ಅಡಿಕೆ ಧಾರಣೆ ಸ್ಥಿರತೆಗೆ ಸಮರೋಪಾದಿಯ ಯತ್ನ: ಸತೀಶ್ಚಂದ್ರ


Team Udayavani, Aug 31, 2017, 7:40 AM IST

30ksde24.jpg

ಬದಿಯಡ್ಕ: ರಾಷ್ಟ್ರ  ಶತಮಾನಗಳ ವಿದೇಶಿ ದಾಸ್ಯದಿಂದ ನಲುಗಿದ್ದಾಗ ಹಲವು ಸ್ವಾಭಿಮಾನಿ ಹೋರಾಟಗಾರರು, ರಾಷ್ಟ್ರ ಪ್ರೇಮಿ ನೇತಾರರ ಶ್ರಮದ ಫಲವಾಗಿ ಸ್ವಾತಂತ್ರ್ಯಗಳಿಸಿ ಇಂದು ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಿದೆ. ವಿದೇಶಿಯರ ಕಾಪಟ್ಯದ ಕಾರಣ ಹಿಂದೊಮ್ಮೆ ಕನಿಷ್ಠ ಆಹಾರ, ವಸ್ತ್ರಗಳಿಗೂ ಪರರಾಷ್ಟ್ರಗಳನ್ನು ಆಶ್ರಯಿಸುವ ಸ್ಥಿತಿಯಿಂದ ವಿಮೋಚನೆ ಗೊಂಡು ಸ್ವಾವಲಂಬಿ, ಸುದೃಢ  ಭಾರತ ನಿರ್ಮಾಣವಾಗಿದೆ. ಈ ನಿಟ್ಟಿನ ಸಾಧನೆಯಲ್ಲಿ ಇಲ್ಲಿಯ ಕೃಷಿಕನ ಎಡೆಬಿಡದ ಕ್ರಿಯಾತ್ಮಕ ಚಟುವಟಿಕೆ ಪ್ರಮುಖ ಕಾರಣ ಎಂದು ಕ್ಯಾಂಪ್ಕೋದ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರಿನ ಪ್ರತಿಷ್ಠಿತ ಅಡಿಕೆ ಸಹಿತ ಉಪ ಬೆಳೆಗಳ ಬೆಳೆಗಾರರ ಸಂಘಟನೆ ಕ್ಯಾಂಪ್ಕೋದ ನೇತೃತ್ವದಲ್ಲಿ ಬುಧವಾರ ನೀರ್ಚಾಲು ಸಮೀಪದ ವಿಷ್ಣುಮೂರ್ತಿ ನಗರದಲ್ಲಿನ ಒ.ಎಂ. ಅಡಿಟೋರಿಯಂ ನಲ್ಲಿ ಆಯೋಜಿಸಲಾಗಿದ್ದ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ತನ್ನ ಸೇವೆ ಮತ್ತು ವ್ಯವಹಾರದಿಂದ ಗುರುತಿಸಿಕೊಂಡಿರುವ ಕ್ಯಾಂಪ್ಕೋ ಅಡಿಕೆ ಸಹಿತ ಇತರ ಉಪ ಬೆಳೆಗಳ ರೈತರೊಂದಿಗೆ ಅವರ ಆಶೋತ್ತರಗಳ ವಿಷಯದಲ್ಲಿ ಮುಂಚೂಣಿಯಲ್ಲಿದೆ. ಅಡಿಕೆ ಮಾರುಕಟ್ಟೆಯ ಧಾರಣೆಯ ಸ್ಥಿರತೆಯನ್ನು ಕಾಯ್ದುಕೊಳ್ಳುವಲ್ಲಿ ಸಮರೋಪಾದಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ತಿಳಿಸಿದರು. 

ಕ್ಯಾಂಪ್ಕೋದ ವಿವಿಧ ಶಾಖೆಗಳ ಬೆಲೆಗಳ ನಡುವಿನ ತಾರತಮ್ಯಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ ಅವರು ಕ್ಯಾಂಪ್ಕೋ  ವ್ಯವಹಾರ ನೂರಕ್ಕೆ ನೂರು ತೆರಿಗೆ ಪಾವತಿದಾರರ ಜೊತೆ ಇರಲಿದೆ ಎಂದು ತಿಳಿಸಿದರು.

ಹಿರಿಯ ಸದಸ್ಯರು ದೀಪ ಬೆಳಗಿಸಿ ಉದ್ಘಾಟಿಸಿದ ಸಭೆಯಲ್ಲಿ, ವ್ಯವಸ್ಥಾಪಕ ನಿರ್ದೇಶಕ ಸುರೇಶ್‌ ಭಂಡಾರಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಕ್ಯಾಂಪ್ಕೋ ಪ್ರಸಕ್ತ ಸಾಲಿನಲ್ಲಿ 26.22 ಕೋಟಿ. ರೂ. ಗಳ ನಿವ್ವಳ ಲಾಭ ಗಳಿಸಿದ್ದು, ಶೇಕಡಾ ಹತ್ತು ಡಿವಿಡೆಂಡ್‌ ಪಾವತಿಸಲು ಮಹಾಸಭೆಗೆ ಶಿಫಾರಸು ಮಾಡಿದೆ. ಆಮದು ಅಡಿಕೆಯ ನಿಯಂತ್ರಣಕ್ಕೆ ಕ್ಯಾಂಪ್ಕೋ ಅವಿರತ ಯತ್ನ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಕ್ಯಾಂಪ್ಕೋ ನಿರ್ದೇಶಕರುಗಳಾದ ಕೋಳಾರು ಸತೀಶ್ಚಂದ್ರ ಭಂಡಾರಿ, ನ್ಯಾಯವಾದಿ ಕೆ. ರಾಜಗೋಪಾಲ, ಕೆ. ಬಾಲಕೃಷ್ಣ ರೈ ಬಾನೊಟ್ಟು, ಎಂ.ಕೆ.ಶಂಕರನಾರಾಯಣ ಭಟ್‌, ಜಯರಾಮ ಸರಳಾಯ, ಪ್ರಧಾನ ಪ್ರಬಂಧಕ ಪ್ರೇಮಾನಂದ ಶೆಟ್ಟಿಗಾರ್‌, ಮುರಳೀಧರ್‌ ಮೊದಲಾದವರು ಉಪಸ್ಥಿತರಿದ್ದರು.

ಸಿಪಿಸಿಆರ್‌ಐ ವಿಟ್ಲದ ಕೃಷಿ ವಿಜ್ಞಾನಿ ಡಾಣ ಭವಿಷ್‌ ಸಮಗ್ರ ಕೃಷಿ ಮತ್ತು ತೋಟಗಾರಿಕೆಯ ಬಗ್ಗೆ ಮಾಹಿತಿ ನೀಡಿ ಸಂವಾದ ನಡೆಸಿದರು. ನಿರ್ದೇಶಕ ಪದ್ಮರಾಜ ಪಟ್ಟಾಜೆ ಸ್ವಾಗತಿಸಿ, ಶಂಕರನಾರಾಯಣ ಭಟ್‌ ಖಂಡಿಗೆ ವಂದಿಸಿದರು. ಟಿ.ಎಸ್‌. ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.