ಬಿಂಕದ ಸಿಂಗಾರಿ ಈ ಕೆಂಪು ಸುಂದರಿ.


Team Udayavani, May 14, 2019, 5:20 PM IST

may

ಬದಿಯಡ್ಕ : ಎಪ್ರಿಲ್‌ ಮೇ ತಿಂಗಳು ಬಂತೆಂದರೆ ಎಲ್ಲೆಲ್ಲೂ ಜನರ ಹಾಹಾಕಾರ. ಒಂದೆಡೆ ನೀರಿನ ಸಮಸ್ಯೆಯಾದರೆ ಇನ್ನೊಂದೆಡೆ ಸುಡುಬಿಸಿಲಿನ ಸಮಸ್ಯೆ. ಹೊರಗಿಳಿಯಲೂ ಹಿಂದೇಟು ಹಾಕುವ ಸಾಮಾನ್ಯ ಜನರ ಮನದ ಬೇಗುದಿಯನ್ನು ಕ್ಷಣಕಾಲ ತಣಿಸುವ ಶಕ್ತಿ ಇರುವುದು ಎಪ್ರಿಲ್‌ ಮೇ ತಿಂಗಳಲ್ಲಿ ಅರಳುವ ಸುಂದರವಾದ ಹೂಗಳಿಗೆ ಮಾತ್ರ. ಅದರಲ್ಲೂ ಮೇ ಮಾಸದಲ್ಲಿ ಪ್ರಕೃತಿ ಬಣ್ಣ ಬಣ್ಣದ ಹೂಗಳಿಂದ ಕಂಗೊಳಿಸುತ್ತಾಳೆ. ಸೂರ್ಯನ ಬಿಸಿಲಿಗೆ ಮೈಯೊಡ್ಡಿ ಬೀಸುವ ಗಾಳಿಗೆ ತಲೆದೂಗುವ ಈ ಚೆಲುವೆಯರು ಬಿಸಿಲಿನ ಬೇಗೆಯನ್ನೇ ಆಶ್ರಯಿಸಿ ನಗು ಚೆಲ್ಲುತ್ತಾರೆ. ಈ ಹೂಗಳ ಮಧ್ಯೆ ತನ್ನ ಬಣ್ಣ ಹಾಗೂ ಆಕೃತಿಯಿಂದ ಸೆಳೆಯುವ ಹೂಗಳಲ್ಲಿ ಮೇ ಪ್ಲವರ್ ಕೂಡಾ ಒಂದು.

ಉರಿಬಿಸಿಲಿಗೆ ಮರಗಳೆಲ್ಲ ಎಲೆ ಉದುರಿಸಿ ಬೋಳಾಗಿ ನಿಂತಾಗ ಭಾರತದಲ್ಲಿ ಮೇ ಪ್ಲವರ್ ಎಂದೇ ಕರೆಯಲ್ಪಡುವ ಗುಲ್‌ ಮೊಹರ್‌ ಮರವು ಮಾತ್ರ ತಣ್ಣಗೆ ಹೂಬಿಟ್ಟು ಕಣ್ಮನ ತಣಿಸುತ್ತದೆ. ಬೆತ್ತಲಾದ ಮರಕ್ಕೆ ಕೆಂಪು ಬಟ್ಟೆ ಹೊದಿಸಿದಂತೆ ಮರದ ತುಂಬಾ ಅರಳಿನಗುವ ಗುಲ್‌ ಮೊಹರ್‌ನ ಚೆಲುವು ಅವರ್ಣನೀಯ. ಹಾಗೆಯೇ ಎಲ್ಲಾ ಮನಸ್ಥಿತಿಯ ಜನರೂ ಒಮ್ಮೆ ಕತ್ತೆತ್ತಿ ನೋಡುವಂತೆ ಮಾಡುವ ಏಕೈಕ ಹೂ ಮೇ ಪ್ಲವರ್ .

ಇದೀಗ ಎಲ್ಲೆಲ್ಲೂ ಕೆಂಪು ಕಡುಕೇಸರಿ ಬಣ್ಣದ ಹೂಗಳಿಂದ ಕಂಗೊಳಿಸುವ ಮರಗಳನ್ನು ಕಾಣಬಹುದು. ರಸ್ತೆಯ ಇಕ್ಕೆಲಗಳಲ್ಲಿ, ಶಾಲೆ ಕಾಲೇಜುಗಳ ಆವರಣದಲ್ಲಿ, ಅರಣ್ಯ ಪ್ರದೇಶಗಳಲ್ಲಿ ಬೀಸುವ ಗಾಳಿಗೆ ಬೆಡಗುಬಿನ್ನಾಣದಿಂದ ನಲಿದಾಡುವ ಮೇ ಪ್ಲವರ್ ಸೌಂದರ್ಯ ಹಾಗೂ ತನ್ನ ಆಕರ್ಷಣೀಯ ಚೆಲುವಿನಿಂದ ಇಡೀ ಪ್ರದೇಶಕ್ಕೆ ಹೊಸರಂಗು ತುಂಬುತ್ತದೆ. ಅಂತೆಯೇ ಬಿಸಿಲಿನ ಬೇಗೆಯಲಿ ಬೇಯುವ ಮನಸಿಗೆ ಸ್ವಲ್ಪ ತಂಪಿನ ಅನುಭವವನ್ನು ನೀಡುತ್ತದೆ. ಕೆಂಬಣ್ಣದ ಹೂವನ್ನು ಮುಡಿದು ಕಂಗೊಳಿಸುವ ಮೇ ಪ್ಲವರ್ ಮರದ ಚೆಲುವನ್ನು ಸೆರೆಹಿಡಿಯದ ಛಾಯಾಗ್ರಾಹಕರಿಲ್ಲಾ, ವರ್ಣಿಸದ ಕವಿ ಹೃದಯಗಳಿಲ್ಲಾ. ಕಣ್ಣಲ್ಲಿ ತುಂಬಿಕೊಳ್ಳದ ನೋಡುಗನಿಲ್ಲಾ.

