Crime News ಕಾಸರಗೋಡು ಅಪರಾಧ ಸುದ್ಧಿಗಳು


Team Udayavani, Dec 2, 2023, 12:19 AM IST

Crime News ಕಾಸರಗೋಡು ಅಪರಾಧ ಸುದ್ಧಿಗಳು

ಪೋಕ್ಸೋ ಕೇಸಿನ ಆರೋಪಿ ಆತ್ಮಹತ್ಯೆ
ಕಾಸರಗೋಡು: ಪೋಕ್ಸೋ ಪ್ರಕರಣದ ಆರೋಪಿ ಅಡೂರು ಚಾಮಕೊಚ್ಚಿ ಮಲ್ಲಂಪಾರೆಯ ದಿನೇಶನ್‌ ಯಾನೆ ಗಣೇಶನ್‌(40) ಚಾಮೆಕೊಚ್ಚಿ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಮುನ್ನ ಪಂಚಾಯತ್‌ ಸದಸ್ಯರಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022ರಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಆದೂರು ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೈಂಗಿಕ ಕಿರುಕುಳ: 189 ವರ್ಷ ಸಜೆ
ಕಾಸರಗೋಡು: ಏಳು ವರ್ಷದ ಬಾಲಕಿ ಹಾಗೂು ಅಪ್ರಾಪ್ತ ವಯಸ್ಕ ಇಬ್ಬರು ಆಕೆಯ ಸಹೋದರರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಳಾಲ್‌ ಅರಿಂಙಲ್‌ನ ಟಿ.ಜಿ. ಸುಧೀಶ್‌ ಆಲಿಯಾಸ್‌ ಪಪ್ಪು(25)ಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯ ವಿವಿಧ ಸೆಕ್ಷನ್‌ಗಳಲ್ಲಿ ಒಟ್ಟು 189 ವರ್ಷ ಸಜೆ ಹಾಗೂ 4.05 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ 2 ವರ್ಷ ನಾಲ್ಕು ತಿಂಗಳು ಹೆಚ್ಚುವರಿಯಾಗಿ ಸಜೆ ಅನುಭವಿಸುವಂತೆ ಹಾಗೆಯೇ ಶಿಕ್ಷೆಯನ್ನು 50 ವರ್ಷವಾಗಿ ಅನುಭವಿಸಿದರೆ ಸಾಕೆಂದು ತೀರ್ಪಿನಲ್ಲಿ ತಿಳಿಸಿದೆ.

ಆಟೋ ಚಾಲಕನ ವಿರುದ್ಧ ಪೋಕ್ಸೋ
ಕುಂಬಳೆ: ಹದಿನೇಳರ ಹರೆಯದಾಕೆಯನ್ನು ಗರ್ಭಿಣಿ ಯನ್ನಾಗಿಸಿದ ಆಟೋರಿಕ್ಷಾ ಚಾಲಕನ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಗೆ ಕಿರುಕುಳ: ಐದು ವರ್ಷ ಸಜೆ
ಕಾಸರಗೋಡು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೆರಿಯ ಮಂಡತ್ತಿಕಂಡದ ಸುಂದರನ್‌(62)ಗೆ ಹೊಸದುರ್ಗ ಫಾಸ್ಟ್‌ ಟ್ರ್ಯಾಕ್ ಸ್ಪೆಷಲ್‌ ನ್ಯಾಯಾಲಯ ಐದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಐದು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ಮಹಿಳೆಯ ಚಿನ್ನದ ಸರ ಎಗರಿಸಿ ಪರಾರಿ
ಬದಿಯಡ್ಕ: ದ್ವಿಚಕ್ರ ವಾಹನದಲ್ಲಿ ಬಂದು ಬದಿಯಡ್ಕ ಸಮೀಪದ ಬಾರಡ್ಕ ನಿವಾಸಿ ಬೀಡಿ ಕಾರ್ಮಿಕೆ ರೋಹಿಣಿ (52) ಅವರ ಕತ್ತಿನಿಂದ ಮೂರೂವರೆ ಪವನ್‌ನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ನಡೆದಿದೆ.

ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮ್ಯಾನೇಜರ್‌ಗೆ ಹಲ್ಲೆ
ಕುಂಬಳೆ: ಖಾಸಗಿ ಹಣಕಾಸು ಸಂಸ್ಥೆಗೆ ನುಗ್ಗಿ ಮ್ಯಾನೇಜರ್‌ ವಿದ್ಯಾನಗರ ಪನ್ನಿಪ್ಪಾರೆ ನಿವಾಸಿ ಜೀವನ್‌(33) ಅವರಿಗೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಅವರನ್ನು ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಸ್ಥೆಯ ಮಾಜಿ ನೌಕರ ಹಾಗೂ ಆತನ ಸಹೋದರ ಹಲ್ಲೆ ಮಾಡಿದ್ದಾಗಿ ದೂರಲಾಗಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.