ಜಲಪ್ರಳಯ :ಕೇರಳದಲ್ಲಿ 17 ದಿನಗಳಲ್ಲಿ 164 ಮಂದಿ ಸಾವು


Team Udayavani, Aug 18, 2018, 6:00 AM IST

17ksde31a.jpg

ಕಾಸರಗೋಡು: ಈ ಹಿಂದೆ ಎಂದು ಕಾಣದ ಮಳೆಯ ರುದ್ರ ನರ್ತನದಿಂದ ಕೇರಳದಲ್ಲಿ ಕಳೆದ 17 ದಿನಗಳಲ್ಲಿ 164 ಮಂದಿ ಸಾವಿಗೀಡಾಗಿದ್ದಾರೆ. ಕಾಸರಗೋಡು ಜಿಲ್ಲೆ ಹೊರತುಪಡಿಸಿ ರಾಜ್ಯದ 13 ಜಿಲ್ಲೆಗಳಲ್ಲಿ ಜಲಪ್ರಳಯ ಉಂಟಾಗಿದ್ದು, ಮಳೆ ಇನ್ನೂ ಸುರಿಯುತ್ತಿದೆ.

ಆ. 16ರಂದು ಸುರಿದ ಭಾರೀ ಮಳೆಯಿಂದಾಗಿ ಕೊಟ್ಯಾಡಿ ಪರಪ್ಪೆಯಲ್ಲಿ ಪಯಸ್ವಿನಿ ಹೊಳೆ ಉಕ್ಕಿ ಹರಿದ ಪರಿಣಾಮವಾಗಿ ಸುಳ್ಯ-ಮುಳ್ಳೇರಿಯ ಅಂತಾರಾಜ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೊಳೆಯಲ್ಲಿ ಮಳೆ ನೀರು ಉಕ್ಕಿ ಹರಿದು ರಸ್ತೆಯ ಮೇಲೂ ಹರಿಯತೊಡಗಿತು. ಇದರಿಂದ ಬಸ್‌ ಸಹಿತ ಘನ ವಾಹನಗಳಿಗೆ ಸಂಚರಿಸಲು ಮಾತ್ರವೇ ಸಾಧ್ಯವಾಯಿತು. ಅಪಾಯ ಸಾಧ್ಯತೆಯನ್ನು ಮನಗಂಡು ಇತರ ವಾಹನಗಳಿಗೆ ಸ್ಥಳೀಯರು ಹೋಗದಂತೆ ತಡೆದರು. ಸಂಜೆಯಾಗುತ್ತಿದ್ದಂತೆ ನೀರಿನ ಪ್ರಮಾಣ ಕಡಿಮೆಯಾಯಿತು. ಆ ಬಳಿಕವಷ್ಟೇ ವಾಹನ ಸಂಚಾರ ಪುನರಾರಂಭಗೊಂಡಿತು. ಆದರೆ ಶುಕ್ರವಾರ ಬೆಳಗ್ಗಿನಿಂದ ಮತ್ತೆ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಅತ್ತನಾಡಿ ಪರಿಸರದಲ್ಲಿ ಅಡಿಕೆ ತೋಟಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ಇದರ ಪರಿಣಾಮವಾಗಿ ಚಂದ್ರಗಿರಿ ನದಿಗೆ ಸಂಪರ್ಕ ಕಲ್ಪಿಸುವ ಪಯಸ್ವಿನಿ ಹೊಳೆ ಉಕ್ಕಿ ಹರಿಯುತ್ತಿದೆ.

