ಪ್ರತಿ ಮತವೂ ಮಹತ್ವದ್ದು: ಗಣೇಶ್
Team Udayavani, Apr 10, 2019, 6:30 AM IST
ಕುಂಬಳೆ: ಪ್ರಜಾಪ್ರಭುತ್ವ ನೀತಿಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದು ಎಂದು ಲೋಕಸಭಾ ಕ್ಷೇತ್ರ ಚುನಾವಣೆಯ ಜಿಲ್ಲಾ ಮಟ್ಟದ ನಿರೀಕ್ಷಕ ಎಸ್. ಗಣೇಶ್ ಹೇಳಿದರು.
ಸ್ವೀಪ್ ವತಿಯಿಂದ ಮತದಾನ ಜಾಗೃತಿ ಸಂಬಂಧ ಪರ್ಯಟನೆ ನಡೆಸುತ್ತಿರುವ “ನನ್ನ ಮತದಾನ, ನನ್ನ ಹಕ್ಕು’ ಎಂಬ ಕನ್ನಡ ಬೀದಿನಾಟಕ ಉದ್ಘಾಟನೆ ಸಂಬಂಧ ಕುಂಬಳೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ದೇಶವನ್ನು ಯಾರು ಮುನ್ನಡೆಸಬೇಕು ಎಂದು ತೀರ್ಮಾನಿಸುವ ಹಕ್ಕು ಜನತೆಯನ್ನು. ಪ್ರತಿ ಪೌರನೂ ಸಂವಿಧಾನ ಪ್ರಕಾರದ ಕರ್ತವ್ಯವನ್ನು ಪಾಲಿಸಬೇಕೆಂದರು.
ಬೀದಿ ನಾಟಕ ಪರ್ಯಟನೆಯನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಅವರು ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಯಾರ ಮತದಾನವೂ ಚಲಾವಣೆಯಾಗದೇ ಇರಕೂಡದು ಎಂಬ ನಿಟ್ಟಿನಲ್ಲಿ ಸಮಾಜ ಮುಂಜಾಗರೂಕತೆ ವಹಿಸಬೇಕು ಎಂದರು.
ಮಂಜೇಶ್ವರ, ಕಾಸರಗೋಡು ವಿಧಾನಸಭೆ ಕ್ಷೇತ್ರಗಳಲ್ಲಿ ಉಳಿದೆಡೆಗೆ ಹೋಲಿಸಿದರೆ ಮತಚಲಾವಣೆ ಕಡಿಮೆಯಾಗಿದ್ದು, ಈ ನಿಟ್ಟಿನಲ್ಲಿ ಜಾಗƒತಿ ಮೂಡಿಸಿ ಎಲ್ಲ ಮತದಾತರೂ ಮತಚಲಾವಣೆ ನಡೆಸುವಂತೆ ಸಮಾಜ ಯತ್ನಿಸಬೇಕೆಂದು ಜಿಲ್ಲಾಧಿಕಾರಿಯವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