಚಾಯತ್‌ನಿಂದ ವಿತರಿಸುವ ನೀರು ಇಲ್ಲಿಗೂ ತಲುಪಿಸಬೇಕೆಂದು ಕೋಲನಿ ನಿವಾಸಿಗಳು ಮನವಿ ಮಾಡಿದ್ದಾರೆ. ಅಂಗೆ„ ಅಗಲದ ಜಾಗ ಸ್ವತ್ಛಗೊಳಿಸಿ ಪಂಚಾಯತ್‌ಗೊಳಪಟ್ಟ ಎಲ್ಲ ಪ್ರದೇಶಗಳೂ ಸ್ವತ್ಛಗೊಳಿಸಲಾಯಿತು ಎನ್ನುವಂತೆ ಸುಲಭ ಸಾಧ್ಯವಾದ ಪ್ರದೇಶದ ಜನರಿಗೆ ಮಾತ್ರ ನೀರು ಸರಬರಾಜು ಮಾಡಿ ಒಳಪ್ರದೇಶದ ಹಾಗೂ ಕಾಲನಿ ನಿವಾಸಿಗಳ ಪಾಲಿಗೆ ಅನ್ಯಾಯವಾಗುವಂತೆ ಮಾಡುವ ವ್ಯವಸ್ಥೆ ಇನ್ನಾದರೂ ಕೊನೆಯಾಗಲಿ.

ಕೊಳವೆ ಬಾವಿ ಬೇಕು
ಬದಿಯಡ್ಕ ಪಂಚಾಯತ್‌ನಲ್ಲೇ ಅತ್ಯಧಿಕ ಜನಸಂಖ್ಯೆಯುಳ್ಳ ಕಾಲನಿಯಾಗಿದೆ ಪೆರಡಾಲ. ಇದ್ದ ಒಂದು ಬಾವಿಯಾನ್ನಾದರೂ ಹೂಳೆತ್ತಿ ಸ್ವತ್ಛ ಗೊಳಿಸಿದ್ದರೆ ನಮಗೆ ನೀರಿನ ಅಭಾವ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗುತ್ತಿತ್ತು.

ಸಂಬಂಧ ಪಟ್ಟವರ ಗಮನಕ್ಕೆ ತಂದರೂ ಗಮನಹರಿಸಲಿಲ್ಲ. ಕಾಲನಿಗೆ ಕನಿಷ್ಠ ಎರಡು ಬಾವಿ ಅಥವಾ ಕೊಳವೆ ಬಾವಿಯಾದರೂ ಅಗತ್ಯವಿದೆ .

-ವಿಮಲಾ ಕೊರಗ ಕಾಲನಿ ನಿವಾಸಿ

ಶೀಘ್ರ ಪರಿಹಾರ
ಬದಿಯಡ್ಕ ಕೊರಗ ಕಾಲನಿಯಲ್ಲಿ ನೀರಿನ ಕೊರತೆಯಿರುವುದಾಗಿ ಗಮನಕ್ಕೆ ಬಂದಿರಲಿಲ್ಲ. ಆದಷ್ಟು ಬೇಗ ಕಾಲನಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಿ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು.
-ಕೆ.ಎನ್‌. ಕೃಷ್ಣ ಭಟ್‌, ಬದಿಯಡ್ಕ ಗ್ರಾ.ಪಂ.ಅಧ್ಯಕ್ಷರು.

–  ಅಖೀಲೇಶ್‌ ನಗುಮುಗಂ

 

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.