ಸಹ ಪ್ರಯಾಣಿಕರನ್ನು ನಿಗಾದಲ್ಲಿರಿಸಲು ದ.ಕ. ಜಿಲ್ಲಾಡಳಿತ ಸೂಚನೆ

ಕಾಸರಗೋಡಿನ ಯುವಕನಲ್ಲಿ ಕೊರೊನಾ ಪತ್ತೆ ಹಿನ್ನೆಲೆ

Team Udayavani, Mar 18, 2020, 12:45 AM IST

careful-of-corona-2

ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡಿನ ಯುವಕನಲ್ಲಿ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಹ ಪ್ರಯಾಣಿಕರನ್ನು ಪತ್ತೆ ಮಾಡಿ ಮನೆಯಲ್ಲಿಯೇ ನಿಗಾದಲ್ಲಿಡಲು ಮತ್ತು ಅವರ ಮನೆಗೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ದ.ಕ. ಜಿಲ್ಲಾಡಳಿತವು ಆರೋಗ್ಯ ಇಲಾಖೆಗೆ ಸೂಚಿಸಿದೆ.

ಯುವಕ ಓಡಾಡಿದ ಮಾರ್ಗಸೂಚಿಯನ್ನು ಕಾಸರಗೋಡು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಮಾ. 14ರಂದು ಬೆಳಗ್ಗೆ 5.20ಕ್ಕೆ ಮಂಗಳೂರಿಗೆ ಬಂದ ಬಳಿಕ ಇಬ್ಬರು ಸಂಬಂಧಿಕರೊಂದಿಗೆ ಅವರು ಕಾಸರಗೋಡಿಗೆ ತೆರಳಿದ್ದಾರೆ. ಅಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಆತನನ್ನು ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ. 8 ಗಂಟೆಗೆ ನಾಲ್ವರೂ ಕೂಡ ಇನ್ನೊಂದು ಖಾಸಗಿ ಆಸ್ಪತ್ರೆಯ ಕ್ಯಾಂಟಿನ್‌ಗೆ ತೆರಳಿ ಚಹಾ ಸೇವಿಸಿದ್ದಾರೆ. ಬಳಿಕ ಪರೀಕ್ಷೆಗೆ ಗಂಟಲು ಸ್ರಾವ ಮಾದರಿ ನೀಡಲು ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ಕಾಸರಗೋಡಿನ ಬೇವಿಂಜೆಯಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿ ರೋಗಿ ಮೂರು ದಿನ ಕಾಲ ನಿಗಾದಲ್ಲಿದ್ದ. ಸೋಮವಾರ ರಾತ್ರಿ ಬಂದ ವೈದ್ಯಕೀಯ ಪರೀಕ್ಷೆಯಲ್ಲಿ ಆತನಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಯುವಕನನ್ನು ಕಾಸರಗೋಡು ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆ ವ್ಯಕ್ತಿ ಬಂದ ವಿಮಾನದಲ್ಲಿ ಎಷ್ಟು ಮಂದಿಯಿದ್ದರು ಹಾಗೂ ಆ ಪೈಕಿ ದ.ಕ. ಸೇರಿದಂತೆ ಕರ್ನಾಟಕ ರಾಜ್ಯದ ಎಷ್ಟು ಪ್ರಯಾಣಿಕರು ಇದ್ದರು ಎನ್ನುವ ಮಾಹಿತಿಯನ್ನು ಕಲೆಹಾಕುವ ಕಾರ್ಯದಲ್ಲಿ ದ.ಕ. ಜಿಲ್ಲಾಡಳಿತ ನಿರತವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಮಾಹಿತಿ ಸಂಗ್ರಹ: ಶ್ರೀರಾಮುಲು
ಕಾಸರಗೋಡಿನ ಯುವಕನಲ್ಲಿ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತ ಓಡಾಟ ನಡೆಸಿರುವ ಮಾಹಿತಿಯನ್ನು ಪಡೆಯಲಾಗುತ್ತಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸಿ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.