ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ


Team Udayavani, Oct 23, 2020, 12:31 AM IST

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

ಪೆರ್ಲ: ಯಕ್ಷಪ್ರತಿಭೆ, ಧೀಂಗಿಣ ವೀರ ಚಿತ್ತರಂಜನ್‌ ಕಡಂದೇಲು ಅವರ ಯಕ್ಷಗಾನದ ವೀಡಿಯೋಗಳನ್ನು ಮೆಚ್ಚಿದ ಅಭಿಮಾನಿಯೊಬ್ಬರು ಮನೆಗೆ ಬಂದು ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ ಅಪರೂಪದ ಘಟನೆ ಪಾಣಾಜೆ ಆರ್ಲಪದವು ಸಮೀಪದ ಪ್ರಕೃತಿ ರಮಣೀಯ ಕಾನನ ಪ್ರದೇಶ ಕಡಂದೇಲುವಿನಲ್ಲಿ ನಡೆದಿದೆ.

ಬೆಳ್ತಂಗಡಿ ಮಚ್ಚಿನ ಶ್ರೀ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಿಂದಿ ಶಿಕ್ಷಕ ಸುಧೀಂದ್ರ ಬಿ. ಅವರು ದೂರದ ಧರ್ಮಸ್ಥಳದಿಂದ ಚಿತ್ತರಂಜನ್‌ ಅವರನ್ನು ಅಭಿನಂದಿಸಲೆಂದೇ ಕಡಂದೇಲು ರಾಮಚಂದ್ರ ಭಟ್‌ ಅವರ ಮನೆಗೆ ಆಗಮಿಸಿದ್ದರು. ಚಿತ್ತರಂಜನ್‌ ಅವರ ಗಣಪತಿ ಸ್ತುತಿಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ತಾಯಿ ಜ್ಯೋತ್ಸಾ ಎಂ.ಕಡಂದೇಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶ್ರೀ ಪೇಜಾವರ ವಿಶ್ವೇಶತೀರ್ಥ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಪೆರ್ಲ ಶ್ರೀ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ನಾಟ್ಯ ಗುರು, ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಬ್ಬಣಕೋಡಿ ರಾಮಭಟ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಡಂದೇಲು ಮನೆತನದವರಿಗೆ ಯಕ್ಷಗಾನ ಕಲೆಯು ರಕ್ತಗತವಾಗಿ ಬಂದಿದೆ. ಚಿತ್ತರಂಜನ್‌ ಹಾಗೂ ಚಿನ್ಮಯಕೃಷ್ಣ ಸಹೋದರರು ಇದಕ್ಕೆ ಉದಾಹರಣೆ ಎಂದರು.

ಚಿತ್ತರಂಜನ್‌ ಹಾಗೂ ಮನೆಯವರು ನಾಟ್ಯಗುರುಗಳಿಗೆ ಶಾಲು ಹೊದೆಸಿ, ಫಲಪುಷ್ಪ ನೀಡಿ ಗುರುವಂದನೆ ಸಲ್ಲಿಸಿದರು. ಸುಧೀಂದ್ರ ಬಿ.ಧರ್ಮಸ್ಥಳ ಅವರು ಬಾಲ ಪ್ರತಿಭೆ ಚಿತ್ತರಂಜನ್‌ಗೆ ಪೇಟ ತೊಡಿಸಿ, ಹಾರ ಹಾಕಿ, ಶಾಲು ಹೊದೆಸಿ ಸ್ಮರಣಿಕೆಯನ್ನು ನೀಡಿ ಅಭಿನಂದಿಸಿದರು. ಪ್ರತಿಭಾ ಪುರಸ್ಕಾರ ಸ್ವೀಕರಿಸಿ ಚಿತ್ತರಂಜನ್‌ ಮಾತನಾಡಿ, ತನ್ನೆಲ್ಲ ಸಾಧನೆಗೆ ನಾಟ್ಯಗುರುಗಳೇ ಕಾರಣ ಎಂದರು.

ಉಪನ್ಯಾಸಕ, ಯಕ್ಷಗಾನ ಕಲಾವಿದ ರಾಮಚಂದ್ರ ಭಟ್‌ ಪನೆಯಾಲ, ಪಾಣಾಜೆ ಸುಬೋಧ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮೊಳಕ್ಕಾಲು ಶ್ರೀಕೃಷ್ಣ ಭಟ್‌, ಗಣಪತಿ ಭಟ್‌ ಶೆಟ್ಟಿಬೈಲ್‌ ಹಾಗೂ ಯೋಗ ಗುರು ಪ್ರಕಾಶಾನಂದ ವಾರಣಾಸಿ ಶುಭ ಹಾರೈಸಿದರು.

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಸುಧೀಂದ್ರ ಬಿ.ಧರ್ಮಸ್ಥಳ ಅವರಿಗೆ ಕಡಂದೇಲು ಮನೆಯವರು ಗೌರವಾರ್ಪಣೆ ಸಲ್ಲಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಶಿವಕುಮಾರ ಕೆ. ಕಾಕೆಕೊಚ್ಚಿ ಅಧ್ಯಕ್ಷತೆ ವಹಿಸಿದರು. ಚಿತ್ತರಂಜನ್‌ಗೆ ಎಡನೀರು ಮೇಳದಲ್ಲಿ ಅನೇಕ ಅವಕಾಶಗಳನ್ನು ನೀಡಿದ ಮಠಾಧೀಶ ಶ್ರೀ ಕೇಶವಾನಂದಭಾರತೀ ಸ್ವಾಮೀಜಿ ಹಾಗ ಚಿತ್ತರಂಜನ್‌ನ ಭಾಗವತಿಕೆ ಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಅವರಿಗೆ ನುಡಿನಮನ, ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.