Crime News ಕಾಸರಗೋಡು ಅಪರಾಧ ಸುದ್ದಿಗಳು


Team Udayavani, Jan 20, 2024, 8:36 PM IST

Crime News ಕುಂಬಳೆ ಅಪರಾಧ ಸುದ್ದಿಗಳು

ಅಪಘಾತ: ಸೇನೆಯ ಅಧಿಕಾರಿ ಸಾವು
ಕಾಸರಗೋಡು: ಗುಜರಾತ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಭಾರತೀಯ ವಾಯು ಪಡೆಯ ಅಧಿಕಾರಿ ನೀಲೇಶ್ವರ ಪಳ್ಳಿಕೆರೆ ಲಕ್ಷಿ$¾àನಾರಾಯಣ ದೇವಸ್ಥಾನ ಸಮೀಪದ ನಿವಾಸಿ ದಾಮೋದರನ್‌ ಅವರ ಪುತ್ರ ಉಣ್ಣಿ ದಾಮೋದರನ್‌(41) ಸಾವಿಗೀಡಾದರು.ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರಂತ ಸಂಭವಿಸಿತು.

ವೃದ್ಧೆಯ ಚಿನ್ನದ ಸರ ಅಪಹರಣ
ಕಾಸರಗೋಡು: ಜಾತ್ರೆ ವೀಕ್ಷಿಸಿ ಮನೆಗೆ ಮರಳುತ್ತಿದ್ದಾಗ ವೃದ್ಧೆಯ ಕತ್ತಿನಿಂದ ಬೈಕ್‌ನಲ್ಲಿ ಬಂದ ತಂಡವೊಂದು ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ನಡೆದಿದೆ.

ಮಡಿಕೈ ಕಾಲಿಚ್ಚಾಂಪೊದಿ ಪುದುಚೇರಿ ನಿವಾಸಿ ಕೆ.ಪಿ. ದೇವಕಿ (67) ಮಾದೋತ್‌ನ ದೇವಸ್ಥಾನ ವೊಂದರಲ್ಲಿ ಜಾತ್ರೆ ವೀಕ್ಷಿಸಿ ಮನೆಗೆ ವಾಪಸಾಗುತ್ತಿದ್ದಾಗ ಜ. 18ರ ಮುಂಜಾನೆ 5.30ಕ್ಕೆ ಬೈಕ್‌ನಲ್ಲಿ ಬಂದ ತಂಡ ಅದಯಿ ಸೇತುವೆ ಪರಿಸರದಲ್ಲಿ ಅವರ ಕತ್ತಿನಿಂದ ಎರಡೂವರೆ ಪವನ್‌ ಸರವನ್ನು ಎಗರಿಸಲಾಗಿದೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಚಿನ್ನ ಸಾಗಾಟ: ಇಬ್ಬರ ಬಂಧನ
ಕುಂಬಳೆ: ದುಬಾೖಯಿಂದ ಜೀನ್ಸ್‌, ಖರ್ಜೂರ, ಸುಗಂಧ ದ್ರವ್ಯದ ಬಾಟಲಿಗಳಲ್ಲಿ ಸುಮಾರು 43 ಲಕ್ಷ ರೂ. ಬೆಲೆ ಬಾಳುವ ಚಿನ್ನ ತುಂಬಿಸಿ ಸಾಗಿಸುತ್ತಿದ್ದ ಆರೋಪದಲ್ಲಿ ಕುಂಬಳೆಯ ಅಬ್ದುಲ್‌ ಲತೀಫ್‌ (31) ಮತ್ತು ಓಮಶ್ಶೇರಿಯ ಶರ್ಫುದ್ದೀನ್‌ (35) ಅವರನ್ನು ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬೆದರಿಕೆ, ಹಲ್ಲೆ: ಇಬ್ಬರ ಬಂಧನ
ಕುಂಬಳೆ: ಕ್ರಶರ್‌ನಿಂದ ಲಾರಿಯಲ್ಲಿ ಜಲ್ಲಿ ತುಂಬಿ ಸಾಗಿಸುತ್ತಿದ್ದಾಗ ತಡೆದು ನಿಲ್ಲಿಸಿ ಚಾಲಕರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇರಿಸಿದವರನ್ನು ಪ್ರಶ್ನಿಸಿದ ಕೋರೆ ಮಾಲಕನಿಗೆ ಹಲ್ಲೆಗೈದ ಆರೋಪದಲ್ಲಿ ಬದಿಯಡ್ಕ ಪೊಲೀಸರು ಅಹಮ್ಮದ್‌ ಮತ್ತು ಇಶಾಕ್‌ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

ಸ್ಕೂಟರ್‌ – ಟೆಂಪೋ ಢಿಕ್ಕಿ: ಯುವಕ ಸಾವು
ಕುಂಬಳೆ: ಮುಳ್ಳೇರಿಯ ಬಳಿಯ ದೇಲಂಪಾಡಿಯಲ್ಲಿ ಸ್ಕೂಟರ್‌ ಮತ್ತು ಟೆಂಪೊ ಢಿಕ್ಕಿಯಾಗಿ ಆದೂರು ಸಿಎ ನಗರ ನಿವಾಸಿ, ಖಾದರ್‌ – ಸಿಮ್ಲಾ ದಂಪತಿಯ ಪುತ್ರ ರೈಸ್‌ ಅನ್ವರ್‌ (18) ಅವರು ಸಾವಿಗೀಡಾಗಿದ್ದಾರೆ.ಇವರು ಮುಳ್ಳೇರಿಯದ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ಕೂಟರಲ್ಲಿ ತೆರಳುತ್ತಿದ್ದಾಗ ಟೆಂಪೊ ಮುಖಾಮುಖಿ ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಬದಿಯಡ್ಕ: ವರ್ಕ್‌ಶಾಪ್‌ನಿಂದ ಕಳವು
ಕುಂಬಳೆ: ಬದಿಯಡ್ಕ ನೆಕ್ರಾಜೆ ಆರ್ತಿಪ್ಪಳ್ಳದ ಕೊಂಬ್ರಾಜೆ ತಿಮೋತಿ ಕ್ರಾಸ್ತಾ ಅವರ ಬೋಳುಕಟ್ಟೆಯ ವರ್ಕ್‌ಶಾಪ್‌ನಿಂದ ಸುಮಾರು 1 ಲಕ್ಷ ರೂ. ಬೆಲೆಬಾಳುವ ಕಬ್ಬಿಣದ ಉಪಕರಣಗಳನ್ನು ಕಳವು ಮಾಡಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಓರ್ವನ ಮೇಲೆ ಶಂಕೆ ಇದ್ದು, ಆತ ಕದ್ದ ವಸ್ತುಗಳನ್ನು ಕಾಸರಗೋಡಿನಲ್ಲಿ ಮಾರಾಟ ಮಾಡಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.