ವಿವಿ ಕಲೋತ್ಸವದಲ್ಲಿ ಸತತ 4ನೇ ಬಾರಿ ಸಹನಾ ಶೆಟ್ಟಿ ಅತ್ಯುತ್ತಮ ನಟಿ


Team Udayavani, Feb 23, 2017, 3:57 PM IST

actress.jpg

ಕಾಸರಗೋಡು: ಪ್ರೇಕ್ಷಕರಿಗೆ ರಸದೌತಣ ಉಣಬಡಿಸಿ  ಈ ಬಾರಿಯೂ  ಕಣ್ಣೂರು ವಿ.ವಿ. ಕಲೋತ್ಸವದಲ್ಲಿ ಸಿ.ಎನ್‌. ಸಹನಾ ಶೆಟ್ಟಿ ಅವರ ನಟನೆ ಸಭಾಂಗಣವನ್ನು ಮೈನವಿರೇಳಿಸಿತು.

ಪೊವ್ವಲ್‌ ಎಲ್‌ಬಿಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಈ ಸಾಲಿನ ಕಣ್ಣೂರು ವಿವಿ ಕಲೋತ್ಸವದಲ್ಲಿ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ದ್ವಿತೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಸಹನಾ ಶೆಟ್ಟಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡು ಅತ್ಯುತ್ತಮ ನಟಿ ಕಿರೀಟವನ್ನು ಪಡೆದುಕೊಂಡಿದ್ದಾರೆ. ಸಹನಾ ಶೆಟ್ಟಿಗೆ ವಿವಿ ಕಲೋತ್ಸವದಲ್ಲಿ ಇದು ಸತತ ನಾಲ್ಕನೇ ಬಾರಿ ಅತ್ಯುತ್ತಮ ನಟನೆಗಾಗಿ ಪ್ರಶಸ್ತಿ ಲಭಿಸಿರುವುದು. ಕನ್ನಡ, ತುಳು, ಮಲಯಾಳ ಭಾಷೆ ಬಲ್ಲ ಈ ಪ್ರತಿಭೆ ಭಾಷೆ ಯಾವುದೇ ಆಗಲಿ ನಟನೆಗೆ ಸೈ ಎಂದೆನಿಸಿಕೊಂಡಿದ್ದಾರೆ. ತುಳು ನಾಟಕಗಳಲ್ಲೂ ಅಭಿನಯಿಸುವ ಮೂಲಕ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ದ್ವಿತೀಯ ವರ್ಷ ಕನ್ನಡ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ವಿವಿ ಕಲೋತ್ಸವದ ಕನ್ನಡ ನಾಟಕ  ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಲಭಿಸಿತ್ತು. ಅಂದು 2013-14ನೇ ಶೆ„ಕ್ಷಣಿಕ ವರ್ಷ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ನಾಟಕ ತಂಡ ಪ್ರದರ್ಶಿಸಿದ ಹೆಣ್ಣು ಸಮಾಜದ ಕಣ್ಣು ನಾಟಕದಲ್ಲಿ ಸಹನಾ ಅಭಿಯಿಸಿದ ನೀಲಿ ಪಾತ್ರ ತೀರ್ಪುಗಾರರ ಮೆಚ್ಚುಗೆಯನ್ನು  ಪಡೆದಿತ್ತು. 2014-15ನೇ ಸಾಲಿನಲ್ಲಿ ವಿವಿ ಕಲೋತ್ಸವದಲ್ಲಿ ಜೇಡರ ಬಲೆ ನಾಟಕದಲ್ಲಿ ಸಹನಾ ಪಾತ್ರದಲ್ಲಿ ಅಭಿನಯಿಸಿ ಅತ್ಯುತ್ತಮ ನಟಿಯಾಗಿ ಆಯ್ಕೆಯಾಗಿದ್ದರು.

