ಜಲಪ್ರಳಯ :ಕೇರಳದಲ್ಲಿ 17 ದಿನಗಳಲ್ಲಿ 164 ಮಂದಿ ಸಾವು


Team Udayavani, Aug 18, 2018, 6:00 AM IST

17ksde31a.jpg

ಕಾಸರಗೋಡು: ಈ ಹಿಂದೆ ಎಂದು ಕಾಣದ ಮಳೆಯ ರುದ್ರ ನರ್ತನದಿಂದ ಕೇರಳದಲ್ಲಿ ಕಳೆದ 17 ದಿನಗಳಲ್ಲಿ 164 ಮಂದಿ ಸಾವಿಗೀಡಾಗಿದ್ದಾರೆ. ಕಾಸರಗೋಡು ಜಿಲ್ಲೆ ಹೊರತುಪಡಿಸಿ ರಾಜ್ಯದ 13 ಜಿಲ್ಲೆಗಳಲ್ಲಿ ಜಲಪ್ರಳಯ ಉಂಟಾಗಿದ್ದು, ಮಳೆ ಇನ್ನೂ ಸುರಿಯುತ್ತಿದೆ.

ಆ. 16ರಂದು ಸುರಿದ ಭಾರೀ ಮಳೆಯಿಂದಾಗಿ ಕೊಟ್ಯಾಡಿ ಪರಪ್ಪೆಯಲ್ಲಿ ಪಯಸ್ವಿನಿ ಹೊಳೆ ಉಕ್ಕಿ ಹರಿದ ಪರಿಣಾಮವಾಗಿ ಸುಳ್ಯ-ಮುಳ್ಳೇರಿಯ ಅಂತಾರಾಜ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೊಳೆಯಲ್ಲಿ ಮಳೆ ನೀರು ಉಕ್ಕಿ ಹರಿದು ರಸ್ತೆಯ ಮೇಲೂ ಹರಿಯತೊಡಗಿತು. ಇದರಿಂದ ಬಸ್‌ ಸಹಿತ ಘನ ವಾಹನಗಳಿಗೆ ಸಂಚರಿಸಲು ಮಾತ್ರವೇ ಸಾಧ್ಯವಾಯಿತು. ಅಪಾಯ ಸಾಧ್ಯತೆಯನ್ನು ಮನಗಂಡು ಇತರ ವಾಹನಗಳಿಗೆ ಸ್ಥಳೀಯರು ಹೋಗದಂತೆ ತಡೆದರು. ಸಂಜೆಯಾಗುತ್ತಿದ್ದಂತೆ ನೀರಿನ ಪ್ರಮಾಣ ಕಡಿಮೆಯಾಯಿತು. ಆ ಬಳಿಕವಷ್ಟೇ ವಾಹನ ಸಂಚಾರ ಪುನರಾರಂಭಗೊಂಡಿತು. ಆದರೆ ಶುಕ್ರವಾರ ಬೆಳಗ್ಗಿನಿಂದ ಮತ್ತೆ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಅತ್ತನಾಡಿ ಪರಿಸರದಲ್ಲಿ ಅಡಿಕೆ ತೋಟಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ಇದರ ಪರಿಣಾಮವಾಗಿ ಚಂದ್ರಗಿರಿ ನದಿಗೆ ಸಂಪರ್ಕ ಕಲ್ಪಿಸುವ ಪಯಸ್ವಿನಿ ಹೊಳೆ ಉಕ್ಕಿ ಹರಿಯುತ್ತಿದೆ.

