ಕೊರೊನಾ : ಗಡಿ ಪ್ರದೇಶದಲ್ಲಿ ವಾಹನ ತಪಾಸಣೆ


Team Udayavani, Feb 7, 2020, 6:25 AM IST

06KSDE11

ಕಾಸರಗೋಡು: ಕೊರೊನಾ ವೈರಸ್‌ ಸೋಂಕು ತಗಲಿರುವ ಮೂರು ಪ್ರಕರಣಗಳು ಕೇರಳದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದ ಗಡಿ ಪ್ರದೇಶದಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಮೋಟಾರು ವಾಹನ ತಪಾಸಣೆ ಬಿಗುಗೊಳಿಸಲು ತೀರ್ಮಾನಿಸಲಾಗಿತ್ತು.

ಚೀನದಿಂದ ಹಾಗೂ ಇತರ ಕೊರೊನಾ ಬಾಧಿತ ದೇಶಗಳಿಂದ ಕೇರಳಕ್ಕೆ ಬರುವವರನ್ನು ಪತ್ತೆಹಚ್ಚಿ ಕಂಟ್ರೋಲ್‌ ರೂಂನಲ್ಲಿ ವರದಿ ಮಾಡಲು ಗಡಿ ಪ್ರದೇಶದಲ್ಲಿ ವಾಹನ ತಪಾಸಣೆಗೆ ತೀರ್ಮಾನಿಸಲಾಗಿದೆ.

ಹೊಟೇಲ್‌ಗ‌ಳಲ್ಲಿ ಕೈತೊಳೆಯಲು ಲಿಕ್ವಿಡ್‌ ಸೋಪ್‌ ಬಳಸಬೇಕೆಂದೂ ಈ ಬಗ್ಗೆ ನಡೆದ ಸಭೆಯಲ್ಲಿ ಸಲಹೆ ಮಾಡಿದೆ. ಎಲ್ಲ ವಿದ್ಯಾಲಯ ಗಳಲ್ಲಿ ಕೈತೊಳೆಯುವ ಹವ್ಯಾಸವನ್ನು ರೂಢಿಸಿಕೊಳ್ಳುವಂತೆ ತಿಳಿವಳಿಕೆ ಮೂಡಿಸಲು ಜಾಗೃತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ನೇತೃತ್ವದಲ್ಲಿ ವಿವಿಧೆಡೆ ತಿಳಿವಳಿಕೆ ಅಭಿಯಾನವನ್ನು ಆರಂಭಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ಮೀಡಿಯಾ ಸರ್ವೆಲನ್ಸ್‌ ತಂಡವನ್ನು ನೇಮಿಸಲಾಗಿದೆ.

ಕಾಂಞಂಗಾಡ್‌ನ‌ಲ್ಲಿ ನಡೆದ ಕೊರೊನಾ ಅವಲೋಕನ ಸಭೆಯಲ್ಲಿ ಸಬ್‌ ಕಲೆಕ್ಟರ್‌ ಅರುಣ್‌ ಕೆ. ವಿಜಯನ್‌ ಅಧ್ಯಕ್ಷತೆ ವಹಿಸಿದರು. ಎಡಿಎಂ ಎನ್‌.ದೇವಿದಾಸ್‌, ಡೆಪ್ಯೂಟಿ ಡಿಎಂಒ ಡಾ|ರಾಮದಾಸ್‌ ಎ.ವಿ|, ಜಿಲ್ಲಾ ಸರ್ವೇಲನ್ಸ್‌ ಆಫೀಸರ್‌ ಡಾ| ಮನೋಜ್‌ ಎ.ಟಿ., ಎನ್‌.ಎಚ್‌.ಎಂ. ಜಿಲ್ಲಾ ಪ್ರೋಗ್ರಾಂ ಮೆನೇಜರ್‌ ಡಾ| ರಾಮನ್‌ ಸ್ವಾತಿ ವಾಮನ್‌, ಜಿಲ್ಲಾ ವಾರ್ತಾಧಿಕಾರಿ ಎಂ. ಮಧುಸೂದನನ್‌, ವಿಶ್ವ ಆರೋಗ್ಯ ಸಂಘಟನೆಯ ವೀಕ್ಷಕ ಡಾ| ದೀನ ದಯಾಳ್‌, ಡೆಪ್ಯೂಟಿ ಮಾಸ್‌ ಮೀಡಿಯಾ ಆಫೀಸರ್‌ ಸಯನ ಎಸ್‌. ಮೊದಲಾದವರು ಭಾಗವಹಿಸಿದರು.

