ಐತಿಹಾಸಿಕ ಪೊಸಡಿಗುಂಪೆಯಲ್ಲಿ ಸ್ವಚ್ಛತಾ ಅಭಿಯಾನ

ವಿವಿಧ ಸಂಘಟನೆ, ಸ್ಥಳೀಯರ ವ್ಯಾಪಕ ಬೆಂಬಲ

Team Udayavani, Jun 4, 2019, 6:03 AM IST

03KSDE2

ಬಾಯಾರು: ಕಾಸರಗೋಡು ಜಿಲ್ಲೆ ಐತಿಹಾಸಿಕ ಪೊಸಡಿಗುಂಪೆಯನ್ನು ಪ್ಲಾಸ್ಟಿಕ್‌ ಮುಕ್ತವಾಗಿಸುವ “ಸ್ವಚ್ಛ ಪೊಸಡಿಗುಂಪೆ’ ಕಾರ್ಯಕ್ರಮ ಯುವ ಕರಾಡ ಕನಿಯಾಲ ಹಾಗೂ ಸೇವಾಭಾರತಿ ಆಶ್ರಯದಲ್ಲಿ ವಿವಿಧ ಕುಟುಂಬಶ್ರೀ ಸದಸ್ಯರು ಹಾಗೂ ಸ್ಥಳೀಯರ ಸಹಕಾರದಿಂದ ನಡೆಯಿತು.


ಸ್ವಚ್ಛತಾ ಕಾರ್ಯಕ್ರಮದ ಕೊನೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲಾ ಸೇವಾ ಪ್ರಮುಖ್‌ ವಿಶ್ವನಾಥ ಅವರು ಮಾತನಾಡಿ ಸೇವೆ ಮಾಡುವ ಮೊದಲು ಪ್ರೀತಿಸಲು ಕಲಿಯಬೇಕು ಎಂಬುದಾಗಿ ಅಂಬೇಡ್ಕರ್‌ ಹೇಳಿದ್ದರು. ಪೊಸಡಿಗುಂಪೆಯ ಮೇಲೆ ಪ್ರೀತಿಯಿಂದ ಈ ಪ್ರದೇಶವನ್ನ ಸ್ವಚ್ಛಗೊಳಿಸುವ ಉದ್ದೇಶದಿಂದ ಇಲ್ಲಿ ಸೇರಿರು ವರು ಆ ಮಾತನ್ನು ನಿಜಗೊಳಿಸಿದ್ದೀರಿ. ಹಿಂದಿನ ಕಾಲದಲ್ಲಿ ಪ್ಲಾಸ್ಟಿಕ್‌ ಉಪಯೋಗ ಇರಲಿಲ್ಲ, ಆದರೆ ಇತ್ತೀಚಿಗೆ ಪ್ಲಾಸ್ಟಿಕ್‌ ಉಪಯೋಗ ಹೆಚ್ಚಾಗಿದೆ. ಇದರಿಂದ ಪ್ರಕೃತಿ ನಾಶವಾಗುತ್ತಿದೆ. ನಾವೆಲ್ಲರೂ ಪ್ಲಾಸ್ಟಿಕ್‌ ಉಪಯೋಗ ಕಡಿಮೆ ಮಾಡುವ ಸಂಕಲ್ಪ ಮಾಡೋಣ. ಜೊತೆಯಲ್ಲಿ ಗಿಡ ನೆಡುವ ಹಾಗೂ ಜಲ ಸಂರಕ್ಷಣೆಯ ಕೆಲಸವನ್ನು ಪ್ರತಿ ಗ್ರಾಮ ಗ್ರಾಮಗಳಲ್ಲಿ ಮಾಡೋಣ. ಈ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಾಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ನಾರಾಯಣ ನಾಯಕ್‌ ಅವರು ಮಾತನಾಡಿ ಜನರೇ ಜಾಗೃತರಾಗಿ ಇಷ್ಟೊಂದು ವ್ಯಾಪಕವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದ್ದು ಹಬ್ಬದ ವಾತಾವರಣದ ಅನುಭವ ನೀಡುತ್ತಿದೆ. ಇನ್ನೂ ಹೆಚ್ಚಿನ ಜನರಲ್ಲಿ ಈ ಜಾಗೃತಿ ಮೂಡಿಸುವಂತೆ ಮಾಡೋಣ ಎಂದರು. ಮುಂದಿನ ದಿನಗಳಲ್ಲಿ ಕಸದ ನಿರ್ವಹಣೆಗೆ ಈ ಭಾಗದಲ್ಲಿ ಕಸದ ತೊಟ್ಟಿ ಇಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಕ್ರಮ ಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಂದ ಮಾಡಿಸಬೇಕಾಗಿದೆ ಎಂದು ತಿಳಿಸಿದರು.

ಈ ಅಭಿಯಾನದಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಹಾಗೂ ಮಕ್ಕಳು ಕೂಡ ಭಾಗವಹಿಸಿದ್ದರು. ಸುಮಾರು 25 ಕ್ಕೂ ಹೆಚ್ಚು ಚೀಲಗಳಲ್ಲಿ ಅಂದಾಜು 200 ಕಿಲೋಗಳಷ್ಟು ಪ್ಲಾಸ್ಟಿಕ್‌ ಹಾಗೂ ಮದ್ಯದ ಬಾಟಲ್‌ಗ‌ಳು ದೊರೆತಿವೆ. ಬೆಳಗ್ಗೆ 9 ರಿಂದ ಆರಂಭವಾದ ಅಭಿಯಾನ ಮಧ್ಯಾಹ್ನದವರೆಗೆ ನಡೆಯಿತು.

ಪೊಸಡಿಗುಂಪೆಗೆ ಪ್ರವಾಸಿಗರು ಬಂದು ಸಾಕಷ್ಟು ಪ್ಲಾಸ್ಟಿಕ್‌ ಹಾಗೂ ಇತರ ತ್ಯಾಜ್ಯಗಳನ್ನು ಎಸೆದು ಹೋಗುವ ಬಗ್ಗೆ ಸ್ಥಳೀಯರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತಾಗಿ ಮಾಧ್ಯಮಗಳಲ್ಲಿ ವರದಿಗಳನ್ನು ನೀಡಿ ಸರಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆ ಹಿನ್ನೆಲೆಯಲ್ಲಿ ಪೊಸಡಿ ಗುಂಪೆಯನ್ನು ಸ್ವಚ್ಛಗೊಳಿಸಿ ಸುಂದರಗೊಳಿಸಬೇಕೆಂಬ ಉದ್ದೇಶದಿಂದ ಈ ಸ್ವಚ್ಛತಾ ಅಭಿಯಾನ ನಡೆಯಿತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.