ನಾಶನಷ್ಟ ಎದುರಿಸಲು ಜಿಲ್ಲೆ ಸರ್ವ ಸಜ್ಜು : ಜಿಲ್ಲಾಧಿಕಾರಿ


Team Udayavani, Jul 22, 2019, 5:50 AM IST

sajith-babu

ಕಾಸರಗೋಡು: ಬಿರುಸಿನ ಗಾಳಿಮಳೆಯಿಂದ ಉಂಟಾಗಬಹುದಾದ ನಾಶನಷ್ಟ ಎದುರಿಸಲು ಜಿಲ್ಲೆ ಸರ್ವಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು ತಿಳಿಸಿದರು.

ಜಿಲ್ಲಾ ದುರಂತ ನಿವಾರಣೆ ಪ್ರಾಧಿಕಾರ ಮೂಲಕ ಸಾರ್ವಜನಿಕರಿಗೆ, ಸಂಬಂಧಪಟ್ಟ ಇಲಾಖೆಗಳಿಗೆ ಸಂದರ್ಭೋಚಿತವಾಗಿ ಮಾಹಿತಿಗಳನ್ನು ನೀಡಿದ್ದು, ಸುರಿದ ಬಿರುಸಿನ ಗಾಳಿಮಳೆಯ ಸೂಚನೆಯನ್ನು ಮುಂಚಿತವಾಗಿ ಅರಿತುಕೊಳ್ಳಲು, ಸಂಭವಿಸಬಹುದಾಗಿದ್ದ ದೊಡ್ಡ ನಾಶನಷ್ಟಗಳನ್ನು ನಿಯಂತ್ರಿಸಲು ಸಾಧ್ಯವಾಗಿದೆ. ಕಂದಾಯ, ಪೊಲೀಸ್‌, ಮೀನುಗಾರಿಕೆ,ಅಗ್ನಿಶಾಮಕದಳ, ಕರಾವಳಿ ಪೊಲೀಸ್‌ ಇತ್ಯಾದಿ ದಳಗಳು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ ಎಂದವರು ತಿಳಿಸಿದರು.

ಮಧೂರು ಪಟ್ಲ ಪ್ರದೇಶದಲ್ಲಿ ಸಂಭವಿಸಿದ ಜಲಾವೃತದಿಂದ 33 ಕುಟುಂಬಗಳನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ ಎಂದರು.

ಇವರಲ್ಲಿ 40 ದಿನ ವಯೋಮಾನದ ಶಿಶು, ತಾಯಿ ಸಹಿತ ಮಂದಿಯನ್ನು ಅಗ್ನಿಶಾಮಕದಳದ ಸಹಾಯದಿಂದ ರಕ್ಷಿಸಲಾಗಿದೆ. ಪರಪ್ಪ ಗ್ರಾಮದ ಮುಂಡತ್ತಡ್ಕ ಪ್ರದೇಶದ ಕುಟುಂಬವೊಂದನ್ನು ಈ ರೀತಿ ರಕ್ಷಿಸಲಾಗಿದೆ. ಕಾಂಞಂಗಾಡ್‌ ಅರಯಿ ಸೇತುವೆ ಬಳಿ ವಾಸವಾಗಿರುವ 13 ಮಂದಿಯನ್ನು ಸಂರಕ್ಷಿಸಲಾಗಿದೆ ಎಂದವರು ತಿಳಿಸಿದರು.

ಮಳೆಯ ಹಿನ್ನೆಲೆಯಲ್ಲಿ ಕರ್ಗಲ್ಲ ಕೋರೆಗಳ ಚಟುವಟಿಕೆ ನಿಲುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ನೀರು ತುಂಬುವ ಕರ್ಗಲ್ಲ ಕೋರೆಗಳ ಸುತ್ತು ಸುರಕ್ಷೆ ಸೌಲಭ್ಯ ಏರ್ಪಡಿಸಬೇಕು ಎಂದರು.

ಶಿಕ್ಷಣಾಲಯಗಳ ಬಳಿಯಿರುವ ಕರ್ಗಲ್ಲ ಕೋರೆಗಳ ಬಗ್ಗೆ ಅತೀವ ಜಾಗ್ರತೆ ಪಾಲಿಸುವಂತೆ ಜಿಯಾಲಜಿಸ್ಟ್‌ ಮತ್ತು ಶಿಕ್ಷಣ ಇಲಾಖೆಗೆ ವಿಶೇಷ ಆದೇಶ ನೀಡಲಾಗಿದೆ. ಕಡಲ್ಕೊರೆತ ಎದುರಿಸುವ ನಿಟ್ಟಿನಲ್ಲಿ ಜಿಯೋ ಬ್ಯಾಗ್‌ ಬಳಸುವಂತೆ ನೀರಾವರಿ ಇಲಾಖೆಗೆ ಆದೇಶ ನೀಡಲಾಗಿದೆ. ಜಿಲ್ಲೆಯಲ್ಲಿ ಜು.23 ವರೆಗೆ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ ಎಂದವರು ನುಡಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.