ಸುಡು ಬಿಸಿಲ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ನೋಡುವ ಕಪ್ಪು ಮೋಡಗಳು, ಉದುರಿ ಹೋಗುವ ನಾಲ್ಕು ಹನಿಗಳಂತೆ ಪ್ರಕೃತಿಯ ವಿಸ್ಮಯಗಳಲ್ಲಿ ಇದೂ ಒಂದು. ಬಾನಲ್ಲಿ ರಂಗಿನೋಕುಳಿ ಚೆಲ್ಲಿ ನೆಲದ ಮೇಲೆಲ್ಲಾ ಉದುರಿದ ಹೂದಳಗಳು ಬಿಡಿಸುವ ರಂಗವಲ್ಲಿ. ಹೂಹಾಸಿಗೆಯ ಅಂದ ಮಾತಿಗೆ ನಿಲುಕದು. ಚಿತ್ತಾಕರ್ಷಕ ಹೂಗೊಂಚಲುಗಳ ರಾಶಿ ಕಣ್ಣಿಗೆ ಹಬ್ಬ. ಮಡಗಾಸ್ಕರ್‌ ಮೂಲದ ಈ ಮರ ಕಡಿಮೆ ಎತ್ತರದಲ್ಲಿ ಅಗಲವಾಗಿ ಹರಡಿ ನಿಲ್ಲುತ್ತದೆ. ಗ್ರಾಮೀಣ ಭಾಷೆಯಲ್ಲಿ ಕತ್ತಿಕಾಯಿ ಎಂದು ಕರೆಯುವ ಈ ಮರದ ವೈಜ್ಞಾನಿಕ ಹೆಸರು ಡಿಲೊನಿಕ್ಸ್‌ ರೆಜಿಯ. ಗುಲ್‌ ಮೊಹರ್‌ ಎನ್ನುವುದು ಉರ್ದು ಭಾಷೆಯ ಪದ. ಎಪ್ರಿಲ್‌ ಮೇ ತಿಂಗಳಲ್ಲಿ ಮೊಗ್ಗು ಬಿಡಲು ಪ್ರಾರಂಭವಾಗುತ್ತದೆ. ಕತ್ತಿಯಂತಿರುವ ಕೋಡಿನ ತುಂಬೆಲ್ಲಾ ಬಿತ್ತುಗಳನ್ನು ಕಾಣಬಹುದು.

ಗ್ರಾಮೀಣ ಪ್ರದೇಶದಲ್ಲಿ ಕೆಲವು ಕಡೆ ಈ ಹೂಗಳನ್ನು ಬಳಸಿ ಚಪ್ಪರವನ್ನು ಅಲಂಕರಿಸುವುದೂ ಇದೆ. ಇಲ್ಲಿನ ಮಕ್ಕಳಿಗಂತೂ ಈ ಹೂವಿನ ಮೊಗ್ಗು ಹೂಗಳನ್ನು ಆಟದಲ್ಲಿ ಬಳಸುವುದೇ ಒಂದು ಗಮ್ಮತ್ತು. ಮುಂಜಾನೆ ಹಾಗೂ ಮುಸ್ಸಂಜೆಯ ರವಿಕಿರಣ ಈ ಹೂವಿನಂದವನ್ನು ಇಮ್ಮಡಿಗೊಳಿಸುತ್ತದೆ. ಅಂತೆಯೇ ನಿಸರ್ಗಪ್ರಿಯರಿಗೆ ಕವಿ ಹೃದಯರಿಗೆ ಸದಾ ಪ್ರೇರಣಾಶಕ್ತಿಯೂ ಹೌದು. ಫಳ ಫಳ ಹೊಳೆಯುವ ಕೆಂಪನೆ ಹೂಗಳ ಆಹ್ಲಾದಮಯ ಆಸರೆ ನೀಡುವ ತಂಪಾದ ಅನುಭವ ಹಾಗೂ ಮೈದುಂಬಿ ನರ್ತಿಸುವ ಈ ವೃಕ್ಷಗಳು ಜಗತ್ತಿನೆಲ್ಲ ಸೌಂದರ್ಯವನ್ನು ಹೀರಿಕೊಂಡು ಬಿಂಕದಿಂದ ಬೀಗುವಂತೆ ಭಾಸವಾಗುತ್ತದೆ.

ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.