ಮಡಿಕೇರಿ: ಮರಗಳನ್ನು ಬೀಳಿಸಿ, ರೈಲ್ವೆ ಕಂಬಿಯ ಬೇಲಿಯನ್ನು ಜಖಂಗೊಳಿಸಿದ ಸಲಗ
Team Udayavani, Nov 3, 2021, 3:05 PM IST
ಮಡಿಕೇರಿ: ತ್ಯಾಗತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಬೆಳೆಗಾರ ಹಾಗೂ ಗ್ರಾ.ಪಂ ಸದಸ್ಯ ಮನುಮಹೇಶ್ ಅವರ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಸಾಕಷ್ಟು ಹಾನಿ ಮಾಡಿದೆ.
ನೀಲಗಿರಿ ಮರಗಳನ್ನು ನೆಲಗುರುಳಿಸಿದೆ, ಕಾವೇರಿ ನದಿ ಬಳಿ ಆನೆಗಳ ದಾಳಿಯನ್ನು ತಡೆಯಲು ಅಳವಡಿಸಿರುವ ರೈಲ್ವೆ ಕಂಬಿಯ ಬೇಲಿಯನ್ನು ಜಖಂಗೊಳಿಸಿದೆ.
ತೋಟಕ್ಕೆ ಆಗಿರುವ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಮನುಮಹೇಶ್ ಒತ್ತಾಯಿಸಿದ್ದಾರೆ. ರೈಲ್ವೆ ಕಂಬಿಗಳ ಬೇಲಿ ಆನೆಗಳನ್ನು ತಡೆಯುವಲ್ಲಿ ವಿಫಲವಾಗಿದ್ದು, ಸೋಲಾರ್ ಬೇಲಿಯನ್ನು ನಿರ್ಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹವಾಗುಣ ವೈಪರೀತ್ಯದೊಂದಿಗೆ ಕಾಡಾನೆಗಳ ಹಾವಳಿಯೂ ಮಿತಿ ಮೀರಿದ್ದು, ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆದಂತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!