ಕೊರಗ ಕಾಲನಿಯ ಆಶಾಕಿರಣ ಜಲ್‌ಶಕ್ತಿ ಅಭಿಯಾನ್‌

ಕೇರಳದಲ್ಲಿ ಪ್ರಪ್ರಥಮ ಬಾರಿಗೆ ನೂತನ ಯೋಜನೆಗೆ ಚಾಲನೆ

Team Udayavani, Sep 10, 2019, 5:09 AM IST

09-BDK01A

ಬದಿಯಡ್ಕ : ಸತತವಾದ ಪರಿಸರ ನಾಶ, ಕಟ್ಟಡಗಳ ನಿರ್ಮಾಣ, ಪ್ಲಾಸ್ಟಿಕ್‌ ತ್ಯಾಜ್ಯಗಳಿಂದಾಗಿ ಭೂಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ನೀರಿಂಗಿಸಿ ಭೂಗರ್ಭದಲ್ಲಿ ಜಲಮಟ್ಟವನ್ನು ಸಂರಕ್ಷಿಸಬೇಕಾದ ಅನಿವಾರ್ಯ ಇದೆ. ಅದಕ್ಕೆ ಪೂರಕವಾದ ಹಲವಾರು ಯೋಜನೆಗಳು ಕಾರ್ಯಗತವಾಗುತ್ತಿರುವುದು ಕಂಡು ಬರುತ್ತದೆ. ಇಂಗು ಗುಂಡಿಗಳ ಮೂಲಕ ನೀರಿಂಗಿಸುವುದು, ಬಾವಿಗಳಿಗೆ ಮಳೆ ನೀರಿನ ಮರುಪೂರಣ ಮುಂತಾದ ಸೂತ್ರಗಳಲ್ಲದೆ ರಾಜ್ಯಾದ್ಯಂತ ಬಿದಿರಿನ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೂ ಚಾಲನೆ ನೀಡಲಾಗಿದೆ.

ಬಿದಿರಿನ ಬೇರುಗಳು ಹರಡುವ ಮೂಲಕ ಮಣ್ಣಿನ ಕೊರೆತವನ್ನು ತಡೆಗಟ್ಟುವುದಲ್ಲದೆ ನೀರಿಂಗಲೂ ಸಹಕರಿಸುತ್ತವೆ. ಅದರೊಂದಿಗೆ ಜಲ್‌ಶಕ್ತಿ ಅಭಿಯಾನ್‌ ಹೊಸ ಸಾಧ್ಯತೆಗಳತ್ತ ಮುಖ ಮಾಡಿರುವುದು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಇದರ ಭಾಗವಾಗಿ ಫಲವೃಕ್ಷಗಳಾದ ಹಲಸು, ಮಾವು, ಗೇರು ಮಾತ್ರವಲ್ಲದೆ ಬಹುಪಯೋಗಿ ಕಾಡುಬಳ್ಳಿ ಕುಕ್ಕುಸನ (ತುಳುವಿನ ಇಂಜಿರ, ಮಲಯಾಳಂನ ಪುಲ್ಲಾಂಜಿ) ಗಿಡವನ್ನು ಕಾಲನಿಗಳಲ್ಲಿ ನೆಟ್ಟು ಬೆಳೆಸುವ ಯೋಜನೆಗೆ ಚಾಲನೆ ನೀಡಲಾಗಿದೆ.

ಪುಲ್ಲಾಂಜಿ ಅಥವಾ ಕುಕ್ಕುಸನ ಬಳ್ಳಿ
ಕೊರಗ ಸಮುದಾಯದ ಕುಲಕಸುಬು ಬುಟ್ಟಿ ಹೆಣೆಯುವುದು. ಈ ಬುಟ್ಟಿಗಳನ್ನು ಕುಕ್ಕುಸನ ಬಳ್ಳಿಯಿಂದ ತಯಾರಿಸಲಾಗುತ್ತದೆ. ಕಾಡಲ್ಲಿ ಬೆಳೆಯುವ ಈ ಬಳ್ಳಿಗಳನ್ನು ಸಂಗ್ರಹಿಸಲು ಜಿಲ್ಲೆಯ ಕೊರಗ ಕಾಲನಿಗಳ ಸಮುದಾಯದವರು ಸುಳ್ಯ, ಪುತ್ತೂರು ಸೇರಿದಂತೆ ಕರ್ನಾಟಕ ಗಡಿಭಾಗದ ಕಾಡುಗಳತ್ತ ತೆರಳುವುದು ಸಾಮಾನ್ಯವಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಜಲ್‌ಶಕ್ತಿ ಯೋಜನೆಯು ಸಹಕಾರಿಯಾಗಿದೆ. ಈ ಯೋಜನೆಯಂತೆ ನೀರಿಂಗಿಸುವ ಗುಣ ಹೊಂದಿರುವ ಪ್ರಾಕೃತಿಕವಾಗಿ ಲಭಿಸುವ ಕುಕ್ಕುಸನ ಬಳ್ಳಿಗಳನ್ನು ನಾಡಿನಲ್ಲೂ ಬೆಳೆಸಬಹುದೆಂದು ಸಂಶೋಧನೆಗಳಲ್ಲಿ ಸಾಬೀತಾಗಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಬೆಳೆದು ಉಪಯೋಗಕ್ಕೆ ಲಭ್ಯವಾಗುವ ಪುಲ್ಲಾಂಜಿ ಬಡವರ ಪಾಲಿನ ಆಶಾಕಿರಣವಾಗಿದೆ.

