ಮುಂದಿನ ಜನಾಂಗಕ್ಕೆ ಜಾಗೃತಿ ಅಗತ್ಯ: ಕರುಣಾಕರನ್‌


Team Udayavani, Jan 16, 2019, 6:34 AM IST

16-january-8.jpg

ಕಾಸರಗೋಡು : ಪ್ರಜಾ ಪ್ರಭುತ್ವದ ಮೌಲ್ಯಗಳನ್ನು ಸಂವಿಧಾನದ ಹಿನ್ನೆಲೆಯಲ್ಲಿ ಸಂರಕ್ಷಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ಪರ್ಯಟನೆ ನಡೆಸುವ ಸಂವಿಧಾನ ಸಂದೇಶ ಯಾತ್ರೆ ಮಂಜೇಶ್ವರದಿಂದ ಆರಂಭಗೊಂಡಿತು.

ಕೇರಳ ವಿಧಾನ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆಗಳ ನೇತೃತ್ವದಲ್ಲಿ ಸಾಕ್ಷರತಾ ಮಿಷನ್‌ ಆಯೋಜಿಸುವ ಈ ಯಾತ್ರೆ ಸಂವಿಧಾನ ಸಾಕ್ಷರತಾ ಜನಪರ ಕಾರ್ಯ ಕ್ರಮದ ಅಂಗವಾಗಿ ನಡೆಯುತ್ತಿದೆ. ರಾಜ್ಯದ 52 ಕೇಂದ್ರಗಳನ್ನು ಸಂಪರ್ಕಿಸಿ, ಜ. 24ರಂದು ತಿರುವನಂತಪುರದಲ್ಲಿ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಮಂಜೇಶ್ವರ ಗೋವಿಂದ ಪೈ ನಗರದಲ್ಲಿ ನಡೆದ ಸಮಾರಂಭದಲ್ಲಿ ಸಂಸದ ಪಿ. ಕರುಣಾಕರನ್‌ ಯಾತ್ರೆಯನ್ನು ಉದ್ಘಾಟಿಸಿದರು. ಜಾಥಾ ಕ್ಯಾಪ್ಟನ್‌, ರಾಜ್ಯ ಸಾಕ್ಷರತಾ ಮಿಷನ್‌ ಪ್ರಾಧಿಕಾರ ನಿರ್ದೇಶಕ ಡಾ| ಪಿ.ಎಸ್‌.ಶ್ರೀಕಲಾ ಅವರಿಗೆ ಸಂಸದ ಧ್ವಜ ಹಸ್ತಾಂತರಿಸಿದರು.

ಜಾಥಾ ಕ್ಯಾಪ್ಟನ್‌ ಡಾ| ಪಿ.ಎಸ್‌.ಶ್ರೀಕಲಾ ಅವರು ಮಾತನಾಡಿ ಎಲ್ಲರನ್ನೂ ಸಮಾನವಾಗಿ ಕಾಣುವ ದೃಷ್ಟಿಕೋನವೇ ನಮ್ಮ ಸಂವಿಧಾನದ ವಿಶೇಷ. ಈ ಸಂದೇಶ ವನ್ನು ಜನತೆಗೆ ತಲಪಿಸುವ ಮಹತ್ತರ ಕರ್ತವ್ಯವನ್ನು ಸಂದೇಶ ಯಾತ್ರೆ ನಡೆಸುತ್ತಿದೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಕೆ.ಎಂ.ಕೆ. ನಂಬ್ಯಾರ್‌ ಅವರನ್ನು ಅಭಿನಂದಿಸ ಲಾಯಿತು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಅಧ್ಯಕ್ಷತೆ ವಹಿಸಿದ್ದರು.

ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ ಕೆ.ಎಂ.ಕೆ. ಅಶ್ರಫ್‌, ಉಪಾಧ್ಯಕ್ಷೆ ಮಮತಾ ದಿವಾಕರ್‌, ಜಿಲ್ಲಾ ಯೋಜನೆ ಸಂಚಾಲಕ ಶಾಜು ಜೋನ್‌, ಮಂಜೇಶ್ವರ ಗ್ರಾಮ ಪಂಚಾಯತ್‌ ಅಧ್ಯಕ್ಷ ಅಬ್ದುಲ್‌ ಅಝೀಝ್, ಬ್ಲಾಕ್‌ ಪಂಚಾಯತ್‌ ಸದಸ್ಯ ಮಹಮ್ಮದ್‌ ಮುಸ್ತಫ, ಮಂಜೇಶ್ವರ ಗ್ರಾಮ ಪಂಚಾಯತ್‌ ಸದಸ್ಯರಾದ ಕೆ.ಎಂ.ಕೆ.ಅಬ್ದುಲ್‌ ರಹಮಾನ್‌ ಹಾಜಿ, ರಿಯಾನಾ, ಬ್ಲಾಕ್‌ ಕೆ.ಬಿ.ಡಿ.ಒ. ನೂತನ ಕುಮಾರಿ ಮೊದಲಾದವರು ಉಪಸ್ಥಿತರಿದ್ದರು.

ಯಾತ್ರೆಗೆ ಕಾಸರಗೋಡು ನಗರದ ನೂತನಬಸ್‌ ನಿಲ್ದಾಣ ಬಳಿಯ ಟಿ. ಉಬೈದ್‌ ನಗರದಲ್ಲಿ ಸ್ವಾಗತ ನೀಡಲಾಯಿತು. ಆ ಬಳಿಕ ಯಾತ್ರೆಯನ್ನು ಕಾಂಞಂಗಾಡ್‌ ಕುಂಞಿ ಮಾಧವಿನಗರ, ಚೆರುವತ್ತೂರು ಟಿ.ಎಸ್‌.ತಿರುಮುಂಬ್‌ ನಗರದಲ್ಲಿ ಸ್ವಾಗತಿಸಲಾಯಿತು

ವಿಭಜನೆ ಯತ್ನ
ವೈವಿಧ್ಯಮಯ ಸಂಸ್ಕೃತಿ ಹಿನ್ನೆಲೆ ಇರುವ ನಮ್ಮ ದೇಶದಲ್ಲಿ ಜಾತಿ, ಮತಗಳ ಹೆಸರಲ್ಲಿ ಜನತೆಯನ್ನು ಒಡೆಯುವ ಯತ್ನ ವ್ಯವಸ್ಥಿತವಾಗಿ ನಡೆದು ಬರುತ್ತಿದೆ. ಇದರ ವಿರುದ್ಧ ಮುಂದಿನ ಜನಾಂಗವನ್ನು ಜಾಗೃತಗೊಳಿಸಲು ಸಂವಿಧಾನದ ಕುರಿತು ಶಾಸ್ತ್ರೀಯವಾಗಿ ಮನನ ಮಾಡುವ ಅಗತ್ಯವಿದೆ ಎಂದು ಸಂಸದ ಪಿ.ಕರುಣಾಕರನ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.