ರಸ್ತೆಯಲ್ಲೇ ಅಬಕಾರಿ ಅಧಿಕಾರಿಗಳ ಹೊಡೆದಾಟ: ಪ್ರಕರಣ ದಾಖಲು
Team Udayavani, Apr 17, 2020, 8:45 AM IST
ಮಡಿಕೇರಿ: ಆಲೂರು ಸಿದ್ದಾಪುರದಲ್ಲಿ ಅಕ್ರಮ ಮದ್ಯ ಮಾರಾಟದ ಪರಿಶೀಲನೆಗಾಗಿ ತೆರಳಿದ್ದ ಅಬಕಾರಿ ಅಧಿಕಾರಿಗಳು ಹಾದಿ ರಂಪ ಮಾಡಿಕೊಂಡಿದ್ದು, ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಅಬಕಾರಿ ಉಪ ಅಧೀಕ್ಷಕ ಶಿವಪ್ಪ ಅವರು ತೆರಳಿದ ಸ್ವಲ್ಪ ಹೊತ್ತಿನ ಬಳಿಕ ಇದೇ ಸ್ಥಳಕ್ಕೆ ಬಂದ ಅಬಕಾರಿ ಇನ್ಸ್ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಣ್ಣ ಅವರ ನಡುವೆ ಅಕ್ರಮ ಮದ್ಯ ಪರಿಶೀಲನೆಗೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ಮಾತ್ರವಲ್ಲದೇ ಇವರಿಬ್ಬರ ನಡುವೆ ತೀರಾ ಅಶ್ಲೀಲ ಪದಗಳ ಬೈಗುಳವಾಗಿದ್ದು, ಬಳಿಕ ಅಧಿಕಾರಿಗಳು ಕೈಕೈ ಮಿಲಾಯಿಸಿಕೊಂಡಿದ್ದಾರೆ.
ವಾಹನ ಚಾಲಕ ಮನೋಹರ್ ಕೂಡ ಶಿವಣ್ಣ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳ ಈ ಬೀದಿ ಕಾಳಗವನ್ನು ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ.
ಶನಿವಾರ ಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಪರಿಶೀಲನೆ ನಡೆಸಿರುವ ಕೊಡಗು ಜಿಲ್ಲಾ ಅಬಕಾರಿ ಆಯುಕ್ತೆ ಬಿಂದುಶ್ರೀ ಅವರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…