ಮಂಜೇಶ್ವರ, ಉದುಮದಲ್ಲಿ ಸಿಪಿಎಂ-ಮುಸ್ಲಿಂ ಲೀಗ್‌ ರಹಸ್ಯ ಒಪ್ಪಂದ : ಕೆ.ಸುರೇಂದ್ರನ್‌

ಕಾಂಞಂಗಾಡ್‌ ನಿವಾಸಿಯನ್ನು ಎಡರಂಗದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಇದಕ್ಕೆ ಸ್ಪಷ್ಟ ಉದಾಹರಣೆ

Team Udayavani, Mar 31, 2021, 4:08 PM IST

ಮಂಜೇಶ್ವರ, ಉದುಮದಲ್ಲಿ ಸಿಪಿಎಂ-ಮುಸ್ಲಿಂ ಲೀಗ್‌ ರಹಸ್ಯ ಒಪ್ಪಂದ : ಕೆ.ಸುರೇಂದ್ರನ್

ಕಾಸರಗೋಡು: ಬಿಜೆಪಿ ಅಭ್ಯರ್ಥಿಯನ್ನು ಪರಾಭವಗೊಳಿಸುವ ಉದ್ದೇಶದಿಂದ ಮಂಜೇಶ್ವರ ಮತ್ತು ಉದುಮದಲ್ಲಿ ಸಿಪಿಎಂ-ಮುಸ್ಲಿಂ ಲೀಗ್‌ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಆರೋಪಿಸಿದ್ದಾರೆ.

ಕಾಸರಗೋಡು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಪಿಎಂ-ಮುಸ್ಲಿಂ ಲೀಗ್‌ ಹಾಲು-ಸಕ್ಕರೆಯಂತೆ ಸಂಬಂಧವನ್ನು ಹೊಂದಿದೆ. ಉದುಮದಲ್ಲಿ ಸಿಪಿಎಂ ಅಭ್ಯರ್ಥಿಗೆ ಮುಸ್ಲಿಂ ಲೀಗ್‌, ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್‌ ಅಭ್ಯರ್ಥಿಗೆ ಸಿಪಿಎಂ ಪರಸ್ಪರ ನೆರವಾಗುವಂತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು. ಈ ಕಾರಣದಿಂದಲೇ ಮಂಜೇಶ್ವರದಲ್ಲಿ ಸಮರ್ಥರೂ, ಸ್ಥಳೀಯರೂ ಆದ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದರೂ ಕೊನೆಯ ಹಂತದಲ್ಲಿ ಅವರನ್ನು ಬದಲಾಯಿಸಿ ಕಾಂಞಂಗಾಡ್‌ ನಿವಾಸಿಯನ್ನು ಎಡರಂಗದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಇದಕ್ಕೆ ಸ್ಪಷ್ಟ ಉದಾಹರಣೆ ಎಂದರು.

ಮಂಜೇಶ್ವರ ಹಾಗು ಕಾಸರಗೋಡಿನಲ್ಲಿ 3000 ಅವಳಿ ಮತಗಳಿವೆಯೆಂದು ಸುರೇಂದ್ರನ್‌ ಆರೋಪಿಸಿದ್ದಾರೆ. ಮಂಜೇಶ್ವರದ ಸೂಕ್ಷ್ಮ ಸಂವೇದಿ ಮತಗಟ್ಟೆಗಳಲ್ಲಿ ಕೇಂದ್ರ ಸೇನೆಯನ್ನು ನೇಮಿಸಬೇಕು, ಆ ಮೂಲಕ ಸ್ವತಂತ್ರ ಹಾಗು ನಿಷ್ಪಕ್ಷ ಚುನಾವಣೆ ನಡೆಸಬೇಕೆಂದೂ ಅವರು ಆಗ್ರಹಿಸಿದರು.

ಚಿನ್ನ, ಡಾಲರ್‌ ಸಾಗಾಟ ಪ್ರಕರಣದಲ್ಲೂ, ಆಳ ಸಮುದ್ರ ಮೀನುಗಾರಿಕೆ, ಸ್ಪಿಂಕ್ಲರ್‌ ವಿವಾದ, ಶಬರಿಮಲೆ ವಿಯಷದಲ್ಲೂ ಮುಖ್ಯಮಂತ್ರಿ, ಸಚಿವರು, ವಿಧಾನಸಭಾ ಸ್ಪೀಕರ್‌ ಶಾಮೀಲಾಗಿರುವುದಾಗಿ ಸಾಬೀತುಗೊಳ್ಳುತಿದೆ. ರಾಜ್ಯ ಸರಕಾರ ಭ್ರಷ್ಟಾಚಾರಿಗಳ, ದೇಶದ್ರೋಹಿಗಳ ಕಾವಲುಗಾರನಾಗಿ ಬದಲಾಗಿದೆಯೆಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸುಧಾಮ ಗೋಸಾಡ, ಹತೀಶ್ಚಂದ್ರ ಭಂಡಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.