ಪ್ರವಾಹ ಪೀಡಿತ ಕೇರಳದ ಇತರ ಜಿಲ್ಲೆಗಳಲ್ಲಿ ಭಾರತೀಯ ವ್ಯೋಮಸೇನಾ ಪಡೆಯ ಮೂಲಕ ರಕ್ಷಿಸಲಾಗುತ್ತಿದೆ. ಸಂತ್ರಸ್ತರ ಶಿಬಿರದಲ್ಲಿ ಸಹಸ್ರಾರು ಮಂದಿ ಅಭಯ ಪಡೆದಿದ್ದಾರೆ. ಹೆಲಿಕಾಪ್ಟರ್‌ಗಳ ಮೂಲಕ ಆಹಾರ ತಲುಪಿಸಲಾಗುತ್ತಿದೆ. ನೆರೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 40 ರೆಸ್ಕೂé ಡ್ರೈವಿಂಗ್‌ ಟೀಮ್‌ನ್ನು ಕಾರ್ಯಾಚರಣೆಗಿಳಿಸಲಾಗಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಅತೀ ಜಾಗೃತೆ ನಿರ್ದೇಶ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಿದ್ಯುತ್‌ ಮತ್ತು ವಾರ್ತಾವಿನಿಮಯ ಸೌಕರ್ಯವೂ ಅಸ್ತವ್ಯಸ್ತಗೊಂಡಿದೆ. ನೆರೆ ಪ್ರದೇಶದಿಂದ ಜನರು ಸಾಮೂಹಿಕವಾಗಿ ಪಲಾಯನಗೈಯುತ್ತಿರುವ ದೃಶ್ಯವೂ ಕಂಡು ಬಂದಿದೆ. ರಾಜ್ಯದ ಎಲ್ಲಾ ಶಾಲೆಗಳಿಗೆ ಶುಕ್ರವಾರದಿಂದ ಆ.29 ರ ವರೆಗೆ ರಜೆ ಸಾರಲಾಗಿದೆ. ರಾಜ್ಯದ ಎಲ್ಲಾ ದೀರ್ಘ‌ ದೂರ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ಪ್ರವಾಹ ನೀರು ತುಂಬಿರುವ ನೆಡುಂಬಾಶೆÏàರಿ ವಿಮಾನ ನಿಲ್ದಾಣದಲ್ಲಿ ಆ.26 ರ ತನಕ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಡಲ್ಕೊರೆತ ಸಾಧ್ಯತೆಯಿದ್ದು, ಜಾಗೃತೆ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಮರ ಬಿದ್ದು ಬೈಕ್‌ಗೆ ಹಾನಿ 
ನಗರದ ಅಡ್ಕತ್ತಬೈಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ರೆಂಬೆಯೊಂದು ಮುರಿದು ಬಿದ್ದು ರಸ್ತೆ ಬದಿ ನಿಲ್ಲಿಸಿದ್ದ ಸೂರ್ಲು ನಿವಾಸಿಯ ಬೈಕ್‌  ಹಾನಿಗೀಡಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರೆಂಬೆ ಕಡಿದು ತೆಗೆದು ಸಾರಿಗೆ ಸಂಚಾರ ಸುಗಮಗೊಳಿಸಿದರು. ಮೊಗ್ರಾಲ್‌ ಕೊಪ್ಪರ ಬಜಾರ್‌ ರಾ.ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಮರವೊಂದು ರಸ್ತೆಗೆ ಅಡ್ಡ ಬಿದ್ದಿದೆ.

ನೀರು ಪಾಲಾದ ವ್ಯಕ್ತಿಯ ರಕ್ಷಣೆ  
ಕರಿಚ್ಚೇರಿ ಹೊಳೆಯಲ್ಲಿ ನೀರು ಪಾಲಾದ ಬೇಡಗ ಬಿಂಬುಂಗಲ್‌ ಚಂದ್ರನ್‌(40) ಅವರನ್ನು ಸ್ಥಳೀಯರು ರಕ್ಷಿಸಿದರು. ಹೊಳೆಯಲ್ಲಿ ತೇಲಿ ಹೋಗುತ್ತಿದ್ದ ಚಂದ್ರನ್‌ ಅವರ ಬೊಬ್ಬೆ ಕೇಳಿ ಸ್ಥಳೀಯರು ಒಗ್ಗೂಡಿ ಹೊಳೆಗೆ ಹಗ್ಗ ಎಸೆದರು. ಹಗ್ಗವನ್ನು ಹಿಡಿದುಕೊಂಡ ಅವರನ್ನು ರಕ್ಷಿಸಿ ದಡಕ್ಕೆ ತರಲಾಯಿತು. ಆ ಬಳಿಕ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲಾಯಿತು.

ತೃಕ್ಕನ್ನಾಡ್‌ನ‌ಲ್ಲಿ  ಮುಂದುವರಿದ ಕಡಲ್ಕೊರೆತ  
ಬೇಕಲ ತೃಕ್ಕನ್ನಾಡ್‌ನ‌ಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಈ ಪರಿಸರದ 30 ರಷ್ಟು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕೋಟಿಕುಳಂ ಫಿಶರೀಸ್‌ ಹೈಸ್ಕೂಲ್‌ನಲ್ಲಿ ಸಂತ್ರಸ್ತರ ಶಿಬಿರವನ್ನು ಆರಂಭಿಸಲಾಗಿದೆ. ಮಳೆಯಿಂದ ತೊಂದರೆಗೀಡಾದ ಕುಟುಂಬಗಳನ್ನು ಇಲ್ಲಿ ಸಂರಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.