ಬಿಜೆಪಿ ಕಾರ್ಯಕರ್ತರ ಬಸ್‌ಗಳಿಗೆ ಕಲ್ಲೆಸೆತ: ಹಲವರಿಗೆ ಗಾಯ


Team Udayavani, Oct 5, 2017, 12:19 PM IST

05-29.jpg

ಕಾಸರಗೋಡು: ಬಿಜೆಪಿಯ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡು ಪಯ್ಯನ್ನೂರಿನಿಂದ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರು ವಾಹನಗಳಿಗೆ ವ್ಯಾಪಕ ಕಲ್ಲೆಸೆತ ನಡೆದಿದ್ದು, ಪಡನ್ನಕ್ಕಾಡ್‌ನ‌ಲ್ಲಿ ಕಲ್ಲೆಸೆತದಿಂದ ಕಾಸರಗೋಡು ನಗರಸಭೆಯ ಮಾಜಿ ಕೌನ್ಸಿಲರ್‌ ಹಾಗೂ ಇನ್ನೋರ್ವ ಕಾರ್ಯಕರ್ತ ಕಿಶೋರ್‌ ಗಾಯಗೊಂಡಿದ್ದಾರೆ.

ಬದಿಯಡ್ಕ, ಪಳ್ಳತ್ತಡ್ಕ, ಕುಂಬಾಜೆ, ಮುಳ್ಳೇರಿಯ, ನೀರ್ಚಾಲು, ವರ್ಕಾಡಿ ಸಹಿತ ಜಿಲ್ಲೆಯ ವಿವಿಧೆಡೆಗಳಿಂದ ತೆರಳಿದ ಬಿಜೆಪಿ ಕಾರ್ಯಕರ್ತರ ಬಸ್‌ಗಳಿಗೆ ಕಲ್ಲೆಸೆಯಲಾಗಿದೆ. ಕಾಸರಗೋಡಿನಿಂದ ನೀಲೇಶ್ವರ ಮಧ್ಯೆ ಕಲ್ಲೆಸೆತ ನಡೆದಿದ್ದು, ವಾಹನಗಳಿಗೆ ವ್ಯಾಪಕ ನಾಶನಷ್ಟ ಸಂಭವಿಸಿದೆ. ಹಲವರು ಗಾಯಗೊಂಡಿದ್ದಾರೆ. ವರ್ಕಾಡಿ ಭಾಗಕ್ಕೆ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರು ಸಂಚರಿಸಿದ ಮೂರು ಬಸ್‌ಗಳಿಗೆ ನೀಲೇಶ್ವರ, ಚಂದ್ರಗಿರಿ ಹಾಗೂ ಉದುಮದಲ್ಲಿ ಕಲ್ಲೆಸೆಯಲಾಗಿದೆ. ಉದುಮದಲ್ಲಿ ಪೊಲೀಸರ ಕಣ್ಮುಂದೆಯೇ ಆರು ಮಂದಿಯ ತಂಡ ಕಲ್ಲೆಸೆದು ಪರಾರಿಯಾಗಿದ್ದಾಗಿ ದೂರಲಾಗಿದೆ. ನೀಲೇಶ್ವರ ಬಳಿ ನಡೆದ ಕಲ್ಲೆಸೆತದಿಂದ ಪಳ್ಳತ್ತಡ್ಕ ನಿವಾಸಿಯೊಬ್ಬರು ಗಾಯಗೊಂಡಿದ್ದಾರೆ. ಕಾಸರಗೋಡು ಬಳಿಯ ಚಳಿಯಂಗೋಡಿನಲ್ಲಿ ಬಸ್ಸೊಂದಕ್ಕೆ ಕಲ್ಲೆಸೆಯಲಾಗಿದೆ. ಅದರಿಂದ ಅನಂತರ ಬಂದ ವಾಹನಗಳನ್ನು ಇಲ್ಲಿ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ತಂಡವೊಂದು ಕಲ್ಲೆಸೆದಿದೆ. ಇದರಿಂದ ಗಾಜು ಪುಡಿಯಾಗಿದೆ. ಸುಮಾರು 5 ಸಾವಿರ ರೂ. ನಷ್ಟವಾಗಿದೆ. ಸ್ಥಳಕ್ಕೆ ಧಾವಿಸಿದ ಬೇಕಲ ಪೊಲೀಸರು ಅಲ್ಲಿ ಗುಂಪು ಗೂಡಿದ್ದ ಜನರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಚೆರ್ವತ್ತೂರಿನಲ್ಲಿ ಕೆಎಎಚ್‌ ಆಸ್ಪತ್ರೆಗೂ ಕಲ್ಲೆಸೆದು ಹಾನಿಗೊಳಿಸಲಾಗಿದೆ. ದುಷ್ಕರ್ಮಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇಲ್ಲಿ ನಾರಾಯಣನ್‌ ಅವರ ಅಂಗಡಿಗೂ ಹಾನಿಗೊಳಿಸಲಾಗಿದೆ. ಇಲ್ಲಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಕಲ್ಲೆಸೆದು ಗಾಜು ಪುಡಿ ಮಾಡಲಾಗಿದೆ. ಚೆರ್ವತ್ತೂರು ಬಸ್‌ ನಿಲ್ದಾಣ ಬಳಿ ಆಟೋ ಸ್ಟಾಂಡ್ಡ್‌ನ‌ಲ್ಲಿರಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಫ್ಲೆಕ್ಸ್‌ ಬೋರ್ಡ್‌ಗೆ ಹಾನಿ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು.
ಕರಿವೆಳ್ಳೂರು ಪೇಟೆಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ನ ಎಟಿಎಂ ಕೌಂಟರ್‌ಗೆ ಹಾನಿ ಮಾಡಲಾಗಿದೆ. ಕರಿವೆಳ್ಳೂರು ಟೆಲಿಫೋನ್‌ ಎಕ್ಸ್‌ಚೇಂಜ್‌ಗೆ ಕಲ್ಲೆಸೆದು ಗಾಜು ಪುಡಿ ಮಾಡಲಾಗಿದೆ. ಹಲವು ಮನೆಗಳಿಗೆ ಕಲ್ಲೆಸೆದು ಹಾನಿ ಮಾಡ‌ಲಾಗಿದೆ.

ಬಿಜೆಪಿ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಬಸ್‌ಗಳಿಗೆ ಪಡನ್ನಕ್ಕಾಡ್‌ನ‌ಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆತದಿಂದ ಕಾಸರಗೋಡನ ನಗರಸಭೆಯ ಮಾಜಿ ಕೌನ್ಸಿಲರ್‌ ಗಾಯಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತ ಕಿಶೋರ್‌ ಸಹಿತ ಹಲವರು ಗಾಯಗೊಂಡಿದ್ದಾರೆ. ಸಿಪಿಎಂ ಕಾರ್ಯಕರ್ತರು ಕಲ್ಲೆಸೆದಿರುವುದಾಗಿ ಆರೋಪಿಸಲಾಗಿದೆ. ಕಲ್ಲೆಸೆದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಹೆದ್ದಾರಿ ತಡೆಯೊಡ್ಡಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.