ಜಿಲ್ಲೆಯಲ್ಲಿ ಕಣ್ಣು ಮುಚ್ಚಿವೆ 85 ಸಿಸಿ ಟಿವಿ ಕೆಮರಾಗಳು


Team Udayavani, Feb 10, 2018, 10:00 AM IST

CCTV-Camera-2-600.jpg

ಕಾಸರಗೋಡು: ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ  ಕಾಪಾಡಲು ಮತ್ತು ಅಹಿತಕರ ಕೃತ್ಯಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು ಸ್ಥಾಪಿಸಿದ ಸಿಸಿ ಟಿವಿ ಕೆಮರಾಗಳು ಕಣ್ಣು ಮುಚ್ಚಿವೆ. ಜತೆಗೆ ತನಗೆ ಕೊಟ್ಟ ಕಣ್ಗಾವಲು ಕೆಲಸವನ್ನು  ನಿರ್ವಹಿಸಲು ಅಸಮರ್ಥವಾಗಿ ಸುಮ್ಮನೆ ಕುಳಿತಿವೆ. ಈ ಮೂಲಕ ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳನ್ನು ಎಸಗು ವವರಿಗೆ ಭಾರೀ ವರದಾನ ಸಿಕ್ಕಂತಾಗಿದೆ.

ಕಾಸರಗೋಡು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ 95 ಸಿಸಿ ಟಿವಿ ಕೆಮರಾಗಳನ್ನು  ಅಳವಡಿಸಲಾಗಿದ್ದು, ಅವುಗಳಲ್ಲಿ 10 ಕೆಮರಾಗಳು ಮಾತ್ರವೇ ಇದೀಗ ಕಾರ್ಯಾಚರಿಸುತ್ತಿವೆ. ಈ ಮಧ್ಯೆ 81 ಕೆಮರಾಗಳು ಸಮರ್ಪಕವಾಗಿ ಕಾರ್ಯವೆಸಗದೆ ಮೂರು ವರ್ಷಗಳು ಕಳೆದವು. ಕೊಲೆ ಪ್ರಕರಣಗಳು, ದಾಳಿಗಳು, ಕಳ್ಳತನ ಇತ್ಯಾದಿ ನಿರಂತರ ಸುದ್ದಿಯಾಗುತ್ತಿರುವಾಗ ಸಿಸಿ ಟಿವಿ ಕೆಮರಾಗಳು ಕಾರ್ಯವೆಸಗದಿರುವುದು ಪೊಲೀಸ್‌ ತನಿಖೆಗೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ.

2015ನೇ ಡಿಸೆಂಬರ್‌ ತಿಂಗಳಲ್ಲಿ  ಕೆಲಸ ಮಾಡದ ಸಿಸಿ ಟಿವಿ ಕೆಮರಾಗಳನ್ನು  ದುರಸ್ತಿಗೊಳಿಸಲು ಕೆಲ್ಟ್ರೋನ್‌ ಸಂಸ್ಥೆಯನ್ನು  ಸಂಪರ್ಕಿಸಿ ಯೋಜನೆ ರೂಪಿಸಲಾಗಿತ್ತಾದರೂ, ಬಳಿಕ ದುರಸ್ತಿಗೆ ಯಾವುದೇ ಕ್ರಮ ಆರಂಭಗೊಂಡಿಲ್ಲ. ಕೆಮರಾಗಳ ದುರಸ್ತಿಗೆ ಕೆಲ್ಟ್ರೋನ್‌ ಕೇಳಿದ 30 ಲಕ್ಷ  ರೂಪಾಯಿ ಹೆಚ್ಚಾಯಿತು ಎಂಬುದು ರಾಜ್ಯ ಸರಕಾರದ ಮತ್ತು ಪೊಲೀಸ್‌ ಇಲಾಖೆಯ ನಿಲುವು.

