ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ


Team Udayavani, May 28, 2022, 6:01 PM IST

ಹಾಡಹಗಲೇ ರಿಯಲ್‌ ಎಸ್ಟೇಟ್‌ ವ್ಯಾಪಾರಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

ಬದಿಯಡ್ಕ: 80 ಲಕ್ಷ ರೂ. ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ತರ್ಕದ ಹಿನ್ನೆಲೆಯಲ್ಲಿ ರಿಯಲ್‌ ಎಸ್ಟೇಟ್‌ ವ್ಯಾಪಾರಿ ಬದಿಯಡ್ಕ ಗೋಳಿಯಡ್ಕದ ಮೊದೀನ್‌ ಕುಂಞಿ (49) ಅವರನ್ನು ಬದಿಯಡ್ಕ ಪೇಟೆಯಿಂದ ಹಾಡಹಗಲೇ ತಂಡವೊಂದು ಅಪಹರಿಸಿದ ಘಟನೆ ನಡೆದಿದೆ.

ವಿಷಯ ತಿಳಿದು ತತ್‌ಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ನಿಮಿಷಗಳೊಳಗೆ ಅಪಹರಣ ಮಾಡಿದ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚೆಂಗಳ ನಾಲ್ಕನೇ ಮೈಲು ನಿವಾಸಿಗಳಾದ ಶರೀಫ್‌, ಅಬ್ದುಲ್‌ ಹಕೀಂ, ಚಟ್ಟಂಚಾಲ್‌ ನಿವಾಸಿ ನಿಜಾಮುದ್ದೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೆ ಬಳಸಿದ ಕಪ್ಪು ಬಣ್ಣದ ಮಾರುತಿ 800 ಕಾರನ್ನು ಪೊಲೀಸರು ವಶಪಡಿಸಿದ್ದಾರೆ.

ಮೇ 27ರಂದು ಸಂಜೆ 4 ಗಂಟೆಗೆ ಸ್ಕೂಟರ್‌ನಲ್ಲಿ ಬದಿಯಡ್ಕ ಪೇಟೆಗೆ ಬಂದು ಹೊಟೇಲೊಂದರಲ್ಲಿ ಚಹಾ ಸೇವಿಸಿ ಹೊರಗೆ ಬರುತ್ತಿದ್ದ ಮೊದೀನ್‌ ಕುಂಞಿ ಅವರನ್ನು ಹೊರಗೆ ಕಾದು ನಿಂತಿದ್ದ ತಂಡ ಬಲವಂತವಾಗಿ ಹಿಡಿದು ಕಾರಿಗೆ ಹತ್ತಿಸಿ ಅಪಹರಿಸಿದೆ. ಈ ವೇಳೆ ಬೊಬ್ಬೆ ಕೇಳಿ ಸ್ಥಳೀಯರು ಅಲ್ಲಿಗೆ ತಲುಪುವಷ್ಟರಲ್ಲಿ ಕಾರು ವೇಗದಲ್ಲಿ ಪರಾರಿಯಾಗಿತ್ತು.

ವಿಷಯ ತಿಳಿದು ಎಸ್‌ಐ ಪಿ.ಕೆ. ವಿನೋದ್‌ ಕುಮಾರ್‌, ಪೊಲೀಸರಾದ ಇಸ್ಮಾಯಿಲ್‌, ಜಯಪ್ರಕಾಶ್‌, ಮನು ನೇತೃತ್ವದಲ್ಲಿ ತಲುಪಿದ ಪೊಲೀಸರ ತಂಡ ಕಾರನ್ನು ಹಿಂಬಾಲಿಸಿತು. ಮಾನ್ಯ ರಸ್ತೆಗೆ ತಲುಪಿದಾಗ ಪೊಲೀಸ್‌ ಜೀಪನ್ನು ಕಾರಿಗೆ ಅಡ್ಡಿವಿರಿಸಿ ಅಪಹರಣಕಾರರನ್ನು ಬಂಧಿಸಿದರು.

ಕಾರಿನೊಳಗೆ ಮೊದೀನ್‌ ಕುಂಞಿ ಅವರಿಗೆ ಚಾಕುನಿಂದ ಬೆರಳುಗಳಿಗೆ ಇರಿದು ತಂಡ ಗಾಯಗೊಳಿಸಿತ್ತು. ಮೊದೀನ್‌ ಕುಂಞಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಹರಣ ನಡೆಸಿದ ತಂಡದಲ್ಲಿದ್ದ ವ್ಯಕ್ತಿಯೋರ್ವನ ಮಧ್ಯೆ ಸೊತ್ತು ವ್ಯವಹಾರ ನಡೆದಿತ್ತು. ಈ ಸಂಬಂಧ ಮೊದೀನ್‌ ಕುಂಞಿ 80 ಲಕ್ಷ ರೂ. ನೀಡಲು ಇದೆಯೆಂದು ದೂರಲಾಗಿದೆ.

ಈ ವಿಷಯವಾಗಿ ಹಲವು ಬಾರಿ ಚರ್ಚೆ ನಡೆಸಿದ್ದರೂ ಪರಿಹಾರವುಂಟಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೊದೀನ್‌ ಕುಂಞಿ ಅವರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.