ರಬ್ಬರ್‌ ಟ್ಯಾಪಿಂಗ್‌ ಮಹಿಳೆ ನಿಗೂಢ ಸಾವು: ಜತೆಗಿದ್ದ ಯುವಕ ನಾಪತ್ತೆ


Team Udayavani, Feb 2, 2023, 5:33 PM IST

ರಬ್ಬರ್‌ ಟ್ಯಾಪಿಂಗ್‌ ಮಹಿಳೆ ನಿಗೂಢ ಸಾವು: ಜತೆಗಿದ್ದ ಯುವಕ ನಾಪತ್ತೆ

ಬದಿಯಡ್ಕ: ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕೆಯಾದ ಮಹಿಳೆ ಮನೆಯೊಳಗೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೇ ವೇಳೆ ಆಕೆಯ ಜತೆಗೆ ವಾಸಿಸುತ್ತಿದ್ದ ಯುವಕ ನಾಪತ್ತೆಯಾಗಿದ್ದಾನೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

ಬದಿಯಡ್ಕ ಠಾಣೆ ವ್ಯಾಪ್ತಿ ಏಳ್ಕಾನದ ಮನೆಯೊಂದರಲ್ಲಿ ವಾಸಿಸುತ್ತಿದ್ದ ಕೊಲ್ಲಂ ಕೊಟ್ಟಿಯಂ ಮುಖತ್ತಲ ಕಣಿಯಾಂತೋಡ್‌ ನಿವಾಸಿ ರಾಧಾಕೃಷ್ಣನ್‌ ಅವರ ಪುತ್ರಿ ನೀತು ಕೃಷ್ಣ (30) ನಿಗೂಢವಾಗಿ ಸಾವಿಗೀಡಾಗಿದ್ದು, ಈಕೆಯ ಜತೆಯಲ್ಲಿ ವಾಸಿಸುತ್ತಿದ್ದ ವಯನಾಡು ಮೇಪಾಡಿ ಠಾಣೆ ವ್ಯಾಪ್ತಿಯ ತೆಕ್ಕೆಪಟ್ಟಿ ಮುಟ್ಟಿಲ್‌ವುತಿ ನಿವಾಸಿ ಆಂಟೋ(30) ನಾಪತ್ತೆಯಾಗಿದ್ದಾನೆ.

ನಾಲ್ಕು ದಿನಗಳ ಹಿಂದೆ ಊರಿಗೆ ತೆರಳುವುದಾಗಿ ಆಂಟೋ ತೋಟದ ಮಾಲಕನಲ್ಲಿ ತಿಳಿಸಿದ್ದನೆನ್ನಲಾಗಿದೆ.

ಫೆ.1 ರಂದು ಇವರು ವಾಸಿಸುತ್ತಿದ್ದ ಮನೆಯೊಳಗಿಂದ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ಶಾಜಿ ಹಾಗು ಇತರ ಕೆಲಸಗಾರರು ಮನೆಯ ಹೆಂಚು ಸರಿಸಿ ನೋಡಿದಾಗ ಕೊಠಡಿಯೊಳಗೆ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ನೀತುಕೃಷ್ಣಳ ಮೃತದೇಹ ಪತ್ತೆಯಾಯಿತು. ವಿಷಯ ತಿಳಿದು ಬದಿಯಡ್ಕ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದರು. ಶ್ವಾನ ದಳ ಮನೆಗೆ ತೆರಳಿ ತನಿಖೆ ನಡೆಸಿತು.

ಮೃತದೇಹವನ್ನು ಸಮಗ್ರ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಾಲ್ಕು ದಿನಗಳ ಹಿಂದೆ ಊರಿಗೆ ತೆರಳುವುದಾಗಿ ತಿಳಿಸಿದ್ದ ಆಂಟೋ ಇದೀಗ ನಾಪತ್ತೆಯಾಗಿರುವುದು ನಿಗೂಢತೆಗೆ ಕಾರಣವಾಗಿದೆ.

ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕಾಗಿ ಮೊದಲು ಆಂಟೋ ಬಂದಿದ್ದ. ಬಳಿಕ ಒಂದೂವರೆ ತಿಂಗಳ ಹಿಂದೆ ನೀತು ಕೃಷ್ಣಳನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದ. ಈ ವೇಳೆ ಈಕೆ ತನ್ನ ಪತ್ನಿಯೆಂದು ಹೇಳಿಕೊಂಡಿದ್ದ. ಇವರ ಮಧ್ಯೆ ನಿತ್ಯ ಜಗಳ ನಡೆಯುತ್ತಿತ್ತೆಂದು ಸ್ಥಳೀಯರು ಹೇಳಿದ್ದಾರೆ. ಕಳೆದ ಶುಕ್ರವಾರ ಸಂಜೆಯೂ ಇವರ ಮಧ್ಯೆ ಜಗಳ ನಡೆದಿತ್ತು. ಆನಂತರ ನೀತು ಹೊರಗೆ ಕಂಡಿಲ್ಲ. ನೀತು ಕೃಷ್ಣಳಿಗೆ ಈ ಹಿಂದೆ ವಿವಾಹವಾಗಿದ್ದು, ಪ್ರಜಿ ಏಕ ಪುತ್ರಿ. ಮೊದಲ ಪತಿ ಮೃತಪಟ್ಟ ಬಳಿಕ ನಾಲ್ಕು ವರ್ಷಗಳಿಂದ ಈಕೆ ಆಂಟೋ ಜತೆಗಿದ್ದಾಳೆ.

ಸಲಿಂಗರತಿ ಕಿರುಕುಳ : ಫೋಕ್ಸೋ ಕೇಸು ದಾಖಲು

ಕಾಸರಗೋಡು: 13 ರ ಹರೆಯದ ಮದ್ರಸಾ ವಿದ್ಯಾರ್ಥಿಗೆ ಸಲಿಂಗರತಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಸಾ ಅಧ್ಯಾಪಕ ಇಸಾಮ್‌ ಬಾಕ್ಕವಿ ವಿರುದ್ಧ ಕಾಸರಗೋಡು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಫೋಕ್ಸೋ ಕೇಸು ದಾಖಲಿಸಲಾಗಿದೆ.

ತರುಣಿಗೆ ಲೈಂಗಿಕ ಕಿರುಕುಳ : ಆರೋಪಿ ನ್ಯಾಯಾಲಯಕ್ಕೆ ಶರಣು

ಕಾಸರಗೋಡು: 19 ರ ಹರೆಯದ ತರುಣಿಯನ್ನು ವಿವಿಧೆಡೆ ಕರೆದೊಯ್ದು ಸರಣಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಿದ್ಯಾನಗರ ಕಲ್ಲಕಟ್ಟೆ ಹೌಸ್‌ನ ಟಿ.ಎ.ಮುಹಮ್ಮದ್‌ ಸಲೀಂ(26) ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್‌ (1) ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ 10 ಮಂದಿಯನ್ನು ಬಂಧಿಸಲಾಗಿದೆ.

 

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

death

ಬಾವಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

SUICIDE

ಕವಯಿತ್ರಿ ಶ್ವೇತಾ ಕಜೆ ಆತ್ಮಹತ್ಯೆ

ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

criಕಾಸರಗೋಡು ಅಪರಾಧ ಸುದ್ಧಿಗಳು

ಕಾಸರಗೋಡು ಅಪರಾಧ ಸುದ್ಧಿಗಳು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್