ಪ್ರವಾಸಿಗರ ಮೇಲೆ ನಿಗಾ
ಕೇರಳದಲ್ಲಿ ಮೂವರಿಗೆ ಕೊರೊನಾ ವೈರಸ್‌ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಹೊಟೇಲ್‌ಗ‌ಳ ಬುಕ್ಕಿಂಗ್‌ ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ ಮಾರ್ಚ್‌ನಲ್ಲಿ ಕೇರಳಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚು. ಈ ಎರಡು ತಿಂಗಳು ಹೊಟೇಲ್‌ ಬುಕ್ಕಿಂಗ್‌ ಸ್ಥಗಿತಗೊಳಿಸಲಾಗಿದೆ. ಜಿಲ್ಲೆಯ ಹೊಟೇಲ್‌ಗ‌ಳಲ್ಲಿ ವಾಸ್ತವ್ಯ ಹೂಡುವ ಪ್ರವಾಸಿಗರ ಬಗ್ಗೆ ನಿಗಾ ಇರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಜನರಲ್‌ ಆಸ್ಪತ್ರೆಗೆ
ವಿಶೇಷ ತಂಡ ಭೇಟಿ
ಜಿಲ್ಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ಕೊರೊನಾ ಪತ್ತೆಯಾಗಿರುವುದರಿಂದ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಸರಿಯಾದ ರೀತಿಯ ಚಿಕಿತ್ಸೆ ಒದಗಿಸಲು ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ತಜ್ಞ ತಂಡ ಕಾಸರಗೋಡು ಜನರಲ್‌ ಆಸ್ಪತ್ರೆಗೆ ಭೇಟಿ ನೀಡಿದೆ.

ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಿವೆಂಟಿವ್‌ ಮೆಡಿಸಿನ್‌ ಅಸೋಸಿಯೇಟ್‌ ಪ್ರೊಫೆಸರ್‌ ಬಿ. ಲೈಲಾ ಅವರ ನೇತೃತ್ವದಲ್ಲಿ ಐವರು ತಜ್ಞರು ಕಾಂಞಂಗಾಡಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಕಾಸರಗೋಡಿನ ಜನರಲ್‌ ಆಸ್ಪತ್ರೆಗೆ ಭೇಟಿ ನೀಡಿದರು.

ವೈದ್ಯರಿಗೆ ತರಬೇತಿ
ಕೊರೊನಾ ಚಿಕಿತ್ಸೆ ಬಗ್ಗೆ ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಐ.ಎಂ.ಎ. ನೇತೃತ್ವದಲ್ಲಿ ತರಬೇತಿ ನೀಡಲಾಯಿತು. ತರಬೇತಿ ಕಾರ್ಯಕ್ರಮಕ್ಕೆ ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಿವೆಂಟಿವ್‌ ಮೆಡಿಸಿನ್‌ ಅಸೋಸಿಯೇಟ್‌ ಪ್ರೊಫೆಸರ್‌ ಬಿ.ಲೈಲಾ ಅವರು ಭೇಟಿ ನೀಡಿದರು.

ಪೂರ್ಣ ಸಜ್ಜು
ಕೊರೊನಾ ಎದುರಿಸಲು ಕಾಸರಗೋಡು ಜಿಲ್ಲೆಯಲ್ಲಿ ಪೂರ್ಣ ಸಜ್ಜುಗೊಳಿಸಲಾಗಿದೆ. ಅಗತ್ಯದ ಪ್ರತಿರೋಧ ಸಾಮಗ್ರಿಗಳನ್ನು ಎಲ್ಲ ಆಸ್ಪತ್ರೆಗಳಿಗೂ ತಲುಪಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬಂದಿಗೆ ತರಬೇತಿ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಹಾಗೂ ಜನರಲ್‌ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಶನ್‌ ವಾರ್ಡ್‌ ಗಳನ್ನು ಸಜ್ಜುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿಯಿಲ್ಲವೆಂದು ಕಾಂಞಂಗಾಡ್‌ ಸಬ್‌ ಕಲೆಕ್ಟರ್‌ ಕಚೇರಿಯಲ್ಲಿ ನಡೆದ ಕೋರ್‌ ಸಮಿತಿ ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

96 ಮಂದಿ ಮೇಲೆ ತೀವ್ರ ನಿಗಾ
ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚೀನದಿಂದ ಬಂದಿರುವ 92 ಹಾಗೂ ಇತರ ದೇಶಗಳಿಂದ ಬಂದಿರುವ ನಾಲ್ವರು ಸಹಿತ 96 ಮಂದಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ನಿಗಾದಲ್ಲಿದ್ದಾರೆ. ಇವರಲ್ಲಿ 92 ಮಂದಿ ಮನೆಗಳಲ್ಲಿ, ತಲಾ ಇಬ್ಬರು ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ಮತ್ತು ಕಾಂಞಂಗಾಡ್‌ನ‌ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಈಗಾಗಲೇ 19 ಮಂದಿಯ ರಕ್ತ ಸ್ಯಾಂಪಲ್‌ಗ‌ಳನ್ನು ತಪಾಸಣೆ ಮಾಡಲಾಗಿದೆ. ಇವರಲ್ಲಿ 14 ಮಂದಿಯ ತಪಾಸಣಾ ವರದಿ ಲಭಿಸಿದ್ದು, ಇವರಲ್ಲಿ ಒಬ್ಬರಿಗೆ ಮಾತ್ರ ಪಾಸಿಟಿವ್‌ ಆಗಿದೆ. ಈತ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಂದೇ ಪ್ರಕರಣ
ಕೊರೊನಾ ವೈರಸ್‌ ಸೋಂಕು ಹರಡದಂತೆ ಜಿಲ್ಲಾಡಳಿತದಿಂದ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಕಾಂಞಂಗಾಡ್‌ನ‌ ಪ್ರಕರಣ ಬಿಟ್ಟು ಬೇರೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.
– ಡಾ| ಡಿ. ಸಜಿತ್‌ಬಾಬು
ಕಾಸರಗೋಡು ಜಿಲ್ಲಾಧಿಕಾರಿ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.