ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕೆಮರಾಗಳ ಸ್ಥಾಪನೆ


Team Udayavani, Mar 15, 2018, 10:05 AM IST

CCTV-Camera-2-600.jpg

ಕಾಸರಗೋಡು: ರಾಜ್ಯದ ಪ್ರಧಾನ ನಗರಗಳಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆಗಳಲ್ಲಿ ಹಾಗೂ ಪ್ರಮುಖ ಕೇಂದ್ರಗಳಲ್ಲಿ ದೈನಂದಿನ 24 ಗಂಟೆಗಳ ಕಾಲವೂ ಕಾರ್ಯಾಚರಿಸುವ ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕ್ಯಾಮರಾಗಳನ್ನು  ಸ್ಥಾಪಿಸುವ ಮಹತ್ವದ ಯೋಜನೆಗೆ ಕೇರಳ ಗೃಹ ಇಲಾಖೆಯು ರೂಪು ನೀಡಿದೆ. ಇದಕ್ಕಾಗಿ 19.60 ಕೋಟಿ ರೂಪಾಯಿಗಳನ್ನು  ಸರಕಾರವು ಬಿಡುಗಡೆ ಮಾಡಿದೆ. ಅತಿ ಹೆಚ್ಚು  ಜನನಿಬಿಡತೆ ಹೊಂದಿರುವ 439 ರಸ್ತೆ  ಬದಿಯ ಹಲವು ಪ್ರದೇಶಗಳಲ್ಲಾಗಿ 1,004 ಸಿಸಿ ಟಿವಿ ಕ್ಯಾಮರಾಗಳನ್ನು  ಉದ್ದಿಮೆದಾರರ ಸಹಾಯದೊಂದಿಗೆ ಬ್ಯಾಂಕ್‌ಗಳು, ಎಟಿಎಂ, ಪೆಟ್ರೋಲ್‌ ಬಂಕ್‌, ಪ್ರಮುಖ ಬಸ್‌ ಮತ್ತು ರೈಲು ನಿಲ್ದಾಣಗಳು, ಚಿನ್ನದಂಗಡಿಗಳಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.

ಇದಲ್ಲದೆ ಇಂತಹ ಕ್ಯಾಮರಾಗಳನ್ನು ಇನ್ನಷ್ಟು ಹೆಚ್ಚು ಕೇಂದ್ರಗಳಲ್ಲಿ  ಸ್ಥಾಪಿಸಲು ಕೂಡ ತೀರ್ಮಾನಿಸಲಾಗಿದೆ. ಆ ಮೂಲಕ ಅಪರಾಧ ಕೃತ್ಯಗಳನ್ನು ನಡೆಸುತ್ತಿರುವವರು ಮತ್ತು ರಸ್ತೆ ಅಪಘಾತಗಳಿಗೆ ಕಾರಣವಾಗುವ ವಾಹನಗಳ ಚಾಲಕರನ್ನು  ಸೆರೆಹಿಡಿದು ಅವರಿಗೆ ಕಾನೂನು ಪರ ಶಿಕ್ಷೆ ವಿಧಿಸಲು ಗೃಹ ಖಾತೆ ಮುಂದಾಗಿದೆ. ಕೇರಳದಲ್ಲಿ ಇತ್ತೀಚೆಗೆ ಕೊಲೆ, ದರೋಡೆ, ರಾಜಕೀಯ ಕೊಲೆ, ಹಿಂಸಾಚಾರ, ಮತೀಯ ಗಲಭೆ, ಕಳವು ಮತ್ತು  ಅವಘಡಗಳ ಸಂಖ್ಯೆ ಮಿತಿಮೀರುತ್ತಿದ್ದು, ಅದನ್ನು  ಸಂಪೂರ್ಣವಾಗಿ ತಡೆಗಟ್ಟುವುದೇ ಅತ್ಯಾಧುನಿಕ ಕ್ಯಾಮರಾಗಳನ್ನು  ಸ್ಥಾಪಿಸುವುದರ ಪ್ರಧಾನ ಉದ್ದೇಶವಾಗಿದೆ.

ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಇಂಟರ್‌ ಗ್ರೇಟೆಡ್‌ ಡಿಜಿಟಲ್‌ ಎನ್‌ಪೋರ್ಸ್‌ಮೆಂಟ್‌ ಸಿಸ್ಟಂ ಜಾರಿಗೊಳಿಸುವ ನಿರ್ಧಾರವನ್ನು ಕೂಡ ಗೃಹ ಇಲಾಖೆ ಕೈಗೊಂಡಿದ್ದು, ಇದರಿಂದ ಸಾರಿಗೆ ಕಾನೂನು ಉಲ್ಲಂಘನೆಯನ್ನು  ಸಮರ್ಪಕವಾಗಿ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಇಲಾಖೆಯ ಅಧಿಕಾರಿ ವಲಯ ತಿಳಿಸಿದೆ.

ವಿಶೇಷ ಕಂಟ್ರೋಲ್‌ ರೂಮ್‌
ರಾಜ್ಯದಲ್ಲಿ ಗೂಂಡಾಗಳನ್ನು ಹತ್ತಿಕ್ಕಲು ಆಧುನಿಕ ಶೈಲಿಯ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ಗೃಹ ಖಾತೆ ತೀರ್ಮಾನಿಸಿದೆ. ಕೇರಳದ ಹಲವೆಡೆಗಳಲ್ಲಿ ಅನೇಕ ರೀತಿಯ ಗೂಂಡಾಕೃತ್ಯಗಳು ನಡೆಯುತ್ತಿವೆ. ಮಾದಕದ್ರವ್ಯ ಸಾಗಾಟ, ಭೂ ಮಾಫಿಯಾ, ಹವಾಲಾ ಹಣ, ಕಾಳಧನ, ಲೈಂಗಿಕ ದಂಧೆ, ಮಾನವ ಕಳ್ಳಸಾಗಾಟ, ಅಕ್ರಮ ಹಫ್ತಾ  ವಸೂಲಿ, ಮಕ್ಕಳ ಸಾಗಾಟ, ಅವಯವ ಅಪಹರಣ, ಅಪಾರ ಬಡ್ಡಿ ದರದಲ್ಲಿ ಸಾಲ ನೀಡಿ ಮರುಪಾವತಿಸದವರ ಶೋಷಣೆ ಇತ್ಯಾದಿ ನಡೆಯುತ್ತಿರುತ್ತವೆ. ಮಾತ್ರವಲ್ಲದೆ ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು  ವ್ಯಕ್ತಿಗಳು ಗೂಂಡಾಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇಂತಹ ಗೂಂಡಾ ತಂಡಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವ ಗುರಿಯೊಂದಿಗೆ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.