ಮಡಿಕೇರಿ: ತೋಟಕ್ಕೆ ಉರುಳಿದ ಬಸ್… 40 ಮಂದಿಗೆ ಗಾಯ
Team Udayavani, Feb 22, 2023, 5:45 AM IST
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ಉರುಳಿ ಬಿದ್ದು 40 ಮಂದಿ ಗಾಯಗೊಂಡಿರುವ ಘಟನೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿಯ ಕಾವಾಡಿಯಲ್ಲಿ ಸಂಭವಿಸಿದೆ.
ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂನಿಂದ ಕೊಡಗಿನ ವೀರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಫೆ. 20ರ ಮುಂಜಾನೆ 4.30 ಗಂಟೆಯ ವೇಳೆ ಬಸ್ ಕಂದಕಕ್ಕೆ ಉರುಳಿದೆ. ಚಾಲಕ ಸೇರಿದಂತೆ 40 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ವೀರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.