ಕಾಸರಗೋಡು ಸರಕಾರಿ ಕಾಲೇಜಿನಲ್ಲಿ  ಸ್ನಾತಕೋತ್ತರ ಪದವಿ ವ್ಯಾಸಂಗ ಮುಂದುವರಿಸಿದ ಸಹನಾ 2015-16ನೇ ಶೆ„ಕ್ಷಣಿಕ ವರ್ಷ ತಲಶ್ಯೆàರಿಯಲ್ಲಿ ನಡೆದ ಕಲೋತ್ಸವದಲ್ಲಿ ಕಾಸರಗೋಡು  ಸರಕಾರಿ ಕಾಲೇಜಿನ ಕನ್ನಡ ನಾಟಕ ತಂಡ ಪ್ರದಶಿರ್ಸಿದ ದಂಪತಿಗಳು ನಾಟಕದಲ್ಲಿ ರಮ್ಯಾ ಪಾತ್ರವನ್ನು ನಿರ್ವಹಿಸಿದರು.  ಸಮಾಜದಲ್ಲಿ ಸ್ತ್ರೀ ಪಾತ್ರವನ್ನು ಕೇಂದ್ರೀಕರಿಸಿ ಹೆಣೆದ ನಾಟಕದಲ್ಲಿ ಸಹನಾಳ ನಟನೆ ಅತ್ಯುತ್ತಮವಾಗಿ ಪ್ರಶಂಸೆಯನ್ನು ತಂದುಕೊಟ್ಟಿತ್ತು.

ಈ ಬಾರಿ ಪೊವ್ವಲ್‌ನ ಎಲ್‌ಬಿಎಸ್‌ ಕಾಲೇಜಿನಲ್ಲಿ ನಡೆದ ವಿವಿ ಕಲೋತ್ಸವದಲ್ಲಿ ಸೋಮವಾರ ರಾತ್ರಿ ಕಾಸರಗೋಡು ಸರಕಾರಿ ಕಾಲೇಜು ತಂಡ ಪ್ರದರ್ಶಿಸಿದ  ಮನೋ ಮƒಗ ಕನ್ನಡ ನಾಟಕಲ್ಲಿ ಸಹನಾಳ ಅಭಿನಯಕ್ಕೆ ತಕ್ಕ ಫಲವೆಂಬಂತೆ ಅತ್ಯುತ್ತಮ ನಟಿಯಾಗಿ ಆಯ್ಕೆಯಾಗಿದ್ದಾರೆ.

ಶಾಲಾ ದಿನಗಳಲ್ಲೇ ನಟನೆಯಲ್ಲಿ ವಿಶೇಷ ಆಸಕ್ತಿ ತೋರಿಸಿದ್ದ ಸಹನಾರಿಗೆ ರಂಗಭೂಮಿ ಎಂದರೆ ಅಚ್ಚುಮೆಚ್ಚು. ಬೋವಿಕ್ಕಾನ ಬಿಎಆರ್‌ಎಚ್‌ಎಸ್‌ ಶಾಲೆಯ ಹಳೆ ವಿದ್ಯಾರ್ಥಿನಿಯಾದ ಸಹನಾ ಪಾಡಿಯ ನಾರಾಯಣ ಶೆಟ್ಟಿ ಹಾಗೂ ಸುಗುಣ ದಂಪತಿಯ ಪುತ್ರಿಯಾಗಿದ್ದಾರೆ. ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ಸಾಹಿತ್ಯಕ-ಸಾಂಸ್ಕೃತಿಕ ವೇದಿಕೆಯಾದ ಸ್ನೇಹರಂಗದ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಹನಾ ಕಲಿಕೆಯಲ್ಲಿ ಇನ್ನಷ್ಟು ಸಾಧನೆಯ ಹಾದಿಯಲ್ಲಿದ್ದಾರೆ.

2016-17ನೇ ಶೈಕ್ಷಣಿಕ ವರ್ಷದ ಕಣ್ಣೂರು ವಿವಿ ಕಲೋತ್ಸವದ ಕಾಸರಗೋಡು ಸರಕಾರಿ ಕಾಲೇಜು ತಂಡ ಪ್ರದರ್ಶಿಸಿದ ಮನೋಮƒಗ ನಾಟಕವನ್ನು ಸದಾಶಿವ ಮಾಸ್ತರ್‌  ಪೊಯೆÂ ನಿರ್ದೇಶಿಸಿದ್ದಾರೆ. ಸಹನಾ ಸಹಿತ ಪವಿತ್ರ ಇ., ರಂಜಿನಿ ಸಿ.,  ಜೇಷ್ಮಾ ಲೋಬೋ, ರಾಜರಾಮ ಪಿ., ಪ್ರದೀಪ್‌ ಕುಮಾರ್‌, ಶಿಹಾಬ್‌, ಅಕ್ಷತಾ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.