ಜಲ ಪ್ರಾಧಿಕಾರದಿಂದ ಬಾಟಲಿ ನೀರು ವ್ಯಾಪಾರ ಯೋಜನೆ

ಆದಾಯ ಹೆಚ್ಚಳಕ್ಕೆ ಸರಕಾರದ ಕ್ರಮ; ಆಗಸ್ಟ್‌ನಿಂದ ಮಾರುಕಟ್ಟೆಗೆ

Team Udayavani, Jun 29, 2019, 5:56 AM IST

Water-a

ಕಾಸರಗೋಡು: ಕೇರಳ ರಾಜ್ಯ ಜಲ ಪ್ರಾಧಿಕಾರಕ್ಕೆ ಹೊಸ ಆದಾಯ ಮಾರ್ಗ ಕಂಡು ಕೊಳ್ಳಲು ಬಾಟಲಿ ನೀರು ವಿತರಿಸುವ ವ್ಯವಸ್ಥೆಗೆ ಸರಕಾರವು ಯೋಜನೆ ರೂಪಿಸಿದೆ. ಅದರಂತೆ ಜಲ ಪ್ರಾಧಿಕಾರದ ಬಾಟಲಿ ನೀರನ್ನು ಮುಂದಿನ ಆಗಸ್ಟ್‌ ತಿಂಗಳಲ್ಲಿ ಮಾರುಕಟ್ಟೆಗಿಳಿಸಲು ನಿರ್ಧರಿಸಲಾಗಿದೆ ಎಂದು ಜಲ ಪ್ರಾಧಿಕಾರವು ತಿಳಿಸಿದೆ.

ಈ ಯೋಜನೆಯನ್ನು ಆರಂಭಿಸುವ ತೀರ್ಮಾನ ವನ್ನು ಈ ಹಿಂದೆಯೇ ಕೈಗೊಳ್ಳಲಾಗಿತ್ತು. ಆದರೆ ಅದಕ್ಕೆ ಹೊಂದಿಕೊಂಡು ಸ್ಥಾಪಿಸಬೇಕಾಗಿರುವ ಕುಡಿಯುವ ನೀರಿನ ಜಲಾಶಯ ಮತ್ತು ಅದಕ್ಕೆ ಅಗತ್ಯದ ಸರ್ಟಿಫಿಕೇಟ್‌ ಲಭಿಸುವ ವಿಚಾರದಲ್ಲಿ ವಿಳಂಬ ಉಂಟಾಗಿತ್ತು. ಆದ್ದರಿಂದ ಸಕಾಲದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂದು ಜಲ ಪ್ರಾಧಿಕಾರವು ಹೇಳಿದೆ.

ಇದೇ ವೇಳೆ ರಾಜ್ಯದ ಜಲಸಂಪನ್ಮೂಲಗಳಿಗೆ ಪಾಯಿಖಾನೆಗಳ ಮಾಲಿನ್ಯವನ್ನು ಬಿಡುವವರ ಮತ್ತು ಇತರ ಕಾರಣಗಳಿಂದ ನೀರನ್ನು ಮಲಿನ ಗೊಳಿಸುವವರ ವಿರುದ್ಧ ಕಠಿನ ಕಾನೂನು ಕ್ರಮ ಗಳನ್ನು ಕೈಗೊಳ್ಳುವ ನಿರ್ಧಾರವನ್ನು ಪ್ರಾಧಿ ಕಾರವು ಕೈಗೊಂಡಿದೆ. ಆ ಮೂಲಕ ಜಲಾಶಯಗಳ ನೀರನ್ನು ಶುದ್ಧಗೊಳಿಸಿ ಬಾಟಲಿ ಗಳಲ್ಲಿ ತುಂಬಿಸ ಲಾಗುವುದು.

ನಷ್ಟದಲ್ಲಿರುವ ಪ್ರಾಧಿಕಾರಕ್ಕೆ ಜೀವಜಲ
ಇತರ ಬಾಟಲಿ ನೀರಿಗಿಂತ‌ ಕಡಿಮೆ ದರದಲ್ಲಿ ಜಲ ಪ್ರಾಧಿ ಕಾರವು ತನ್ನ ಬಾಟಲಿ ನೀರನ್ನು ಮಾರಾಟ ಮಾಡಲು ಉದ್ದೇಶಿಸಿದೆ. ಆ ಮೂಲಕ ನಷ್ಟದ ಹಾದಿಯಲ್ಲಿರುವ ಪ್ರಾಧಿಕಾರಕ್ಕೆ ಆದಾಯ ದೊರಕಿಸುವ ವ್ಯವಸ್ಥೆಗೆ ಸರಕಾರವು ಚಾಲನೆ ನೀಡಿದೆ.

ರಾಜ್ಯದ 14 ಜಿಲ್ಲೆಗಳಲ್ಲಿ ಜಲ ಪ್ರಾಧಿಕಾರವು ತನ್ನ ಬಾಟಲಿ ನೀರನ್ನು ಮಾರುಕಟ್ಟೆಗಿಳಿಸಲು ಯೋಜನೆ ರೂಪಿಸಿದೆ. ಅದರಂತೆ ರಾಜ್ಯಮಟ್ಟದ ಅಧಿಕಾರಿಗಳು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಥಮ ಸುತ್ತಿನ ಮಾತುಕತೆ ಹಾಗೂ ಸಭೆಗಳನ್ನು ನಡೆಸಿದ್ದಾರೆ. ಅಲ್ಲದೆ ಎಲ್ಲ ಜಿಲ್ಲೆಗಳಲ್ಲೂ ಜಲ ಪ್ರಾಧಿಕಾರದ ಬಾಟಲಿ ನೀರಿಗೆ ಮಾರುಕಟ್ಟೆ ಒದಗಿಸುವ ವ್ಯವಸ್ಥೆಗೆ ಆಯಾ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ಜಲ ಪ್ರಾಧಿಕಾರವು ತಿಳಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ
ಜಲಮೂಲಗಳ ಶೋಧ
ಬಾಟಲಿ ನೀರಿಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಲಾಶಯಗಳನ್ನು ಗುರುತಿಸಲಾಗುವುದು. ಬಳಿಕ ಆ ನೀರನ್ನು ಶುದ್ಧೀಕರಣಗೊಳಿಸಿ ಬಾಟಲಿಗಳಿಗೆ ತುಂಬಿಸಲಾಗುವುದು. ಈ ನಿಟ್ಟಿನಲ್ಲಿ ಜಲಮೂಲಗಳನ್ನು ಹುಡುಕುವ ಕಾರ್ಯ ಮೊದಲಿಗೆ ನಡೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಪೂರ್ತಿ ಯಾಗಿದೆ. ಕಾಸರಗೋಡು ಜಿಲ್ಲೆಯಲ್ಲೂ ಜಲಸಂಪನ್ಮೂಲಗಳ ಆಯ್ಕೆ ವಿಚಾರವು ಪ್ರಗತಿಯಲ್ಲಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.