ನೂತನ ಆವಿಷ್ಕಾರದ ಮೂಲಕ ಇ-ಆರೋಗ್ಯ ಯೋಜನೆ


Team Udayavani, Jun 19, 2019, 6:10 AM IST

e-avishkara

ಕುಂಬಳೆ: ಕುಟುಂಬ ಆರೋಗ್ಯ ಕೇಂದ್ರಗಳಲ್ಲಿ ಜಾರಿಗೊಳ್ಳುತ್ತಿರುವ ಇ-ಆರೋಗ್ಯ ಯೋಜನೆ ನೂತನ ಆವಿಷ್ಕಾರದ ಮೂಲಕ ಜನಾಕರ್ಷಣೆ ಪಡೆಯಲಿದೆ.

ಈ ನೂತನ ಸೌಲಭ್ಯ ಮೂಲಕ ಚಿಕಿತ್ಸೆ ಆನ್‌ಲೆ„ನ್‌ ಮುಖಾಂತರ ಲಭ್ಯವಾಗಲಿದ್ದು, ಉಳಿದ ವಿಚಾರಗಳನ್ನು ಹೆಲ್ತ್‌ ಕಾರ್ಡ್‌ ಮೂಲಕ ಪಡೆಯಬಹುದಾಗಿದೆ.

ಆರೋಗ್ಯ ಕೇಂದ್ರಗಳಿಗೆ ಆಗಮಿಸುವ ರೋಗಿಗಳು ಆಧಾರ್‌ ನಂಬ್ರವನ್ನು ಸ್ವಾಗತ ಕೊಠಡಿ (ರಿಸೆಪ್ಶನ್‌ ಕೌಂಟರ್‌) ಯಲ್ಲಿ ನೀಡಿದರೆ ಅಲ್ಲಿಂದ ಐಡಿ ಕಾರ್ಡ್‌ ಲಭಿಸುವುದು. ಇದರೊಂದಿಗೆ ಆಧಾರ್‌ ಲಿಂಕ್‌ ನಡೆಸುವ ವ್ಯಕ್ತಿಯ ಆರೋಗ್ಯ ಸಂಬಂಧಿ‌ ವಿಚಾರಗಳು ದಾಖಲಾಗುವುದು.

ಎಲ್ಲ ವಿಚಾರ ದಾಖಲು
ಧೂಮಪಾನ, ಕುಡಿತ ಇತ್ಯಾದಿ ದುಶ್ಚಟಗಳು, ಬದುಕಿನ ರೀತಿ, ವಾಸಿಸುತ್ತಿರುವ ಪ್ರದೇಶದ ಪರಿಸ್ಥಿತಿ ಇತ್ಯಾದಿ ಸಮಗ್ರ ವಿಚಾರಗಳೂ ಇದರಲ್ಲಿ ನಮೂದನೆಗೊಳ್ಳುವುವು. ಚಿಕಿತ್ಸೆಗೆ ಸಂಬಂಧಿಸಿದ ತಪಾಸಣೆಯ ವರದಿಗಳೆಲ್ಲವೂ ಕಾರ್ಡಿಗೆ ಆನ್‌ ಲೆ„ನ್‌ ಮೂಲಕ ಅಪ್‌ ಲೋಡ್‌ ಆಗುವುದು.

ಈ ಕಾರ್ಡ್‌ ಬಳಸಿ ವೈದ್ಯರು ರೋಗಿಯ ಎಲ್ಲ ವಿಚಾರಗಳನ್ನೂ ತಿಳಿದುಕೊಳ್ಳಲು ಸಾಧ್ಯವಾಗುವುದು. ಮನೆಯಲ್ಲಿದ್ದುಕೊಂಡೇ ರೋಗಿಗಳು ವೈದ್ಯರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿರುವುದು ಇದರ ಇನ್ನೊಂದು ವಿಶೇಷವಾಗಿದೆ. ಜತೆಗೆ ಪ್ರಯೋಗಾಲಯ, ಔಷಧಿ ಅಂಗಡಿ ಇತ್ಯಾದಿಗಳ ಟೋಕನ್‌ ಪಡೆಯಲೂ ಸಾಧ್ಯವಾಗಲಿದೆ. ಯಾವುದೇ ಸರಕಾರಿ ಮೆಡಿಕಲ್‌ ಕಾಲೇಜಿನ ವೈದ್ಯರ ಟೋಕನ್‌ ಬೇಕಿದ್ದರೂ ಈ ಕಾರ್ಡ್‌ನ ಸಹಾಯದಿಂದ ಪಡೆದುಕೊಳ್ಳಬಹುದು.ರೆಫರ್‌ ನಡೆಸುವ ರೋಗಿಗಳು ಎಲ್ಲ ದಾಖಲೆ ಪತ್ರಗಳನ್ನೂ ಒಯ್ಯಬೇಕಿಲ್ಲ. ಒಂದು ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ವಿಚಾರಗಳೂ ಆಧಾರ್‌ ಮೂಲಕ ಲಭಿಸುವ ಹಿನ್ನೆಲೆಯಲ್ಲಿ ಹರಡುವ ರೋಗಗಳು ಇತ್ಯಾದಿಗಳನ್ನು ಶೀಘ್ರದಲ್ಲೇ ಪತ್ತೆಹಚ್ಚಿ ಅಗತ್ಯದ ಪ್ರತಿರೋಧ ಚಟುವಟಿಕೆಗಳನ್ನು ನಡೆಸಲು ಇ-ಹೆಲ್ತ್‌ ಯೋಜನೆ ಮೂಲಕ ಸುಲಭವಾಗಲಿದೆ. ಜತೆಗೆ ಕೇಂದ್ರ-ರಾಜ್ಯ ಸರಕಾರಗಳ ಆರೋಗ್ಯ ವಿಮೆ ಜಾರಿಗೊಳಿಸಲು ಹೆಲ್ತ್‌ ಕಾರ್ಡ್‌ ಸೌಲಭ್ಯ ಪೂರಕವಾಗಲಿದೆ.