ಈ ಬಳ್ಳಿಗಳನ್ನು ಬುಟ್ಟಿ ಮುಂತಾದ ನಿತ್ಯೋಪಯೋಗಿ ವಸ್ತುಗಳ ತಯಾರಿಯಲ್ಲಿ ಮಾತ್ರವಲ್ಲದೆ ಆಲಂಕಾರಿಕ ವಸ್ತುಗಳ ತಯಾರಿಗೂ ಬಳಸಬಹುದು. ಆಕರ್ಷಣೀ ಯವಾದ ಕರಕುಶಲ ವಸ್ತುಗಳಿಗೆ, ವಿಶಿಷ್ಟ ಕಲಾಕೃತಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದ್ದು ಇದರಿಂದ ಕೊರಗ ಸಮುದಾಯದ ಆರ್ಥಿಕತೆಯನ್ನೂ ಬಲಗೊಳಿಸಲು ಸಾಧ್ಯ. ಕಾಲನಿಯ ಸುತ್ತಲಿನ ಪ್ರದೇಶಗಳಲ್ಲಿ ಕುಕ್ಕುಸನ ಬಳ್ಳಿಗಳಲ್ಲದೆ ಹಲಸು, ಮಾವು ಮುಂತಾದ ಫಲ ನೀಡುವ ಗಿಡ‌ಗಳನ್ನು ನೆಟ್ಟು ಆಹಾರ ಭದ್ರತೆಯನ್ನು ಒದಗಿಸಿ ಈ ಜನಾಂಗದ ಹಸಿವನ್ನು ಕಾಲನಿ ನಿವಾಸಿಗಳ ಜೀವನೋಪಾಯಕ್ಕಾಗಿ ಹಮ್ಮಿಕೊಂಡ ಈ ಯೋಜನೆಯನ್ನು ಸಮಗ್ರ ನಿರ್ವಹಣೆಯ ಮೂಲಕ ಯಶಸ್ವಿ ಗೊಳಿಸುವ ತನ್ಮೂಲಕ ಇಲ್ಲಿನ ಜನತೆಯು ಹೆಚ್ಚಿನ ಆದಾಯವನ್ನು ಗಳಿಸಿ ಇವರ ಜೀವನದಲ್ಲಿ ಬದಲಾವಣೆಯನ್ನು ಕಾಣಲು ಸಾಧ್ಯ.

ಕಾಲನಿಗಳಿಗೆ ಸಸಿಗಳ ವಿತರಣೆ
ಕೃಷಿ ಇಲಾಖೆ, ಕೃಷಿಕರ ಅಭಿವೃದ್ಧಿ ಇಲಾಖೆ ಹಾಗೂ ಬದಿಯಡ್ಕ ಗಾ.ಪಂ. ನೇತƒತ್ವದಲ್ಲಿ ಜಲ್‌ಶಕ್ತಿ ಅಭಿಯಾನ್‌ ಅಂಗವಾಗಿ ನೀರ್ಚಾಲು ಸಮೀಪದ ಮಾಡತ್ತಡ್ಕ ಕೊರಗ ಕೊಲನಿ ನಿವಾಸಿಗಳಿಗೆ ಫಲವೃಕ್ಷಗಳ ಗಿಡಗಳನ್ನು ಹಾಗೂ ಕುಕ್ಕುಸನ ಬಳ್ಳಿಗಳ ವಿತರಣೆಯನ್ನು ಜಿಲ್ಲಾಧಿಕಾರಿ ಜೀವನ್‌ಬಾಬು ನೆರವೇರಿಸಿದರು.

