“ಜಾನಪದೀಯ ನಂಬಿಕೆ, ಆಚರಣೆ ಮರೆವು ಅಧಃಪತನಕ್ಕೆ ದಾರಿ’

ವಾಂತಿಚ್ಚಾಲಿನಲ್ಲಿ ಆಟಿಡೊಂಜಿ ಅಟ್ಟಣೆ

Team Udayavani, Jul 23, 2019, 5:58 AM IST

22-BDK-03

ಬದಿಯಡ್ಕ : ತುಳು ಭಾಷೆ, ಸಂಸ್ಕೃತಿಗೆ ಸಂವರ್ಧನೆಗೆ ಪೂರಕವಾದ ಕಾರ್ಯಕ್ರಮವನ್ನು ಆಚರಿಸುವುದು, ತುಳು ಲಿಪಿ ಸಂಶೋಧಕರಾದ ಡಾ| ವೆಂಕಟರಾಜ ಪುಣಿಂಚಿತ್ತಾಯರ ಕನಸುಗಳನ್ನು ವ್ಯಾಪಕಗೊಳಿಸಿ ನನಸುಗೊಳಿಸುತ್ತಿರುವ ಜಿ.ಕೆ.ಚಾರಿಟೇಬಲ್‌ ಟ್ರಸ್ಟ್‌ನ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್‌ ಕಾಸರಗೋಡು ಅವರು ಹೇಳಿದರು.

ವಾಂತಿಚ್ಚಾಲಿನ ಜಿ.ಕೆ.ಚಾರಿಟೆಬಲ್‌ ಟ್ರಸ್ಟ್‌ ನೇತೃತ್ವದಲ್ಲಿ ವಾಂತಿಚ್ಚಾಲಿನಲ್ಲಿ ಆಯೋಜಿಸಲಾದ 51ನೇ ವರ್ಷದ ಆಟಿಡೊಂಜಿ ಅಟ್ಟಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚಾರಿಟೆಬಲ್‌ ಟ್ರಸ್ಟ್‌ನ ಮೂಲಕ ತುಳುವಿನ ಸಮಗ್ರ ಸಾಹಿತಿಕ, ಸಾಂಸ್ಕೃತಿಕ, ಜಾನಪದ ಆಚರಣೆ ನಂಬಿಕೆಗಳಿಗೆ ಪುನಶ್ಚೇತನ ನೀಡುತ್ತಿರುವುದು ಹೊಸ ತಲೆಮಾರಿಗೆ ಪ್ರೇರಣೆಯಾಗಲಿದೆ. ಸಾಂಸ್ಕೃತಿಕ, ಜಾನಪದೀಯ ನಂಬಿಕೆ, ಆಚರಣೆಗಳ ಮರೆವು ಅಧಪತನದ ದಾರಿಯಾಗಿ ಅಶಾಂತಿಗೆ ಕಾರಣವಾಗುವುದು ಎಂದು ತಿಳಿಸಿದರು.

ಕೇರಳ ತುಳು ಅಕಾಡೆಮಿ ಮೂಲಕ ಮುಂದಿನ ದಿನಗಳಲ್ಲಿ ತುಳು ಲಿಪಿ ಕಾರ್ಯಾಗಾರ ನಡೆಸಲಾಗುವುದು ಎಂದ ಅವರು ತುಳು ಭವನದ ನಿರ್ಮಾಣ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಡಾ|ಶ್ರೀನಿಧಿ ಸರಳಾಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಅಕಾಡೆಮಿ ಸದಸ್ಯೆ ವಿದ್ಯಶ್ರೀ, ಕಾಸರಗೋಡು ತುಳು ಲೇಖಕರ ಸಂಘದ ಅಧ್ಯಕ್ಷ ಸತೀಶ ಸಾಲಿಯಾನ್‌ ನೆಲ್ಲಿಕುಂಜೆ, ಯೋಗ ಶಿಕ್ಷಕಿ ಇಂದಿರಾ ಯಾದವ್‌ ನೆಟ್ಟಣಿಗೆ, ಕುಲಾಲ ಸಮಾಜ ಸುಧಾರಕ ಸಂಘ ಕಾಸರಗೋಡಿನ ಅಧ್ಯಕ್ಷ ಸುಂದರ ಕಟ್ನಡ್ಕ, ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪತ್ರಕರ್ತರಾದ ಜಯ ಮಣಿಂಪಾರೆ ತುಳು ಸಾಹಿತಿ ಬಾಲಕೃಷ್ಣ , ಕಿಶನ್‌ ಮುದುಂಗಾರ್‌ ಕಟ್ಟೆ , ಹರ್ಷ ರೈ ಪುತ್ರಕಳ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತುಳು ಅಕಾಡೆಮಿ ಅಧ್ಯಕ್ಷರಾದ ಉಮೆಶ್‌ ಸಾಲ್ಯಾನ್‌ ಅವರನ್ನು ಸಮ್ಮಾನಿಸಲಾಯಿತು. ಜಿ.ಕೆ.ಟ್ರಸ್ಟ್‌ನ ಗೋಪಾಲಕೃಷ್ಣ ಕುಲಾಲ್‌ ಸ್ವಾಗತಿಸಿ, ದಿವ್ಯ ಪ್ರದೀಪ್‌ ಕಳತ್ತೂರು ವಂದಿಸಿದರು. ಜಿಶನ್‌ ವಾಂತಿಚ್ಚಾಲ್‌ ಪ್ರಾರ್ಥನೆ ಹಾಡಿದರು.

ಜೀವಂತವಾಗಿಸಲು ಸಾಧ್ಯ
ತುಳುಭಾಷೆ ಮತ್ತು ಸಂಸ್ಕೃತಿ ವೈಶಿಷ್ಟéಪೂರ್ಣವಾದುದು. ಅದರಲ್ಲಿರುವ ಮೂಲ ತತ್ವಗಳನ್ನು, ಜೀವನ ಸೂತ್ರಗಳನ್ನು ಆಚರಣೆಯ ಮೂಲಕ ಮಾತ್ರ ಜೀವಂತವಾಗಿಸಲು ಸಾಧ್ಯ. ಸಂಪ್ರದಾಯಕ್ಕೆ ಚ್ಯುತಿ ಬರದಂತೆ ತೌಳವರ ಶ್ರೀಮಂತ ಬದುಕನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಪ್ರಯತ್ನ ನಮ್ಮದು. ನಮ್ಮ ಪಾಡªನಾ, ಆಟ ಆಯನ, ತಿಂಡಿ ತಿನಿಸುಗಳ ಪರಿಚಯದೊಂದಿಗೆ ಆಟಿ ಯಾಕೆ ಅಷ್ಟೊಂದು ವಿಶೇಷ ಎಂಬುವುದನ್ನು ಆಚರಣೆಯ ಮೂಲಕ ತಿಳಿಸಿಕೊಡುವ ಆಟಿಡೊಂಜಿ ಅಟ್ಟಣೆ ಕಾರ್ಯಕ್ರಮವನ್ನು ವರ್ಷಂಪ್ರತಿ ಆಚರಿಸಿಕೊಂಡು ಬಂದಿದೇವೆ ಎಂದು ಗೋಪಾಲಕೃಷ್ಣ ಕುಲಾಲ್‌ ವಾಂತಿಚ್ಚಾಲ್‌ ಹೇಳಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.