Father, son ನಿಗೂಢ ಸಾವು; ಕ್ರಿಯಾ ಸಮಿತಿ ಪದಾಧಿಕಾರಿಗಳಿಂದ ಹೇಳಿಕೆ ದಾಖಲಿಸಿದ ಪೊಲೀಸ್
Team Udayavani, Aug 19, 2023, 10:07 PM IST
ಕುಂಬಳೆ: ಯುವಮೋರ್ಚಾ ನೇತಾರ ಹಾಗು ತಂದೆಯ ನಿಗೂಢ ಸಾವಿಗೆ ಸಂಬಂಧಿಸಿ ಲಭಿಸಿದ ದೂರಿನ ಮೇರೆಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದರಂಗವಾಗಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಚೆಯರ್ವೆುàನ್ ಪ್ರದೀಪ್ ಆರಿಕ್ಕಾಡಿ, ಸಂಚಾಲಕ ಮೋಹನ್ ಬಂಬ್ರಾಣ ಅವರಿಂದ ಕುಂಬಳೆ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ.
ಬಂಬ್ರಾಣದ ಕಲ್ಕುಳದ ಮೂಸ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಯುವಮೋರ್ಚಾ ಕುಂಬಳೆ ಮಂಡಲ ಸಮಿತಿ ಉಪಾಧ್ಯಕ್ಷರಾಗಿದ್ದ ರಾಜೇಶ್(30) ಕಳೆದ ತಿಂಗಳ 10 ರಂದು ನಾಪತ್ತೆಯಾಗಿ ಬಳಿಕ ಉಳ್ಳಾಲ ಬಂಗರ ಸಮುದ್ರದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇವರ ಸಾವಿನಲ್ಲಿ ನಿಗೂಢತೆಗಳಿವೆಯೆಂದೂ, ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಪೊಲೀಸರಲ್ಲಿ ಆಗ್ರಹಿಸಿದ್ದರು. ರಾಜೇಶ್ ಸಾವಿನಲ್ಲಿ ನಿಗೂಢತೆಗಳಿವೆಯೆಂದೂ ಈ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದ ರಾಜೇಶ್ ಅವರ ತಂದೆ ಲೋಕನಾಥ್ ಅವರ ಸಾವಿನಲ್ಲೂ ನಿಗೂಢತೆಗಳಿವೆಯೆಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಆರೋಪಕ್ಕೆಡೆಯಾದ ಇಬ್ಬರು ತಲೆಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