ಕಲೆಯನ್ನು ಗುರುತಿಸಿದಾಗ ಕಲಾವಿದ ರೂಪುಗೊಳ್ಳಲು ಸಾಧ್ಯ


Team Udayavani, Aug 2, 2019, 2:39 PM IST

chinnnnna

ಬದಿಯಡ್ಕ : ಕಲೆ ಸರ್ವವ್ಯಾಪಿಯಾಗಿದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಒಬ್ಬ ಕಲಾವಿದ ರೂಪುಗೊಳ್ಳಲು ಸಾಧ್ಯ. ಹೆತ್ತವರ ಪ್ರೋತ್ಸಾಹ ಮತ್ತು ಗುರುಗಳ ಸೂಕ್ತ ಮಾರ್ಗದರ್ಶನ ಪ್ರತಿಯೊಂದು ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದು ಬಹುಮುಖ ಪ್ರತಿಭೆ, ಡ್ರಾಮಾ ಜ್ಯೂನಿಯರ್ ಖ್ಯಾತಿಯ ಅನೂಪ್ ರಮಣ್ ಶರ್ಮ ಹೇಳಿದರು.

ಅವರು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಆಶ್ರಯದಲ್ಲಿ ಪಣಿಯೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿಣ್ಣರ ಕಲರವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‌

ನೂರಾರು ಅವಕಾಶಗಳ ನೀಡಿ ಪ್ರತಿಯೊಂದು ಮಕ್ಕಳ ಒಳಗಿರುವ ಪ್ರತಿಭಾ ಕಾರಂಜಿಯನ್ನು ಹೊರ ಹೊಮ್ಮಿಸುವ ಶಾಲೆಗಳು ನಮ್ಮ ಸೌಭಾಗ್ಯ. ಹಾಗೆಯೇ ಅಂತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯ ಸದಾ ನಡೆಯುತಿರಲಿ, ಚಿಣ್ಣರಿಂದ ಚಿಣ್ಣರಿಗಾಗಿ ನಡೆಯುವ ಚಿಣ್ಣರ ಕಲರವ ನನ್ನಂತ ಪ್ರತಿಭೆಗಳಿಗೆ ನೀಡುವ ಅವಕಾಶ ಮುಂದುವರಿಯಲಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಅಕಾಡೆಮಿ ಉಪಾಧ್ಯಕ್ಷ ಪ್ರೋ.ಶ್ರೀನಾಥ್ ಮಾತನಾಡಿ ಕಲಾ ಮಾತೆಯ ಅನುಗ್ರಹ ಪಡೆಯಲು ಸತತ ಪರಿಶ್ರಮದ ಅಗತ್ಯವಿದೆ. ಚೆನ್ನಾಗಿ ಕಲಿತರೆ ಹೆಚ್ಚು ಅಂಕ ಗಳಿಸುವಂತೆ ಹೆಚ್ಚು ಸಮಯವನ್ನು ಕಲೆಯನ್ನು ಕರಗತ ಮಾಡಲು ಬಳಸಿದವರು ಮುಂದೆ ದೊಡ್ಡ ಕಲಾವಿದರಾಗುತ್ತಾರೆ. ತಾಳ್ಮೆ. ಕ್ಷಮೆ ಹಾಗೂ ಸತತ ಪ್ರಯತ್ನದಲ್ಲಿ ಯಶಸ್ಸಿನ ಗುಟ್ಟು ಅಡಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಉಪಾಧ್ಯಕ್ಷ ಈಶ್ವರ ನಾಯಕ್ ಪೆರುಮುಂಡ, ಜಾನಪದ ಪರಿಷತ್ತು ಸದಸ್ಯೆ ಪುಷ್ಪಾವತಿ ನೆಟ್ಟಣಿಗೆ, ಜತೆ ಕಾರ್ಯದರ್ಶಿ ವಿದ್ಯಾಗಣೇಶ್, ಅಕಾಡೆಮಿ ಸದಸ್ಯೆ ರೇಶ್ಮಾ, ಶಾಲಾ ಶಿಕ್ಷಕ ಪುಷ್ಪರಾಜ್ ಮಾಸ್ಟರ್, ಶಿಕ್ಷಕಿಯರಾದ ಉಷಾಕುಮಾರಿ, ಪ್ರವೀಣ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಸ್ವಾಗಿತಿಸಿ ರೇಶ್ಮಾ ಸುನಿಲ್ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಈ ಸಂದರ್ಭದಲ್ಲಿ ಕಲ್ಪವೃಕ್ಷದ ಗಿಡವನ್ನು ಶಾಲಾ ಪರಿಸರದಲ್ಲಿ ನೆಟ್ಟು ಗಿಡಮರಗಳ ಸಂರಕ್ಷಣೆ ಮತ್ತು ಕೃಷಿಯ ಬಗ್ಗೆ ಮಾಹಿತಿ ನೀಡಲಾಯಿತು.
ಅಕಾಡೆಮಿ ಸದಸ್ಯೆ ಸಂಧ್ಯಾಗೀತಾ ಬಾಯಾರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಮುಗ್ಧ ಮಕ್ಕಳ ಅರಳುವ ಮನಸುಗಳಲ್ಲಿ ಕನ್ನಡದ ಕಂಪು ತುಂಬಿ ಭಾಷಾಪ್ರೇಮವನ್ನು ಜಾಗೃತಗೊಳಿಸುವ ಹಾಗೆಯೇ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಾಯಕವಾಗುವ ಕ್ರಿಯಾಶೀಲ ಕಾರ್ಯಕ್ರಮವನ್ನು ನೀಡುವ ಅಕಾಡೆಮಿಯ ಪ್ರಯತ್ನ ಇತರರಿಗೂ ಮಾದರಿ
ಜ್ಯೋತಿ. ಕೆ, ಮುಖ್ಯೋಪಾಧ್ಯಾಯಿನಿ, ಕಿರಿಯ ಪ್ರಾಥಮಿಕ ಶಾಲೆ ಪಣಿಯೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.