ಇಲ್ಲಿನ 9 ಕುಟುಂಬಗಳು ತಮ್ಮ ಜೀವನೋಪಾಯಕ್ಕೆ ದೂರದ ಕರ್ನಾಟಕದಿಂದ ಕಾಡುಬಳ್ಳಿಗಳನ್ನು ತರಬೇಕಾದ ಅನಿವಾರ್ಯತೆ ಇದೆ. ಇದನ್ನು ಮನಗಂಡು ಸಂಶೋಧನೆಗಳ ಮೂಲಕ ಕುಕ್ಕುಸನ (ಇಂಜಿರ)ವೆಂಬ ಕಾಡುಬಳ್ಳಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೃಷಿಯ ಮಾಡುವ ಯೋಜನೆಗೆ ಚಾಲನೆ ನೀಡಲಾಯಿತು. ಇದಲ್ಲದೆ ಇಲ್ಲಿ ಕರಕುಶಲ ವಸ್ತುಗಳ ನಿರ್ಮಾಣಕ್ಕೆ ತರಬೇತಿಯನ್ನೂ ನೀಡುವ ಮೂಲಕ ಇವರ ಸಮಗ್ರ ಅಭಿವೃದ್ಧಿಗೆ ಪೂರಕ ವ್ಯವಸ್ಥೆಯನ್ನು ಕಲ್ಪಿಸಲಾಗುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌ ಸಭೆಯ ಅಧ್ಯಕ್ಷತೆ. ವಹಿಸಿದ್ದರು. ಕೃಷಿ ಇಲಾಖೆಯ ಉಪನಿರ್ದೇಶಕ ಜೋನ್‌ ಜೋಸೆಫ್‌ ಮಾತನಾಡಿದರು. ಬದಿಯಡ್ಕ ಗ್ರಾ.ಪಂ. ವಾರ್ಡ್‌ ಸದಸ್ಯ ಡಿ. ಶಂಕರ, ಜಿಲ್ಲಾ ಕೃಷಿ ಅಧಿಕಾರಿ ಮಧು ಜೋರ್ಜ್‌, ಬದಿಯಡ್ಕ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ, ಕಾರ್ಯದರ್ಶಿ ಪ್ರದೀಪ್‌, ಸದಸ್ಯರಾದ ಜಯಶ್ರೀ, ಪ್ರೊಮೋಟರ್‌ ಗೋಪಾಲನ್‌, ಸಹಾಯಕ ಕೃಷಿ ಅಧಿಕಾರಿ ಜಯರಾಂ ಮತ್ತಿತರರು ಪಾಲ್ಗೊಂಡಿದ್ದರು. ಕೃಷಿ ಇಲಾಖೆಯ ಸಹಾಯಕ ಉಪನಿರ್ದೇಶಕ ಆನಂದ ಕೆ. ಸ್ವಾಗತಿಸಿ, ಬದಿಯಡ್ಕ ಕೃಷಿಭವನದ ಅಧಿಕಾರಿ ಮೀರಾ ವಂದಿಸಿದರು.

ಸಮಗ್ರ ಅಭಿವೃದ್ಧಿ
ಮಾಡತ್ತಡ್ಕ ಕೊರಗ ಕಾಲನಿಯ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯ ಲ್ಲಿಟ್ಟುಕೊಂಡು ಅವರ ಆಹಾರ ಭದ್ರತೆ ಹಾಗೂ ಆದಾಯವನ್ನು ಹತ್ತು ಪಟ್ಟು ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕುಲಕಸುಬಾದ ಬುಟ್ಟಿಹೆಣೆಯುವ ವೃತ್ತಿಗೆ ಅನುಕೂಲವಾಗುವಂತೆ ಕಾಡುಬಳ್ಳಿಗಳು ಸ್ಥಳದಲ್ಲೇ ಲಭ್ಯವಾಗುವಂತೆ ಅಗತ್ಯವುಳ್ಳ ಸೌಲಭ್ಯವನ್ನು ಒದಗಿಸಲಾಗುವುದು. ಕೊರಗ ಸಮುದಾಯವು ಎಲ್ಲ ಪಂಗಡಗ ಳಂತೆ ಮುಖ್ಯವಾಹಿನಿಗೆ ಬರಬೇಕು.
– ಡಾ| ಡಿ. ಸಜಿತ್‌ ಬಾಬು,
ಕಾಸರಗೋಡು ಜಿಲ್ಲಾಧಿಕಾರಿ

-  ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.