ಕಲೆಗೆ ಈಶ್ವರಯ್ಯರ ಕೊಡುಗೆ ಅನನ್ಯ: ಡಾ| ವರದರಾಜ ಚಂದ್ರಗಿರಿ
Team Udayavani, Feb 8, 2019, 1:00 AM IST
ಮಂಜೇಶ್ವರ: ಕರಾವಳಿಯಲ್ಲಿ ಸಂಗೀತ, ಸಾಹಿತ್ಯ, ಯಕ್ಷಗಾನ, ಜಾನಪದ ಕಲೆಗಳಿಗೆ ಉತ್ತೇಜನ ನೀಡಿ ಅದರ ಬೆಳವಣಿಗೆಗೆ ಪೂರಕವಾಗುವ ರೀತಿಯಲ್ಲಿ ವಿಮರ್ಶಾತ್ಮಕ ಲೇಖನಗಳನ್ನು ಬರೆದು ಪ್ರೋತ್ಸಾಹಿಸುತ್ತಿದ್ದ ಈಶ್ವರಯ್ಯನವರ ನಿಧನ ನಿಜಾರ್ಥದಲ್ಲಿ ಪತ್ರಿಕಾರಂಗಕ್ಕೆ, ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ತುಂಬಲಾರದ ನಷ್ಟವೆಂದು ಖ್ಯಾತ ಸಾಹಿತಿ, ಚಿಂತಕ, ಪ್ರಾಧ್ಯಾಪಕ ಡಾ|ವರದರಾಜ ಚಂದ್ರಗಿರಿ ಅಭಿಪ್ರಾಯಪಟ್ಟಿದ್ದಾರೆ.
ಮಂಜೇಶ್ವರದ ಗಿಳಿವಿಂಡು ಆವರಣದಲ್ಲಿ ಕ.ಸಾ.ಪ. ಮತ್ತು ಗೋವಿಂದ ಪೈ ಸ್ಮಾರಕ ಟ್ರಸ್ಟ್ ಆಯೋಜಿಸಿದ ಖ್ಯಾತ ಪತ್ರಕರ್ತ, ಸಾಹಿತ್ಯ, ಸಂಗೀತ, ಯಕ್ಷಗಾನ, ಜಾನಪದ ಕಲೆಗಳ ವಿಮರ್ಶಕ ದಿ| ಅನಂತಪುರ ಈಶ್ವರಯ್ಯ ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪತ್ರಕರ್ತ, ಸಂಘಟಕ ದಯಾಸಾಗರ ಚೌಟ ಮುಂಬೈ ಅವರು ಈಶ್ವರಯ್ಯ ಅವರ ಜೊತೆಗಿನ ಒಡನಾಟದ ಸವಿನೆನಪನ್ನು ಹಂಚಿಕೊಂಡರು. ಶಾಸ್ತ್ರೀಯವಾಗಿ ಸಂಗೀತವನ್ನು ಅಭ್ಯಸಿಸಿಲ್ಲವಾದರೂ ಈಶ್ವರಯ್ಯನವರು ಸಂಗೀತ ಕಲೆಗಳ ಕುರಿತು ಆಳವಾದ ಅಧ್ಯಯನ ಮಾಡಿದ್ದರು. ಅವರು ವಿಮರ್ಶಾತ್ಮಕ ಲೇಖನಗಳು ಈ ಕಲಾ ಪ್ರಕಾರಗಳ ಬೆಳವಣಿಗೆಗೆ ಪೂರಕವಾಗುತ್ತಿತ್ತು ಎಂದು ಅವರು ಹೇಳಿದರು.
ಖ್ಯಾತ ಪಿಟೀಲು ವಾದಕ, ಕಾಸರ ಗೋಡು ಸರಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಅನಂತಪದ್ಮನಾಭ ಅವರು ಈಶ್ವರಯ್ಯ ಅವರಿಗೆ ಕಲೆಗಳ ಬಗೆಗಿದ್ದ ಕಾಳಜಿಅಸಾಮಾನ್ಯ. ಕಲಾ-ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲೇ ನಡೆಯಲಿ ಅಲ್ಲಿಗೆ ತೆರಳಿ ಸಂಪೂರ್ಣ ವೀಕ್ಷಿಸಿದ ಬಳಿಕವೇ ವಿಮರ್ಶೆಗಳನ್ನು ಬರೆಯುತ್ತಿದ್ದರು ಎಂದು ಹೇಳಿ ಅವರೊಂದಿಗಿನ ಒಡನಾಟಗಳ ಬಗ್ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