ಸಂಪೂರ್ಣ ಪ್ರಯೋಜನಕರ‌ ಯೋಜನೆ ರೂಪಿಸಿ: ಪಿ. ಕರುಣಾಕರನ್‌


Team Udayavani, Mar 17, 2018, 9:30 AM IST

Karunakaran-15-3.jpg

ಕಾಸರಗೋಡು: ಜಿಲ್ಲೆಯ ವಾರ್ಷಿಕ ಯೋಜನೆಗಳಿಗೆ ರೂಪು ನೀಡುವ ಸಂದರ್ಭದಲ್ಲಿ ಅನುಕೂಲ ಹಾಗೂ ಪ್ರತಿಕೂಲ ಅಂಶಗಳನ್ನು ಗಮನಿಸಿಕೊಂಡು ಹೆಚ್ಚು ಸೂಕ್ತವಾಗಿಸಿ ಸಂಪೂರ್ಣ ಪ್ರಯೋಜನ ದೊರಕುವಂತೆ ಮಾಡಲು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸಾಧ್ಯವಾಗಬೇಕು. ಜತೆಗೆ ದೂರದೃಷ್ಟಿ ಹೊಂದಿರಬೇಕು ಎಂದು ಕಾಸರಗೋಡು ಸಂಸದ ಪಿ. ಕರುಣಾಕರನ್‌ ಹೇಳಿದ್ದಾರೆ. ಜಿಲ್ಲಾ  ಯೋಜನಾ ಸಮಿತಿಯ ಸಭಾಂಗಣದಲ್ಲಿ ಹದಿಮೂರನೇ ಪಂಚವಾರ್ಷಿಕ ಯೋಜನೆಯ ಅಂಗವಾಗಿ ಜರಗಿದ 2018-19ನೇ ವರ್ಷದ ಜಿಲ್ಲಾ  ಪಂಚಾಯತ್‌ನ ವಾರ್ಷಿಕ ಯೋಜನೆ ರಚನೆ ಪ್ರಕ್ರಿಯೆಯ ಅಂಗವಾಗಿರುವ ಅಭಿವೃದ್ಧಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆ ಜಾರಿಗೊಳಿಸಿ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ  ಜಿಲ್ಲಾ  ಪಂಚಾಯತ್‌ ನೊಂದಿಗೆ ಸಹಕರಿಸಿ ಬ್ಲಾಕ್‌, ಗ್ರಾಮ ಪಂಚಾಯತ್‌ಗಳು ಮುನ್ನಡೆಯಬೇಕು. ಜಿಲ್ಲೆಯ ಸಾವಿರಾರು ಹೆಕ್ಟರ್‌ ಬಂಜರು ಭೂಮಿಯನ್ನು ಕೃಷಿಯೋಗ್ಯವಾಗಿಸಲು ಸಾಧ್ಯವಾಗಬೇಕು. ಬೇಡಡ್ಕ ಗ್ರಾಮ ಪಂಚಾಯತ್‌ ಇದಕ್ಕೆ ಉತ್ತಮ ಮಾದರಿಯಾಗಿದೆ ಎಂದರು. ಜಿಲ್ಲಾ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಸಲು ಸಾಧ್ಯವಾಗಬೇಕು. ನಮ್ಮ ಜಿಲ್ಲೆಯ ಸಪ್ತ ಭಾಷೆಯನ್ನು  ನಮ್ಮ ನಾಡಿನ ಅಭಿವೃದ್ಧಿಗಾಗಿ ಬಳಸಲು ವ್ಯವಸ್ಥೆ  ಆಗಬೇಕು ಎಂದರು.

ನವಕೇರಳ ರಚನೆಗಾಗಿ ರಾಜ್ಯ ಸರಕಾರವು ಮುಂದಿಟ್ಟ  ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನ ಗೊಳಿಸಲು ಸಾಧ್ಯವಾದರೆ ಮತ್ತೂಂದು ಅಭಿವೃದ್ಧಿ ಮಾದರಿಯನ್ನು  ಸೃಷ್ಟಿಸಲು ಸಾಧ್ಯವಾಗುವುದು ಎಂದು ಪಿ. ಕರುಣಾ ಕರನ್‌ ಕಿವಿಮಾತು ಹೇಳಿದರು.

ಜಿಲ್ಲೆಯನ್ನು ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಆಗುವಂತೆ ಮಾಡಬೇಕು. ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳು ಕೂಡ ಯೋಜನಾ ಮೊತ್ತವನ್ನು ಸಮರ್ಥವಾಗಿ ಬಳಸಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಾನ ಜವಾಬ್ದಾರಿ ಹೊಂದಿದ್ದಾರೆ ಎಂದು ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ  ಪಂಚಾಯತ್‌ ಅಧ್ಯಕ್ಷ  ಎ.ಜಿ.ಸಿ. ಬಶೀರ್‌ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಕರಡು ಯೋಜನೆಯಲ್ಲಿ ಸೇರಿಸುವ ಹೊಸ ಪರಿಕಲ್ಪನೆಗಳ ಕ್ರೋಡೀಕರಣವನ್ನು ಪ್ರತಿ ಸಮಿತಿಗಳ ಅಧ್ಯಕ್ಷರು ಮಂಡಿಸಿದರು. ನೂತನ ಯೋಜನೆ ರಚನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‌ನ ದೂರದೃಷ್ಟಿ, ಅಭಿವೃದ್ಧಿ ತಂತ್ರಗಳ ಕುರಿತಾದ ವರದಿಯನ್ನು  ಡಿಪಿಸಿ ಸರಕಾರದ ಪ್ರತಿನಿಧಿ ಕೆ.ಬಾಲಕೃಷ್ಣನ್‌ ಮಂಡಿಸಿದರು.

ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್‌, ವಿವಿಧ ಸ್ಥಾಯೀ ಸಮಿತಿಗಳ ಅಧ್ಯಕ್ಷರಾದ ಫರೀದಾ ಝಕೀರ್‌ ಅಹಮ್ಮದ್‌, ಶಾನವಾಸ್‌ ಪಾದೂರು, ನ್ಯಾಯವಾದಿ ಎ.ಪಿ.ಉಷಾ, ಡಿಪಿಸಿ ಸರಕಾರಿ ಪ್ರತಿನಿಧಿ ಕೆ. ಬಾಲಕೃಷ್ಣನ್‌, ಜಿಲ್ಲಾ ಪಂಚಾಯತ್‌ ಕಾರ್ಯದರ್ಶಿ ಪಿ. ನಂದಕುಮಾರ್‌, ಜಿಲ್ಲಾ ಯೋಜನಾ ಸಮಿತಿಯ ಸದಸ್ಯರು, ಬ್ಲಾಕ್‌ ಮತ್ತು ಗ್ರಾಮ ಪಂಚಾಯತ್‌ ಅಧ್ಯಕ್ಷರು, ಕಾರ್ಯದರ್ಶಿಗಳು, ವಿವಿಧ ಕಾರ್ಯಪಡೆಗಳ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಆದ್ಯತೆಯೊಂದಿಗೆ ವಾರ್ಷಿಕ ಯೋಜನೆ 
ಸಂಯುಕ್ತ ಯೋಜನೆಗಳಿಗೆ ಆದ್ಯತೆ ನೀಡಿ ಜಿಲ್ಲೆಗೆ ಪ್ರಯೋಜನವಾಗುವ ರೀತಿಯಲ್ಲಿ ಜಿಲ್ಲಾ ಪಂಚಾಯತ್‌ 2018-19ನೇ ವಾರ್ಷಿಕ ಸಾಲಿಗೆ ಯೋಜನೆಗಳನ್ನು  ಜಾರಿಗೊಳಿಸಿಗಿದೆ. ಬಜೆಟ್‌ನ ಪಾಲು ಅಭಿವೃದ್ಧಿ ನಿಧಿಯ ಸಾಮಾನ್ಯ ನಿಧಿಯಲ್ಲಿ 35.81 ಕೋಟಿ ರೂ., ನಿರ್ವಹಣೆ ನಿಧಿಯಾಗಿ ರಸ್ತೆ , ಇತರ ಉದ್ದೇಶಗಳಿಗಾಗಿ 39.99 ಕೋಟಿ ರೂ. ಮಂಜೂರು ಮಾಡಲಾಗಿದೆ. ಒಟ್ಟಾರೆಯಾಗಿ 86 ಯೋಜನೆಗಳನ್ನು ಅಭಿವೃದ್ಧಿ ಕಾರ್ಯಾಗಾರದ ಪೂರ್ವಭಾವಿಯಾಗಿ ಮಂಡಿಸಲಾಗಿತ್ತು.

ಜಿಲ್ಲಾ  ಪಂಚಾಯತ್‌ ರಸ್ತೆಗಳಿಗಾಗಿ 24 ಕೋಟಿ ರೂ., ಗ್ರಾಮೀಣ ರಸ್ತೆಗಳ ನವೀಕರಣಕ್ಕಾಗಿ 10.14 ಕೋಟಿ ರೂ., ಲೈಫ್‌ ಮಿಷನ್‌, ಬದಿಯಡ್ಕದಲ್ಲಿ  3.50 ಎಕ್ರೆಯಲ್ಲಿ  ಊರ ಕೋಳಿ ಫಾರ್ಮ್, ಜಲಸಂರಕ್ಷಣೆಗಾಗಿ ಬಾವಿ ಮರುಪೂರಣ ನಿಟ್ಟಿನಲ್ಲಿ  ಕಾಸರಗೋಡು, ಕಾರಡ್ಕ, ಮಂಜೇಶ್ವರ ಬ್ಲಾಕ್‌ ಪಂಚಾಯತ್‌ಗಳಿಗಾಗಿ 50 ಲಕ್ಷ  ರೂ. ಯೋಜನೆ, ಕ್ಯಾನ್ಸರ್‌ ಮುಕ್ತ  ಜಿಲ್ಲೆಯನ್ನಾಗಿಸುವ ಯೋಜನೆ, ಅಂಗಲವಿಕರಿಗಾಗಿ, ಶಿಶುಪ್ರಿಯ ಅಂಗನವಾಡಿ ಕಟ್ಟಡ ನಿರ್ಮಾಣ, ಮಹಿಳೆಯರಿಗಾಗಿ ಮಕ್ಕಳಿಗೆ ಹಾಲುಣಿಸಲು ಪ್ರತ್ಯೇಕ ಕೇಂದ್ರ, ಮಹಿಳಾ ಸೌಹಾರ್ದ ಶೌಚಾಲಯ, ಶೀಲಾಂಚ್‌, ಬಡ್ಸ್‌ ಸ್ಕೂಲ್‌ ಮುಂತಾದ ಯೋಜನೆಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.