ನಾಳೆಯಿಂದ ಗೌಡ ಕುಟುಂಬಗಳ ಕ್ರಿಕೆಟ್‌ ಹಬ್ಬ 


Team Udayavani, Apr 14, 2018, 10:00 AM IST

GOWDA-SPORTS-13-4.jpg

ಮಡಿಕೇರಿ: ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ನಡೆಯತ್ತಿರುವ 19ನೇ ವರ್ಷದಗೌಡ ಕುಟುಂಬಗಳ ನಡುವಿನ ಕ್ರಿಕೆಟ್‌ ಹಬ್ಬದ ಆತಿಥ್ಯವನ್ನು ಚೆರಿಯಮನೆ ಕುಟುಂಬಸ್ಥರು ವಹಿಸಿಕೊಂಡಿದ್ದು, ಈ ಬಾರಿ ದಾಖಲೆಯ 224 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ವೇದಿಕೆ ಕಾರ್ಯದರ್ಶಿ ಕಟ್ಟೆಮನೆ ರೋಶನ್‌ ಹಾಗೂ ಇತರರು, ಏ.13ರಂದು ಪೂಜೆ ಸಲ್ಲಿಸುವ ಮೂಲಕ ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಂದ್ಯಾವಳಿಗೆ ಸಿದ್ಧತೆ ನಡೆಯಲಿದ್ದು, ಏ.15ರಿಂದ ಮೇ 5ರವರೆಗೆ ಪಂದ್ಯಾವಳಿ ನಡೆಯಲಿದೆ ಎಂದು ಹೇಳಿದರು.  ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ಮೈದಾನಗಳನ್ನು ಸಜ್ಜುಗೊಳಿಸುವುದರೊಂದಿಗೆ ಪ್ರತಿನಿತ್ಯ 13 ಪಂದ್ಯಗಳನ್ನು ನಡೆಸಲಾಗುತ್ತಿದ್ದು, ಪ್ರತೀ ಪಂದ್ಯವು 8 ಓವರ್‌ಗಳದ್ದಾಗಿರುತ್ತದೆ. ಮೇ 3ರಿಂದ ಒಂದೇ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಅಂದು ಪ್ರೀ ಕ್ವಾರ್ಟರ್‌ ಹಂತದ ಪಂದ್ಯಗಳು, ಮೇ 4ರಂದು ಕ್ವಾರ್ಟರ್‌ ಹಾಗೂ ಸೆಮಿಫೈನಲ್‌ ಹಾಗೂ ಮೇ 5ರಂದು 10 ಓವರ್‌ಗಳ ಫೈನಲ್‌ ಪಂದ್ಯ ಜರುಗಲಿದೆ ಎಂದು ವಿವರಿಸಿದರು.

ಸಮಾರಂಭ ಎ.15ರ ಪೂರ್ವಾಹ್ನ 10ಗಂಟೆಗೆ ನಡೆಯಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಕೊಡಗು-ಹಾಸನ ಜಿಲ್ಲೆಗಳ ಮಠಾಧಿಪತಿ ಶ್ರೀà ಶಂಭುನಾಥ ಮಹಾಸ್ವಾಮೀಜಿ ಅವರು ಸಾನಿಧ್ಯ ವಹಿಸಲಿದ್ದಾರೆ. ಕೇಂದ್ರ ಸಾಂಖ್ಯಿಕ ಯೋಜನಾ ಖಾತೆ ಸಚಿವ ದೇವರಗುಂಡ ಸದಾನಂದ ಗೌಡ ಉದ್ಘಾಟಿಸಲಿದ್ದು,ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್‌.ಸೀತಾರಾಂ ಉದ್ಘಾಟಿಸಲಿದ್ದಾರೆ. ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್‌ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಹಾಗೂ ಚೆರಿಯಮನೆ ಕ್ರಿಕೆಟ್‌ ಕಪ್‌ ಕ್ರೀಡಾಸಮಿತಿ ಅಧ್ಯಕ್ಷ ಚೆರಿಯಮನೆ ಡಾ| ರಾಮಚಂದ್ರ ಅವರು ಆಶಯ ನುಡಿಗಳನ್ನಾಡಲಿದ್ದು, ಜಿ.ಪಂ. ಸದಸ್ಯ ಬಿ.ಎ.ಹರೀಶ್‌, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್‌, ಸುನಿಲ್‌ ಸುಬ್ರಮಣಿ, ಸಂಸದ ಪ್ರತಾಪ್‌ಸಿಂಹ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ಮಹಿಳೆಯರಿಗಾಗಿ ಕುಟುಂಬವಾರು ಥ್ರೋಬಾಲ್‌ ಪಂದ್ಯಾಟವನ್ನು ಎ22ರಂದು ನಡೆಸಲಾಗುತ್ತಿದ್ದು, ಭಾಗವಹಿಸಲಿಚ್ಛಿಸುವ ತಂಡಗಳು ಅದೇ ದಿನ ಬೆಳಗ್ಗೆ 9.30ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. 