ಇದರಂಗವಾಗಿ ಮೊಗ್ರಾಲ್‌ ಪುತ್ತೂರು ಕುಟುಂಬ ಆರೋಗ್ಯ ಕೇಂದ್ರದಲ್ಲಿ ಇ-ಹೆಲ್ತ್‌ ಯೋಜನೆ ಜಾರಿಗೊಂಡಿದೆ. ಮೊಗ್ರಾಲ್‌ ಪುತ್ತೂರು ಗ್ರಾ. ಪಂ.ನಲ್ಲಿ ಶೇ. 70 ಮನೆಗಳು ಈಗ ಇ-ಹೆಲ್ತ್‌ ಯೋಜನೆಯಲ್ಲಿ ಅಳವಡಿಸಲಾಗಿದೆ. ಇದನ್ನು ಶೇ. 100ಕ್ಕೊಯ್ಯುವ ಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಐ.ಎಸ್‌.ಒ. ಸರ್ಟಿಫಿಕೆಟ್‌ ಪಡೆದ ಪ್ರಥಮ ಎಫ್‌.ಎಚ್‌.ಸಿ. ಎಂಬ ಹೆಗ್ಗಳಿಕೆಗೆ ಮೊಗ್ರಾಲ್‌ ಪುತ್ತೂರಿನ ಕುಟುಂಬ ಆರೋಗ್ಯ ಕೇಂದ್ರ ಪಾತ್ರವಾಗಿದೆ. ಇ-ಹೆಲ್ತ್‌ ಯೋಜನೆ ಜಾರಿಗೊಳ್ಳುವ ಜಿಲ್ಲೆಯ ಎರಡನೇ ಕೇಂದ್ರವೂ ಇದಾಗಿದೆ. ಕಯ್ಯೂರು-ಚೀಮೇನಿ ಕುಟುಂಬ ಆರೋಗ್ಯ ಕೇಂದ್ರ ಮೊದಲ ಕೇಂದ್ರವಾಗಿದೆ ಮೊಗ್ರಾಲ್‌ ಪುತ್ತೂರು ಕುಟುಂಬ ಆರೋಗ್ಯ ಕೇಂದ್ರದಲ್ಲಿ ಇ-ಹೆಲ್ತ್‌ ಯೋಜನೆಯ ಜಾರಿ ಸಮಾರಂಭ ಜರಗಿತು. ಮೊಗ್ರಾಲ್‌ ಪುತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಎ.ಎ. ಜಲೀಲ್‌ ಯೋಜನೆಯನ್ನು ಉದ್ಘಾಟಿಸಿದರು. ಗ್ರಾ.ಪಂ.ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಹಮೀದ್‌ ಬೆಳ್ಳೂರು ಅಧ್ಯಕ್ಷತೆ ವಹಿಸಿದ್ದರು.

ವೈದ್ಯಾಧಿಕಾರಿ ಡಾ| ನಾಸ್ಮಿನ್‌ ಜೆ. ನಝೀರ್‌ ವರದಿ ವಾಚಿಸಿದರು. ಆರೋಗ್ಯ ಇನ್ಸ್‌ ಪೆಕ್ಟರ್‌ ಬಿ. ಅಶ್ರಫ್‌, ಪಂಚಾಯತ್‌ ಸದಸ್ಯೆ ಇ.ಪ್ರಮೀಳಾ, ಇ-ಹೆಲ್ತ್‌ ಸಂಚಾಲಕಿ ಸಜಿತಾ, ಆಸ್ಪತ್ರೆ ಅಭಿವೃದ್ಧಿ ಸಮಿತಿ ಸದಸ್ಯ ನಾಂ ಹನೀಫ, ಫಾರ್ಮಾಸಿಸ್ಟ್‌ ರತೀಶ್‌, ಆಸ್ಪತ್ರೆ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.