ಯಾವುದೇ ಅಹಿತಕರ ಘಟನೆಗಳು ನಡೆದರೂ ಸಿಸಿ ಟಿವಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಪೊಲೀಸರು ಹೇಳುತ್ತಾರೆ. ಸ್ವಂತ ಸಿಸಿ ಟಿವಿ ಕೆಮರಾಗಳಿಲ್ಲದೆ ಅಹಿತಕರ ಘಟನೆಗಳು ಸಂಭವಿಸಿದಾಗ ಖಾಸಗಿ ವ್ಯಕ್ತಿಗಳ ಮನೆಗಳಲ್ಲಿ, ಸಂಸ್ಥೆಗಳಲ್ಲಿ  ಸ್ಥಾಪಿಸಿದ ಸಿಸಿ ಟಿವಿ ಕೆಮರಾಗಳು ಚಿತ್ರಿಸಿದ ಫೋಟೋಗಳನ್ನೇ ಆಧಾರವಾಗಿರಿಸಿ ಪೊಲೀಸರು ತಪಾಸಣೆ ನಡೆಸಿ ತನಿಖೆಯನ್ನು ಮುಂದುವರಿಸುತ್ತಾರೆ. ಜಿಲ್ಲೆಯಲ್ಲಿ ದಾಳಿಯ ಘಟನೆಗಳು ಮುಂದುವರಿಯುತ್ತಿರುವಾಗ ಪೊಲೀಸರಿಗೆ ಪ್ರಮುಖವಾಗಿ ನೆರವಿಗೆ ಬರುವ ಸಿಸಿ ಟಿವಿ ಕೆಮರಾಗಳನ್ನು ಮರು ಸ್ಥಾಪಿಸಬೇಕೆಂದು ಸಾರ್ವಜನಿಕ ವಲಯ ಕೂಡ ಆಗ್ರಹಿಸಿದೆ.

2014ರಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ 2.58 ಕೋಟಿ ರೂ.ಗಳನ್ನು ವಿನಿಯೋಗಿಸಿ ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿತ್ತು. ಕೆಲ್ಟ್ರೋನ್‌ಗೆ ಇದರ ಹೊಣೆಗಾರಿಕೆ ಕೊಡಲಾಗಿತ್ತು. ಈ ಪೈಕಿ ಚಂದ್ರಗಿರಿ ರಸ್ತೆಯಲ್ಲಿ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದುದರಿಂದ ಆ ರೂಟ್‌ನಲ್ಲಿ ಕೆಮರಾಗಳನ್ನು ಸ್ಥಾಪಿಸಲಾಗಿರಲಿಲ್ಲ.

ಶಾಸಕರ ಪ್ರಾದೇಶಿಕ ನಿಧಿ ಬಳಕೆಗೆ ನಿರ್ಧಾರ ಕಾಸರಗೋಡಿನ ಸೂಕ್ಷ್ಮ ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಡಳಿತ ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರನ್ನು ಒಳಗೊಂಡ ಜಿಲ್ಲಾ ಮಟ್ಟದ ಶಾಂತಿ ಸಮಿತಿಯು ಸಿಸಿ ಟಿವಿ ಕೆಮರಾಗಳನ್ನು ದುರಸ್ತಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿತ್ತು. ಈ ತೀರ್ಮಾನದಂತೆ ಮಂಜೇಶ್ವರ, ಕಾಸರಗೋಡು ಮತ್ತು  ಕಾಞಂಗಾಡು ಶಾಸಕರ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ತಲಾ ಹತ್ತು ಲಕ್ಷ  ರೂ. ಹಾಗೂ ಕೇರಳ ಸರಕಾರದ 2 ಕೋಟಿ ರೂ. ವಿನಿಯೋಗಿಸಿ ಕೆಲ್ಟ್ರೋನ್‌ ಕಂಪೆನಿಗೆ ಮೂರು ವರ್ಷಗಳ ದುರಸ್ತಿ ಕಾಮಗಾರಿ ಸಹಿತ ಹೊಸ ಕೆಮರಾಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿತ್ತು. ಆದರೆ ಈ ನಿರ್ಧಾರ ಕೂಡ ಇದೀಗ ಮೂಲೆಪಾಲಾಗಿರುವುದು ದುರಂತ.

