ಕುಂದಾಪುರಕ್ಕೆ ತೆರಳಿ ಮಾಹಿತಿ ಕಲೆಹಾಕಿದ ಬದಿಯಡ್ಕ ಪೊಲೀಸ್
Team Udayavani, Nov 24, 2022, 12:50 AM IST
ಬದಿಯಡ್ಕ: ಬದಿಯಡ್ಕದ ಹಿರಿಯ ದಂತ ವೈದ್ಯ ಡಾ| ಕೃಷ್ಣಮೂರ್ತಿ ಸರ್ಪಂಗಳ (57) ಅವರ ನಿಗೂಢ ಸಾವಿನ ಕುರಿತು ತನಿಖೆಯ ಅಂಗವಾಗಿ ಕುಂದಾಪುರಕ್ಕೆ ತೆರಳಿದ್ದ ಬದಿಯಡ್ಕ ಪೊಲೀಸರು ಅಲ್ಲಿನ ಸಿಸಿ ಕೆಮರಾ ದೃಶ್ಯಗಳನ್ನು ಸಂಗ್ರಹಿಸಲು ಕ್ರಮ ಕೈಗೊಂಡಿದ್ದಾರೆ.
ಡಾ| ಕೃಷ್ಣಮೂರ್ತಿ ಅವರು ಕುಂದಾಪುರಕ್ಕೆ ತಲುಪಿದ ಬಳಿಕ ಬಟ್ಟೆಬರೆ ಬದಲಾಯಿಸಿ ನಡೆದು ಹೋಗುತ್ತಿರುವ ದೃಶ್ಯಗಳು ಅಲ್ಲಿನ ಸಿಸಿ ಕೆಮರಾದಲ್ಲಿ ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬದಿಯಡ್ಕ ಪೊಲೀಸರು ಕುಂದಾಪುರಕ್ಕೆ ತೆರಳಿ ಮಾಹಿತಿ ಸಂಗ್ರಹಕ್ಕೆ ತೊಡಗಿದ್ದಾರೆ.
ನ. 8ರಂದು ಡಾ| ಕೃಷ್ಣಮೂರ್ತಿ ಬದಿಯಡ್ಕ ದಿಂದ ನಾಪತ್ತೆಯಾಗಿದ್ದರು. ನ. 9ರಂದು ಅವರ ಮೃತದೇಹ ಕುಂದಾಪುರ ಸಮೀಪದ ರೈಲು ಹಳಿಯಲ್ಲಿ ಪತ್ತೆಯಾಗಿತ್ತು. ಸಾವಿನಲ್ಲಿ ನಿಗೂಢತೆ ಇರುವುದಾಗಿ ಸಂಬಂಧಿಕರು ಆರೋಪಿ ಸಿದ್ದರು. ಈ ಹಿನ್ನೆಲೆಯಲ್ಲಿ ಬದಿಯಡ್ಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ದ್ದಾರೆ. ಕುಂದಾಪುರದ ಪೊಲೀಸರು ಕೆಲವು ದಿನಗಳ ಹಿಂದೆ ಬದಿಯಡ್ಕಕ್ಕೆ ಬಂದು ಮಾಹಿತಿ ಸಂಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