ಥ್ರೋಬಾಲ್‌ ಪಂದ್ಯಾವಳಿಯನ್ನು ಅಂತರರಾಷ್ಟ್ರೀಯ ಥ್ರೋಬಾಲ್‌ ಆಟಗಾರ್ತಿ ಚೆರಿಯಮನೆ ಮೇಘಾ ಪ್ರಭಾಕರ್‌ ಅವರು ಉದ್ಘಾಟಸಲಿದ್ದಾರೆ ಎಂದು ತಿಳಿಸಿದ ಅವರು, ಕ್ರಿಕೆಟ್‌ ಪಂದ್ಯಾಟದ ಜೊತೆಗೆ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳಾದ ರಕ್ತದಾನ ಶಿಬಿರ, ನೇತ್ರ ತಪಾಸಣಾ ಶಿಬಿರ, ಮಧುಮೇಹ ತಪಾಸಣಾ ಶಿಬಿರ ಆಯೋಜಿಸಲಾಗುವುದು ಎಂದರು.

ಏ.18ರಂದು ಬೆಳಗ್ಗೆ 9ಗಂಟೆಗೆ ರೋಟರಿ ಮಿಸ್ಟಿ ಹಿಲ್ಸ್‌ ಹಾಗೂ ಚೆರಿಯಮನೆ ಕುಟುಂಬಸ್ಥರ ಸಹಯೋಗದಲ್ಲಿ ಕೊಡಗು ಯುವ ವೇದಿಕೆ ವತಿಯಿಂದ ನಡೆಯಲಿರುವ ರಕ್ತದಾನ ಶಿಬಿರವನ್ನು ರೋಟರಿ ಮಿಸ್ಟಿಹಿಲ್ಸ್‌ ಅಧ್ಯಕ್ಷ ಅನಿಲ್‌ ಎಚ್‌.ಟಿ. ಉದ್ಘಾಟಿಸಲಿದ್ದು, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ| ಕರುಂಬಯ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಿಬಿರವನ್ನು ನೇತ್ರ ತಜ್ಞ ಡಾ| ಚೆರಿಯಮನೆ ಆರ್‌ ಪ್ರಶಾಂತ್‌ ಉದ್ಘಾಟಿಸಲಿದ್ದು, ಮಧುಮೇಹ ಶಿಬಿರವನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ| ನೆರಿಯನ ನವೀನ್‌ಕುಮಾರ್‌ ಉದ್ಘಾಟಿಸಲಿದ್ದಾರೆ ಎಂದರು.
ಯುವ ವೇದಿಕೆ ಉಪಾಧ್ಯಕ್ಷ ಪಾಣತ್ತಲೆ ಜಗದೀಶ್‌ ಮಂದಪ್ಪ, ನಿರ್ದೇಶಕರಾದ ಪುದಿಯನೆರವನ ರಿತೇಶ್‌ ಮಾದಯ್ಯ, ದಂಬೆಕೋಡಿ ಗಿರೀಶ್‌ ಹಾಗೂ ಚೆರಿಯಮನೆ ಕ್ರಿಕೆಟ್‌ ಹಬ್ಬದ ಕ್ರೀಡಾ ಸಮಿತಿ ಅಧ್ಯಕ್ಷಚೆರಿಯಮನೆ ಡಾ|| ರಾಮಚಂದ್ರ ಉಪಸ್ಥಿತರಿದ್ದರು. 

ಎ.22: ಕಬಡ್ಡಿ  ಪಂದ್ಯಾವಳಿ, ಉñಪ್ಪರಿಂದ ಚಾಲನೆ
ಕ್ರಿಕೆಟ್‌ ಪಂದ್ಯಾಟದ ಜತೆಗೆ ಕುಟುಂಬ ವಾರು ಪುರುಷರ ಕಬಡ್ಡಿ ಮತ್ತು ಮಹಿಳೆಯ ಮುಕ್ತ ಕಬಡ್ಡಿ ಪಂದ್ಯಾಟಗಳನ್ನೂ ಆಯೋಜಿಸಲಾಗು ತ್ತಿದ್ದು,ಎ.22ರಂದುಈ ಪಂದ್ಯ ನಡೆಯಲಿದೆ. ಈ ಪಂದ್ಯಾವಳಿಗೆ ಈಗಾಗಲೇ ಹೆಸರುಗಳನ್ನು ನೋಂದಾಯಿಸಲಾಗುತ್ತಿದ್ದು, ಮೊದಲು ಬರುವ 32 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅಲ್ಲದೆ ಮಹಿಳೆಯರಮುಕ್ತ ಕಬಡ್ಡಿಗೆ 8 ತಂಡಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು. ಕಬಡ್ಡಿ ಪಂದ್ಯಾಟಕ್ಕೆ ಹೆಸರು ನೋಂದಾಯಿಸುವ ತಂಡಗಳು ಮೊಬೈಲ್‌ ಸಂಖ್ಯೆ 9731009841 (ಕಪಿಲ್‌)ನ್ನು ಸಂಪರ್ಕಿಸುವಂತೆಯೂ ಕಟ್ಟೆಮನೆ ರೋಶನ್‌ ಮನವಿ ಮಾಡಿದರು. ಗೌಡ ಕುಟುಂಬಗಳ ಕಬಡ್ಡಿ ಪಂದ್ಯಾವಳಿಯನ್ನು ಅಂದು ಬೆಳಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯ ಕಬಡ್ಡಿ ಅಸೋಸಿಯೇಷನ್‌ ಜಂಟಿ ಕಾರ್ಯದರ್ಶಿ ಹಾಗೂ ಜಿಲ್ಲಾ ಅಸೋಸಿಯೇಷನ್‌ನ ಅಧ್ಯಕ್ಷ ಹೊಸೊಕ್ಲು ಉತ್ತಪ್ಪ ಅವರು ಉದ್ಘಾಟಸಲಿದ್ದಾರೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.