ಸುಂಟರಗಾಳಿ ರಕ್ಷಾ ಕೇಂದ್ರ ಸ್ಥಾಪನೆ


Team Udayavani, Oct 31, 2018, 4:27 PM IST

31-october-17.gif

ಕಾಸರಗೋಡು: ಪದೇ ಪದೇ ಸಂಭವಿಸುವ ಸುಂಟರಗಾಳಿಯಿಂದ ರಕ್ಷಣೆ ಪಡೆಯಲು ಕಾಸರಗೋಡು ಜಿಲ್ಲೆಯ ಮೂರು ಕೇಂದ್ರಗಳು ಸಹಿತ ರಾಜ್ಯದ ಐದು ಕೇಂದ್ರಗಳಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುವುದು.

ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ ಅಂಗವಾಗಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ತೆರೆಯಲಾಗುವುದು. ಕೇಂದ್ರ ಸರಕಾರದ ಸ್ವಾಧೀನದಲ್ಲಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಸ್ಥಾಪಿಸಿರುವ ಸುಂಟರಗಾಳಿ ಮುನ್ನೆಚ್ಚರಿಕೆ ಕೇಂದ್ರದ ಬೆನ್ನಲ್ಲೇ ವಿಶ್ವ ಬ್ಯಾಂಕ್‌ನ ನೆರವಿನೊಂದಿಗೆ ರಾಜ್ಯ ಸರಕಾರ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸುತ್ತಿದೆ. ಈ ಮಹತ್ವದ ಯೋಜನೆಗೆ 16.93 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದ್ದು, ಯೋಜನೆಗೆ ಆಡಳಿತಾನುಮತಿ ಲಭಿಸಿದೆ. ಈ ಬಗ್ಗೆ ಅ. 26ರಂದು ಅಡಿಶನಲ್‌ ಚೀಫ್‌ ಸೆಕ್ರೆಟರಿ ಪಿ.ಎಚ್‌. ಕುರ್ಯನ್‌ ಆದೇಶ ಹೊರಡಿಸಿದ್ದಾರೆ. ಆರಂಭದಲ್ಲಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಐದು ಕೇಂದ್ರಗಳಲ್ಲಿ ಮಲ್ಟಿ ಪರ್ಪಸ್‌ ಸೈಕ್ಲೋನ್‌ ಶೆಲ್ಟರ್‌ (ವಿವಿಧೋದ್ದೇಶ ಸುಂಟರಗಾಳಿ ರಕ್ಷಾ ಕೇಂದ್ರಗಳು) ಸ್ಥಾಪಿಸಲಾಗುವುದು. ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ (ರಾಷ್ಟ್ರೀಯ ಸುಂಟರಗಾಳಿ ಶಮನ ಯೋಜನೆ) ದ್ವಿತೀಯ ಹಂತವಾಗಿ ರಾಜ್ಯ ಡಿಸಾಸ್ಟರ್‌ ಮೆನೇಜ್‌ಮೆಐಟ್‌ ಇಲಾಖೆ ಯೋಜನೆಯನ್ನು ಜಾರಿಗೊಳಿಸಲಿದೆ.

ಒಟ್ಟು ವೆಚ್ಚದ ಶೇ.75 ರಷ್ಟು ಮೊತ್ತವನ್ನು ವಿಶ್ವ ಬ್ಯಾಂಕ್‌ ವಹಿಸಿಕೊಳ್ಳಲಿದೆ. ಉಳಿದ ಶೇ.25ರಷ್ಟು ಮೊತ್ತವನ್ನು ಕೇರಳ ಸರಕಾರ ವಹಿಸಿಕೊಳ್ಳಲಿದೆ. ಸುಂಟರಗಾಳಿಯ ಬಗ್ಗೆ ಮುನ್ನೆಚ್ಚರಿಕೆ ವ್ಯವಸ್ಥೆ ಸ್ಥಾಪಿಸುವುದು, ನೌಕರರಿಗೆ, ತಜ್ಞರಿಗೆ ದುರಿತ ನಿವಾರಣೆ, ರಕ್ಷಣಾ ಕಾರ್ಯ, ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ತರಬೇತಿ ನೀಡಲಾಗುವುದು. ಸುಂಟರ ಗಾಳಿಯಲ್ಲದೆ ನೆರೆ ಸಂದರ್ಭ, ಗುಡ್ಡ ಕುಸಿತ ಮೊದಲಾದ ಪ್ರಾಕೃತಿಕ ವಿಕೋಪಗಳಿಂದಲೂ ರಕ್ಷಣೆ ಪಡೆಯಲು ಈ ಯೋಜನೆಯಿಂದ ನೆರವಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಾಗಿ ಎಂಟು ಕೇಂದ್ರಗಳಲ್ಲಿ 11 ಸುಂಟರಗಾಳಿ ರಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಕಾಸರಗೋಡು ಜಿಲ್ಲೆಯಲ್ಲಿ ಕೂಡ್ಲು (ಮೂರು ಕೋಟಿ ರೂ.), ಕುಂಬಳೆ (2.72 ಕೋಟಿ ರೂ.) ಮತ್ತು ಹೊಸದುರ್ಗ ತಾಲೂಕಿನ ಪುಲ್ಲೂರು (3.66 ಕೋಟಿ ರೂ.), ಕಣ್ಣೂರು ಜಿಲ್ಲೆಯ ಚಾಲಾಡ್‌ (3.80 ಕೋಟಿ ರೂ.) ಮತ್ತು ತಲಶ್ಯೇರಿಯ ಕದಿರೂರು (3.75 ಕೋಟಿ ರೂ.) ನಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿಧಿ ಮಂಜೂರು ಮಾಡಲಾಗಿದೆ. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.