ಬೇಕಲ ಕೋಟೆ ರಸ್ತೆ ನವೀಕರಣ: ಸರಕಾರದಿಂದ ಹಸಿರು ನಿಶಾನೆ


Team Udayavani, Jun 20, 2019, 5:50 AM IST

19KSDE3

ಬೇಕಲಕೋಟೆಗೆ ಸಾಗುವ ದಾರಿಯಲ್ಲಿ ನಿರ್ಮಾಣವಾಗಲಿರುವ ಮಹಾದ್ವಾರದ ನೀಲನಕ್ಷೆ

ಕಾಸರಗೋಡು: ಇತಿಹಾಸ ಪ್ರಸಿದ್ಧ ಹಾಗೂ ವಿಶ್ವ ಭೂಪಟದಲ್ಲಿ ಸ್ಥಾನ ಪಡೆದಿರುವ ಪ್ರವಾಸಿ ಕೇಂದ್ರವಾದ ಬೇಕಲ ಕೋಟೆ ರಸ್ತೆ ನವೀಕರಣಕ್ಕೆ ಸರಕಾರ ಹಸಿರು ನಿಶಾನೆ ತೋರಿದೆ. ರಸ್ತೆ ನವೀಕರಣ ಮತ್ತು ಅನುಬಂಧ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ಒಂದು ಕೋಟಿ ರೂ. ಮಂಜೂರು ಮಾಡಿದೆ.

ಕೋಟೆ ರಸ್ತೆ ನವೀಕರಣಕ್ಕಾಗಿ ಕೆ.ಎಸ್‌.ಟಿ.ಪಿ. 2.65 ಕೋಟಿ ರೂ. ಮಂಜೂರು ಮಾಡಿದ್ದು, ಇದಕ್ಕೆ ಹೊರತಾಗಿ ಪ್ರವಾಸೋದ್ಯಮ ಇಲಾಖೆ ಒಂದು ಕೋಟಿ ರೂ. ಮಂಜೂರು ಮಾಡಿದೆ.

ಬೇಕಲ ಕೋಟೆಗೆ ಪ್ರವೇಶಿಸುವ ರಸ್ತೆ ಆರಂಭವಾಗುವ ಸ್ಥಳದಲ್ಲಿ ಮನೋಹರವಾದ ಸ್ವಾಗತ ಕಮಾನು, ಕೋಟ್ಟಕುನ್ನಿನಲ್ಲಿ ಅತ್ಯಾಧುನಿಕ ರೀತಿಯ ಬಸ್‌ ತಂಗುದಾಣ ಸಹಿತ ಶೌಚಾಲಯ, ವ್ಯಾಪಾರ ಸಂಸ್ಥೆಗಳ ನಿರ್ಮಾಣ, ಕೋಟೆಗೆ ಹೋಗುವ ರಸ್ತೆಯ ಇಬ್ಬದಿಗಳಲ್ಲಿರುವ ಗೋಡೆ ಪುನರ್‌ ನಿರ್ಮಾಣ, ಕೋಟೆಯ ಸಮೀಪದ ಜಂಕ್ಷನ್‌ನಲ್ಲಿ ಹೈಮಾಸ್ಟ್‌ ಲೈಟ್‌ಗಳನ್ನು ಸ್ಥಾಪಿಸಲಾಗುವುದು.

ರಸ್ತೆಗೆ ದಾರಿ ದೀಪ, ಕೋಟೆಯ ಮುಂಭಾಗದಲ್ಲಿ ಕುಳಿತುಕೊಳ್ಳಲು ಪೀಠೊಪಕರಣಗಳ ಸ್ಥಾಪನೆ, 7 ಮೀಟರ್‌ ಅಗಲದ ರಸ್ತೆ ನಿರ್ಮಾಣ, ರಸ್ತೆಯ ಇಕ್ಕೆಲಗಳಲ್ಲಿ ಒಂದೂವರೆ ಮೀಟರ್‌ ಅಗಲದಲ್ಲಿ ರಕ್ಷಣಾ ಬೇಲಿ ಸಹಿತ ಕಾಲು ದಾರಿ, ಚರಂಡಿ ವ್ಯವಸ್ಥೆ, ಕಾಲುದಾರಿಗೆ ಟೈಲ್ಸ್ ಅಳವಡಿಸಲಾಗುವುದು.

ಜಿಲ್ಲಾ ಟೂರಿಸಂ ಪ್ರಮೋಷನ್‌ ಕೌನ್ಸಿಲ್ನ ನೇತೃತ್ವದಲ್ಲಿ 99,94,176 ರೂ. ಯೋಜನೆಯನ್ನು ತಯಾರಿಸಿ ಪ್ರವಾಸೋದ್ಯಮ ಇಲಾಖೆಗೆ ಎರಡು ವರ್ಷಗಳ ಹಿಂದೆ ಹಸ್ತಾಂತರಿಸಲಾಗಿತ್ತು. ಕೆಎಸ್‌ಟಿಪಿ ನೇತೃತ್ವದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿ ಪೂರ್ತಿಗೊಳಿಸಿದ ಬಳಿಕ ಇತರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರಕಾರದ ಆಡಳಿತಾನುಮತಿ
ಕಾಮಗಾರಿ, ಕನ್‌ಸಲೆrನ್ಸಿ ಫೀಸ್‌, ತೆರಿಗೆ ಸಹಿತ 99,94,000 ರೂ. ಯೋಜನೆಗೆ ಸರಕಾರ ಆಡಳಿತಾನುಮತಿ ನೀಡಿದೆ. ಯೋಜನೆ ಪ್ರದೇಶ ಲೋಕೋಪಯೋಗಿ ಇಲಾಖೆಯ ಸ್ವಾಧೀನದಲ್ಲಿದೆ. ಯೋಜನೆಯ ನಿರ್ಮಾಣ ಜವಾಬ್ದಾರಿ ಯನ್ನು ಕಾಸರಗೋಡು ಡಿಟಿಪಿಸಿ ವಹಿಸಿಕೊಂಡಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.