ಪ್ರವಾಹ ಪೀಡಿತ ಕೇರಳದ ಇತರ ಜಿಲ್ಲೆಗಳಲ್ಲಿ ಭಾರತೀಯ ವ್ಯೋಮಸೇನಾ ಪಡೆಯ ಮೂಲಕ ರಕ್ಷಿಸಲಾಗುತ್ತಿದೆ. ಸಂತ್ರಸ್ತರ ಶಿಬಿರದಲ್ಲಿ ಸಹಸ್ರಾರು ಮಂದಿ ಅಭಯ ಪಡೆದಿದ್ದಾರೆ. ಹೆಲಿಕಾಪ್ಟರ್‌ಗಳ ಮೂಲಕ ಆಹಾರ ತಲುಪಿಸಲಾಗುತ್ತಿದೆ. ನೆರೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 40 ರೆಸ್ಕೂé ಡ್ರೈವಿಂಗ್‌ ಟೀಮ್‌ನ್ನು ಕಾರ್ಯಾಚರಣೆಗಿಳಿಸಲಾಗಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಅತೀ ಜಾಗೃತೆ ನಿರ್ದೇಶ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಿದ್ಯುತ್‌ ಮತ್ತು ವಾರ್ತಾವಿನಿಮಯ ಸೌಕರ್ಯವೂ ಅಸ್ತವ್ಯಸ್ತಗೊಂಡಿದೆ. ನೆರೆ ಪ್ರದೇಶದಿಂದ ಜನರು ಸಾಮೂಹಿಕವಾಗಿ ಪಲಾಯನಗೈಯುತ್ತಿರುವ ದೃಶ್ಯವೂ ಕಂಡು ಬಂದಿದೆ. ರಾಜ್ಯದ ಎಲ್ಲಾ ಶಾಲೆಗಳಿಗೆ ಶುಕ್ರವಾರದಿಂದ ಆ.29 ರ ವರೆಗೆ ರಜೆ ಸಾರಲಾಗಿದೆ. ರಾಜ್ಯದ ಎಲ್ಲಾ ದೀರ್ಘ‌ ದೂರ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ಪ್ರವಾಹ ನೀರು ತುಂಬಿರುವ ನೆಡುಂಬಾಶೆÏàರಿ ವಿಮಾನ ನಿಲ್ದಾಣದಲ್ಲಿ ಆ.26 ರ ತನಕ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಡಲ್ಕೊರೆತ ಸಾಧ್ಯತೆಯಿದ್ದು, ಜಾಗೃತೆ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಮರ ಬಿದ್ದು ಬೈಕ್‌ಗೆ ಹಾನಿ 
ನಗರದ ಅಡ್ಕತ್ತಬೈಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ರೆಂಬೆಯೊಂದು ಮುರಿದು ಬಿದ್ದು ರಸ್ತೆ ಬದಿ ನಿಲ್ಲಿಸಿದ್ದ ಸೂರ್ಲು ನಿವಾಸಿಯ ಬೈಕ್‌  ಹಾನಿಗೀಡಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರೆಂಬೆ ಕಡಿದು ತೆಗೆದು ಸಾರಿಗೆ ಸಂಚಾರ ಸುಗಮಗೊಳಿಸಿದರು. ಮೊಗ್ರಾಲ್‌ ಕೊಪ್ಪರ ಬಜಾರ್‌ ರಾ.ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಮರವೊಂದು ರಸ್ತೆಗೆ ಅಡ್ಡ ಬಿದ್ದಿದೆ.

ನೀರು ಪಾಲಾದ ವ್ಯಕ್ತಿಯ ರಕ್ಷಣೆ  
ಕರಿಚ್ಚೇರಿ ಹೊಳೆಯಲ್ಲಿ ನೀರು ಪಾಲಾದ ಬೇಡಗ ಬಿಂಬುಂಗಲ್‌ ಚಂದ್ರನ್‌(40) ಅವರನ್ನು ಸ್ಥಳೀಯರು ರಕ್ಷಿಸಿದರು. ಹೊಳೆಯಲ್ಲಿ ತೇಲಿ ಹೋಗುತ್ತಿದ್ದ ಚಂದ್ರನ್‌ ಅವರ ಬೊಬ್ಬೆ ಕೇಳಿ ಸ್ಥಳೀಯರು ಒಗ್ಗೂಡಿ ಹೊಳೆಗೆ ಹಗ್ಗ ಎಸೆದರು. ಹಗ್ಗವನ್ನು ಹಿಡಿದುಕೊಂಡ ಅವರನ್ನು ರಕ್ಷಿಸಿ ದಡಕ್ಕೆ ತರಲಾಯಿತು. ಆ ಬಳಿಕ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲಾಯಿತು.

ತೃಕ್ಕನ್ನಾಡ್‌ನ‌ಲ್ಲಿ  ಮುಂದುವರಿದ ಕಡಲ್ಕೊರೆತ  
ಬೇಕಲ ತೃಕ್ಕನ್ನಾಡ್‌ನ‌ಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಈ ಪರಿಸರದ 30 ರಷ್ಟು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕೋಟಿಕುಳಂ ಫಿಶರೀಸ್‌ ಹೈಸ್ಕೂಲ್‌ನಲ್ಲಿ ಸಂತ್ರಸ್ತರ ಶಿಬಿರವನ್ನು ಆರಂಭಿಸಲಾಗಿದೆ. ಮಳೆಯಿಂದ ತೊಂದರೆಗೀಡಾದ ಕುಟುಂಬಗಳನ್ನು ಇಲ್ಲಿ ಸಂರಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.