ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ,ಏರ್‌ ಗನ್‌ ತರಬೇತಿ; ಸಂಘ ಪರಿವಾರದ ನಡೆಗೆ ತೀವ್ರ ಆಕ್ಷೇಪ


Team Udayavani, May 16, 2022, 11:33 AM IST

ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

ಪೊನ್ನಂಪೇಟೆ: ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ತನ್ನ ಕಾರ್ಯಕರ್ತರಿಗೆ ಪೊನ್ನಂಪೇಟೆಯ ಶಾಲಾ ಆವರಣವೊಂದರಲ್ಲಿ ತ್ರಿಶೂಲ ದೀಕ್ಷೆ ಹಾಗೂನಿರ್ಜನ ಪ್ರದೇಶವೊಂದರಲ್ಲಿ ಏರ್‌ ಗನ್‌ ತರಬೇತಿ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹಿಂದೂ ಸಂಘಟನೆಗಳ ವತಿಯಿಂದ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆಯ ಆವರಣದಲ್ಲಿ ಒಂದು ವಾರಗಳ ಕಾಲ ನಡೆದ ಶೌರ್ಯಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಕಾರ್ಯಕರ್ತರಿಗೆತ್ರಿಶೂಲ ವಿತರಿಸುತ್ತಿರುವ ಫೋಟೋ ಗಳು ಇದೀಗ ವೈರಲ್‌ ಆಗಿವೆ.

ಶಿಬಿರದ ಸಂದರ್ಭ ಏರ್‌ಗನ್‌ತರಬೇತಿ ನೀಡಿರುವ ಫೋಟೋಗಳೂ ಹರಿದಾಡುತ್ತಿವೆ. ಶಿಬಿರದಲ್ಲಿ ರಾಜ್ಯದ ವಿವಿಧ ಭಾಗಗಳ ವಿಶ್ವ ಹಿಂದೂ ಪರಿಷತ್‌ಮತ್ತು ಬಜರಂಗದಳದ 120ಕ್ಕೂಅಧಿಕ ಕಾರ್ಯಕರ್ತರು ಭಾಗಿಯಾಗಿರುವುದು ಖಾತ್ರಿಯಾಗಿದೆ.

ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್‌, ವಿಧಾನಪರಿಷತ್‌ ಸದಸ್ಯ ಸುಜ ಕುಶಾಲಪ್ಪ, ಹಿಂದೂ ಸಂಘಟನೆಗಳ ರಾಜ್ಯ ಮಟ್ಟದ ಪ್ರಮುಖರು ಪಾಲ್ಗೊಂಡು ಸಂದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂ ಧರ್ಮ ಮತ್ತುಸ್ವಯಂ ರಕ್ಷಣೆ ಕುರಿತು ಬೌದ್ಧಿಕ್‌ನಲ್ಲಿ ವಿವರಿಸಿದ್ದಾರೆ ಎಂದು ಹೇಳಲಾಗಿದೆ.

ಇಂದು ಪೊಲೀಸ್‌ ದೂರು :  ತ್ರಿಶೂಲ ದೀಕ್ಷೆ ಮತ್ತು ಶಸ್ತ್ರಾಸ್ತ್ರ ತರಬೇತಿ ನೀಡಿರುವುದಕ್ಕೆ ಕೆಲವುಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಮಡಿಕೇರಿ ನಗರಸಭೆಸದಸ್ಯ ಅಮೀನ್‌ ಮೊಹಿಸಿನ್‌ಪ್ರತಿಕ್ರಿಯಿಸಿ, ಸಮಾಜದ ಸಾಮರಸ್ಯ ವನ್ನು ಕದಡಲು ಈ ರೀತಿಯತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶಸ್ತ್ರಾಸ್ತ್ರ ತರಬೇತಿಗೆ ಕಾರಣವೇನು ಎಂದು ಪತ್ತೆಹಚ್ಚುವಂತೆ ಆಗ್ರಹಿಸಿ ಮೇ 16ರಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.

ಯಾರ ವಿರುದ್ಧವೂ ಅಲ್ಲ :  ವಿಹಿಂಪ ಜಿಲ್ಲಾ ಕಾರ್ಯಾಧ್ಯಕ್ಷಸುರೇಶ್‌ ಮುತ್ತಪ್ಪ ಮಾತನಾಡಿ,ಸುಮಾರು 20 ವರ್ಷಗಳ ಅನಂತರ ಕೊಡಗಿನಲ್ಲಿ ಹಿಂದೂ ಜಾಗೃತಿ ಶಿಬಿರ ನಡೆಸಲು ಅವಕಾಶ ದೊರೆತಿದೆ.ತ್ರಿಶೂಲ ಧಾರಣೆ ಪದ್ಧತಿ ಹಿಂದೂ ಸಂಪ್ರದಾಯವಾಗಿದ್ದು, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಬಹಳ ವರ್ಷಗಳಿಂದಲೂ ಇದು ನಡೆದುಕೊಂಡು ಬಂದಿದೆ. ಏರ್‌ಗನ್‌ಮೂಲಕ ತರಬೇತಿ ನೀಡಲಾಗಿದ್ದು,ಇದು ಹಿಂದೂ ಧರ್ಮ ಮತ್ತು ಸ್ವಯಂ ರಕ್ಷಣೆಯ ಪಾಠವೇ ಹೊರತು ಯಾರ ವಿರುದ್ಧವೂ ನಡೆದ ಚಟುವಟಿಕೆ ಅಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಗುಪ್ತಚರ ಇಲಾಖೆಗೆ

ಮಾಹಿತಿ ಇಲ್ಲ :

ವಿಹಿಂಪ ಮತ್ತು ಬಜರಂಗದಳ ಪೊನ್ನಂಪೇಟೆ ಶಾಲೆಯ ಆವರಣದಲ್ಲಿ ಒಂದು ವಾರ ನಡೆಸಿದ ಶಿಬಿರದ ಬಗ್ಗೆ ಜಿಲ್ಲಾ ಗುಪ್ತಚರ ಇಲಾಖೆಗೆ ಮಾಹಿತಿ ಇಲ್ಲವೆಂದು ತಿಳಿದು ಬಂದಿದೆ. ಫೋಟೋಗಳು ವೈರಲ್‌ ಆದ ಅನಂತರವಷ್ಟೇ ಈ ಬಗ್ಗೆ ಅಧಿಕಾರಿ ಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.