ನಿರೀಕ್ಷೆಗಳ ಬಲೆ ಹೆಣೆಯುತ್ತಿರುವ ಬೆಸ್ತರು


Team Udayavani, Jul 7, 2017, 3:45 AM IST

bale.jpg

ಕಾಸರಗೋಡು: ಟ್ರಾಲಿಂಗ್‌ ನಿಷೇಧದ ಹಿನ್ನೆಲೆಯಲ್ಲಿ ಜೂ.14 ರ ಮಧ್ಯ ರಾತ್ರಿಯಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದೆ ಕರಾವಳಿ ತೀರದಲ್ಲಿ ತಂದು ನಿಲ್ಲಿಸಿದ ದೋಣಿಗಳು ಮುಂದಿನ ಮೀನುಗಾರಿಕಾ ಸೀಸನ್‌ಗಳಿಗೆ ಸಿದ್ಧಗೊಳ್ಳುತ್ತಿದೆ. ಕಾಸರ ಗೋಡು ಸಹಿತ ವಿವಿಧೆೆಡೆಗಳಲ್ಲಿ ಬೆಸ್ತರು ಮೀನುಗಾರಿಕಾ ಬಲೆಗಳನ್ನು ಹೆಣೆವ ಮತ್ತು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. 

ಮೀನುಗಾರಿಕೆ ಸಾಧ್ಯವಿಲ್ಲದ ಕಾರಣ ದಿಂದ ಬಲೆ ನೇಯುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಮುಂದಿನ ಮೀನುಗಾರಿಕಾ ಸೀಸನ್‌ ನಿರೀಕ್ಷೆಯೊಂದಿಗೆ.

ಮೀನಿನ ಸಂಪತ್ತು ರಕ್ಷಿಸುವ ಹಿನ್ನೆಲೆ ಯಲ್ಲಿ ಕೇರಳ ಸರಕಾರ ಒಂದೂವರೆ ತಿಂಗಳ ಕಾಲ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಿರಲು ಟ್ರಾಲಿಂಗ್‌ ನಿಷೇಧಿಸಿದೆ. ಇದರ ಪರಿಣಾಮವಾಗಿ ಮೀನುಗಾರಿಕೆ ದೋಣಿ (ಯಾಂತ್ರೀಕೃತ ದೋಣಿ)ಗಳು ದಡದಲ್ಲಿ ಲಂಗರು ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. 

ಈ ದಿನಗಳಲ್ಲಿ ದುಡಿಮೆಯಿಲ್ಲದೆ ಜೀವನ ಸಾಗಿಸುವ ಸವಾಲು ಬೆಸ್ತರನ್ನು ಕಾಡುತ್ತಿದೆ. ಜೀವ ಪಣವಿಟ್ಟು ಅಥವಾ ಜೀವದ ಹಂಗು ತೊರೆದು ಸಾಹಸದಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಜೀವನ ಸಾಗಿಸುತ್ತಿದ್ದ ಬೆಸ್ತರಿಗೆ ಇದೀಗ ಕೆಲಸವಿಲ್ಲದ ದಿನಗಳು. ಜೂ.14 ಮಧ್ಯರಾತ್ರಿಯಿಂದ ಜುಲೈ 31 ರ ವರೆಗೆ ಅಂದರೆ 47 ದಿನಗಳ ಕಾಲ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಕೇರಳ ಸರಕಾರ ನಿಷೇಧ ಹೇರಿದ್ದು, ಈ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಜೀವನ ಸಾಗಿಸುವುದು ಸವಾಲಿನದ್ದಾಗಿದೆ.

ಸಮುದ್ರದಲ್ಲಿ ಮೀನಿನ ಸಂತಾನೋತ್ಪತ್ತಿ ಋತು ಆರಂಭಗೊಂಡ ಹಿನ್ನೆಲೆಯಲ್ಲಿ ಮತ್ಸÂ ಸಂರಕ್ಷಿಸುವ ಹಿನ್ನೆಲೆಯಲ್ಲಿ ಕೆ.ಎಂ.ಎಫ್‌.ಆರ್‌. ಕಾಯ್ದೆಯಂತೆ ಕೇರಳದ ಆಳ ಸಮುದ್ರದಲ್ಲಿ ಜುಲೈ 31 ರ ವರೆಗೆ ಮೀನುಗಾರಿಕೆ ನಿಷೇಧ ಹೇರಿದ್ದು, ಪರಂಪರಾಗತ ಮೀನುಗಾರಿಕೆಗೆ ಯಾವುದೇ ನಿಯಂತ್ರಣವಿಲ್ಲದೆ ಮೀನು ಗಾರಿಕೆ ನಡೆಸಬಹುದಾಗಿದೆ. ಈ ಕಾರಣದಿಂದ ಪರಂಪರಾಗತ ಮೀನು ಗಾರಿಕೆ ನಡೆಸುವ ಬೆಸ್ತರು ಸ್ವಲ್ಪಮಟ್ಟಿಗೆ ಉಸಿರಾಡುವಂತಾಗಿದೆ.

ಟ್ರಾಲಿಂಗ್‌ ನಿಷೇಧ ಕೊನೆಗೊಳ್ಳುವ ಜುಲೈ 31 ರ ವರೆಗೆ ಕಾಯುತ್ತಿರುವ ಬೆಸ್ತರು ಈ ಕಾಲಾವಧಿಯಲ್ಲಿ ಬಲೆಯನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ದಡದಲ್ಲಿ ಲಂಗರು ಹಾಕಿರುವ ದೋಣಿಗಳ ದುರಸ್ತಿಯ ಜೊತೆಯಲ್ಲಿ ಬಲೆಯನ್ನು ನೇಯುವ ಕೆಲಸ ದಡದಲ್ಲಿ ನಡೆಯುತ್ತಿದೆ. ಇದೀಗ ಹೊಳೆಗಳಲ್ಲಿ ಸಣ್ಣ ದೋಣಿಗಳನ್ನು ಬಳಸಿ ಹೊಳೆಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾರೆ. ದೋಣಿ, ಬಲೆ ಮೊದಲಾದವುಗಳ ದುರಸ್ತಿಯ ಜೊತೆಯಲ್ಲಿ ಬೋಟ್‌ಗೆ ಅಳವಡಿಸುವ ಮೋಟಾರ್‌ ಗಳನ್ನು ದುರಸ್ತಿಗೊಳಿಸುವ ಕೆಲಸವೂ ಈಗ ನಡೆಯುತ್ತಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.