ಹಲವೆಡೆಗಳಲ್ಲಿ ಸಮಾಜದ್ರೋಹಿಗಳು, ಕಿಡಿಗೇಡಿಗಳು ಕೆಮರಾಗಳನ್ನು ಹಾನಿಗೊಳಿಸಿರುವುದಾಗಿ ಮಾಹಿತಿಯಿದೆ. ಹಾನಿಗೀಡಾದ ಕೆಮರಾಗಳನ್ನು ದುರಸ್ತಿಗೊಳಿಸಲು ಇದುವರೆಗೆ ಒಂದು ರೂಪಾಯಿ ಕೂಡ ಬಿಡುಗಡೆಗೊಳಿಸಿಲ್ಲ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರಕರಣಗಳ ತನಿಖೆಯಲ್ಲಿ ಸಿಸಿ ಟಿವಿ ಕ್ಯಾಮರಾಗಳು ಅತ್ಯಂತ ಉಪಯುಕ್ತವಾಗುತ್ತಿವೆ ಎಂದು ಪೊಲೀಸರು ಹೇಳುತ್ತಿದ್ದರೂ, ಕೆಮರಾಗಳು ಕೆಟ್ಟುಹೋದಲ್ಲಿ ಪ್ರಮುಖ ಪ್ರಕರಣಗಳ ತನಿಖೆಗೂ ಯಾವುದೇ ಪ್ರಯೋಜನ ಸಿಗುತ್ತಿಲ್ಲ.

ಇದೀಗ ದುರಸ್ತಿ  ಕಾರ್ಯಗಳಿಗೆ ಬೃಹತ್‌ ಮೊತ್ತ ನೀಡಬೇಕಾಗಿದ್ದರೂ, ಕೇವಲ 30 ಲಕ್ಷ  ರೂ. ಗಳನ್ನಾದರೂ ಬಿಡುಗಡೆ ಮಾಡಲು ಕೂಡ ಸರಕಾರ ತಯಾರಾಗುತ್ತಿಲ್ಲ. ಈ ಮೊತ್ತವನ್ನು ನೀಡಿದರೂ ಕ್ಯಾಮರಾಗಳನ್ನು ದುರಸ್ತಿಗೊಳಿಸಲು ಸಾಧ್ಯವಿದೆ. ಆದರೆ ಈ ನಿಟ್ಟಿನಲ್ಲಿ  ಜಿಲ್ಲೆಯ ಪೊಲೀಸ್‌ ಇಲಾಖೆ ಕೂಡ ಯಾಕೋ ಗಂಭೀರ ನಿಲುವು ತಳೆದಂತೆ ಕಂಡುಬರುತ್ತಿಲ್ಲ ಎಂಬುದು ಅಚ್ಚರಿಯ ವಿಷಯವಾಗಿದೆ.

1.5 ಕೋಟಿ ರೂ. ಬಿಡುಗಡೆ
ಕಾಸರಗೋಡು ಜಿಲ್ಲೆಯಲ್ಲಿ ಪದೇ ಪದೇ ಕೊಲೆ, ದರೋಡೆ, ಕಳವು, ಕೋಮು ಗಲಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ರಸ್ತೆ ಮತ್ತು ಜಂಕ್ಷನ್‌ಗಳಲ್ಲಿರುವ ಸಿ.ಸಿ. ಟಿ.ವಿ. ಕೆಮರಾಗಳನ್ನು ನವೀಕರಿಸಲಾಗುವುದೆಂದು ಎಡಿಜಿಪಿ  ರಾಜೇಶ್‌ ದಿವಾನ್‌ ತಿಳಿಸಿದ್ದಾರೆ. ಇದಕ್ಕಾಗಿ ಜಿಲ್ಲೆಗೆ 1.5 ಕೋಟಿ ರೂ. ಸರಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ಸೈಮನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.