ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ
Team Udayavani, May 23, 2024, 6:32 PM IST
ಕಾಸರಗೋಡು: ಮಜೀರ್ಪಳ್ಳ ಬದಿಯೂರು ನಿವಾಸಿ ಮುಹಮ್ಮದ್ ಅವರ ಪುತ್ರ ಅಶ್ರಫ್ (44) ಸಾವಿನಲ್ಲಿ ಸಂಶಯವಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಎರಡು ವಾರಗಳ ಹಿಂದೆ ದಫನಗೈದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಲು ಆರ್.ಡಿ.ಒ. ಅನುಮತಿ ನೀಡಿದ್ದು, ಅದರಂತೆ ಪರೀಕ್ಷೆ ನಡೆಸಲು ಮಂಜೇಶ್ವರ ಸಿ.ಐ ಕೆ.ರಾಜೀವ್ ನೇತೃತ್ವದಲ್ಲಿ ಪೊಲೀಸರು ಕ್ರಮ ಆರಂಭಿಸಿದ್ದಾರೆ.
ಮೃತದೇಹ ದಫನಗೈದ ಕನ್ಯಾನದ ಮಸೀದಿ ಪರಿಸರಕ್ಕೆ ಪೊಲೀಸರು ಹಾಗೂ ಸಂಬಂಧಿಕರು ತೆರಳಿದ್ದಾರೆ.
ಅಶ್ರಫ್ ಮೇ 6ರಂದು ಬೆಳಗ್ಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 5ರಂದು ರಾತ್ರಿ ಮನೆಯಲ್ಲಿ ನಿದ್ರಿಸಿದ್ದ ಅವರು ಮರುದಿನ ಬೆಳಗ್ಗೆ ಎದ್ದಿರಲಿಲ್ಲ. ಮನೆಯವರು ಪರಿಶೀಲಿಸಿದಾಗ ಅವರು ಮೃತಪಟ್ಟ ಸ್ಥಿತಿಯಲ್ಲಿದ್ದರು. ಬಳಿಕ ಮೃತದೇಹವನ್ನು ಕನ್ಯಾನದ ರಹ್ಮಾನಿಯ ಜುಮಾ ಮಸೀದಿಯ ಬಳಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.
ಮೃತರ ಸಹೋದರ, ಕನ್ಯಾನ ಮರಾಟಿಮೂಲೆಯಲ್ಲಿರುವ ಇಬ್ರಾಹಿಂ ಅವರು ಸಾವಿನಲ್ಲಿ ನಿಗೂಢತೆಗಳಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ
HPV: ಹ್ಯೂಮನ್ ಪ್ಯಾಪಿಲೋಮಾವೈರಸ್ (ಎಚ್ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್
Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ
Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…
EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.