“ರಕ್ತದಾನ ಹೃದಯಗಳನ್ನು ಬೆಸೆಯುತ್ತದೆ’
Team Udayavani, Jun 16, 2019, 6:10 AM IST
ಹೊಸಂಗಡಿ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಚೂಂತಾರು ಸರೋಜಿನಿ ಭಟ್ ಪ್ರತಿಪಾuನ ಇದರ ಆಶ್ರಯದಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಕಾರದೊಂದಿಗೆ ಹೊಸಂಗಡಿ ಸುರûಾ ದಂತ ಚಿಕಿತ್ಸಾಲಯದಲ್ಲಿ ರಕ್ತದಾನ ಶಿಬಿರ ಶುಕ್ರವಾರ ನಡೆಯಿತು.
ಶಿಬಿರ ಉದ್ಘಾಟಿಸಿದ ಸಾಮಾಜಿಕ ಮುಂದಾಳು ಗೋಪಾಲ ಶೆಟ್ಟಿ ಅರಿಬೈಲು ಮಾತನಾಡಿ, ರಕ್ತದಾನ ಬಹಳ ಪವಿತ್ರವಾದ ದಾನವಾಗಿದ್ದು, ರಕ್ತದಾನದಿಂದ ಮಾತ್ರ ಹೃದಯಗಳನ್ನು ಬೆಸೆಯಲು ಸಾಧ್ಯ ಎಂದರು.
ಶ್ರೀ ಬ್ರಾಹ್ಮರಿ ಸಮಾಜ ಸೇವಾ ಸಂಸ್ಥೆಯ ಸಂಸ್ಥಾಪಕ ಸುಖೇಶ್ ಬೆಜ್ಜ, ಕಲ್ಲೂರು ಎಜುಕೇಶನ್ ಟ್ರಸ್ಟ್ ನ ಅಬ್ದುಲ್, ಮಂಜೇಶ್ವರ ಯೂತ್ ಮುಸ್ಲಿಂ ಲೀಗ್ ಉಪಾಧ್ಯಕ್ಷ ರಫೀಕ್ ಯು.ಎಮ್, ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈಧ್ಯಾಧಿಕಾರಿ ಶರತ್ ರಾವ್, ಹಿರಿಯ ತಾಂತ್ರಿಕ ತಜ್ಞ ಆಂಟೋನಿ, ಅಶೋಕ್, ಲತಾ ಮುಂತಾದವರು ಉಪಸ್ಥಿತರಿದ್ದರು.
ಚೂಂತಾರು ಸರೋಜಿನಿ ಪ್ರತಿಷ್ಠಾನ ಕಾರ್ಯದರ್ಶಿ ಡಾ| ಮುರಲೀ ಮೋಹನ್ ಚೂಂತಾರು ಪ್ರಾಸ್ತವಿಕವಾಗಿ ಮಾತನಾಡಿದರು. ವೆನ್ಲಾಕ್ ಆಸ್ಪತ್ರೆಯ ವೈದ್ಯರು ಮತ್ತು ತಂತ್ರಜ್ಞರು ಈ ಶಿಬಿರವನ್ನು ನಡೆಸಿಕೊಟ್ಟರು. ಬೆಳಗ್ಗೆ 10ರಿಂದ 1 ಗಂಟೆಯ ವರೆಗೆ ನಡೆದ ಈ ಶಿಬಿರದಲ್ಲಿ ಸುಮಾರು 22 ಮಂದಿ ರಕ್ತದಾನ ಮಾಡಿದರು.
ಸುರûಾ ದಂತ ಚಿಕಿತ್ಸಾಲಯದ ರಮ್ಯ, ರಶ್ಮಿ, ರೋಹಿಣಿ, ಯಶಸ್ವಿನಿ ಮತ್ತು ವಾಣಿ ಉಪಸ್ಥಿತರಿದ್ದರು. ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳಿಗೆ ರಕ್ತದಾನ ಜೀವದಾನ ಎಂಬ ಪುಸ್ತಕವನ್ನು ಉಚಿತವಾಗಿ ಹಂಚಿ ರಕ್ತದಾನದ ಬಗ್ಗೆ ಜಾಗƒತಿ ಮೂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್