ಗಾಂಧೀಜಿ ಬೋಧನೆಗಳು ಬದುಕಿಗೆ ದಾರಿದೀಪ: ರಾಧಾಕೃಷ್ಣನ್‌


Team Udayavani, Jun 16, 2019, 6:10 AM IST

radhakrishna

ಮಂಜೇಶ್ವರ: ಸಮಾಜದಲ್ಲಿ ಅನಾಚಾರಗಳು ಹಾಗೂ ಸ್ವತ್ಛಂದತೆಗಳು ತಾಂಡವವಾಡುತ್ತಿದ್ದು, ಯಾವ ಹಾದಿಯಲ್ಲಾದರೂ ಹಣ ಮತ್ತು ಅಧಿಕಾರವನ್ನು ಕೈವಶಪಡಿಸಬೇಕೆಂಬ ಮನುಷ್ಯನ ಹಪಾಹಪಿ ಹಿಂಸೆ, ದಬ್ಟಾಳಿಕೆ ಹಾಗೂ ದಮನಗಳಿಗೆ ಜನರನ್ನು ಪ್ರೇರೇಪಿಸುತ್ತವೆ. ಕೇವಲ ಬೆರಳೆಣಿಕೆಯಷ್ಟು ಜನರು ಇದರ ಫಲಾನುಭವಿಗಳಾದರೆ, ಕೋಟ್ಯಂತರ ಜನರು ಇದರಿಂದಾಗಿ ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಹಿಂಸೆ, ಕೊಲೆ, ಮಾದಕ ವಸ್ತುಗಳ ಬಳಕೆ ಜನರಲ್ಲಿ ಮನುಷ್ಯತ್ವವನ್ನು ಇಲ್ಲವಾಗಿಸುತ್ತವೆ ಎಂದು ಹಿರಿಯ ಗಾಂಧೀವಾದಿ, ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷ ಡಾ| ಎನ್‌.ರಾಧಾಕೃಷ್ಣನ್‌ ಹೇಳಿದರು.

ಹಿಂಸೆ, ಕೊಲೆ, ಮದ್ಯ-ಮಾದಕವಸ್ತಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರ ಸಂಗಮ ಹಾಗೂ ವಿನೋಭಾ ವೆಂಕಟೇಶ್‌ ರಾವ್‌ ಶಾಂತಿಸೇನಾ ಫೌಂಡೇಶನ್‌ ವಾರ್ಷಿಕ ಅವಲೋಕನ ಸಭೆಯನ್ನು ಗುರುವಾರ ಹೊಸಂಗಡಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗಾವಿಯ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಆರ್‌.ಪಾಟೀಲ್‌ಅವರು ಅಧ್ಯಕ್ಷತೆ ವಹಿಸಿದ್ದರು.

ಶಾಂತಿ ಸ್ಥಾಪನ ದಿನ
1957ರಲ್ಲಿ ಆಚಾರ್ಯ ವಿನೋಭಾವೆ ಅವರಿಂದ ಮಂಜೇಶ್ವರದಲ್ಲಿ ಆರಂಭಿಸಲ್ಪಟ್ಟ ಶಾಂತಿಸೇನೆಯು ಕ್ರಿಯಾತ್ಮಕವಾಗಿ ಮುನ್ನಡೆಯಲು ತೀರ್ಮಾನಿಸಿದೆ. ಹೊಸ ತಲೆಮಾರಿಗೆ ಹಸ್ತಾಂತರಿಸಲ್ಪಟ್ಟ ಗಾಂಧೀಜಿಯವರ ಶಾಂತಿಸೇನಾ ಪರಿಕಲ್ಪನೆಯನ್ನು ರಾಷ್ಟ್ರವ್ಯಾಪಿ ಹರಡುವ ನಿಟ್ಟಿನಲ್ಲಿ ಶಾಂತಿಸೇನೆಯ ಸ್ಥಾಪನಾ ದಿನವಾದ ಆಗಸ್ಟ್‌ 23 ರಂದು ಮಂಜೇಶ್ವರದಲ್ಲಿ ರಾಷ್ಟ್ರೀಯ ಶಾಂತಿಸೇನಾ ದಿನವನ್ನು ಆಚರಿಸಲು ತೀರ್ಮಾನಿಸಿದ್ದು, ದೇಶ-ವಿದೇಶಗಳ ಪ್ರತಿನಿಧಿಗಳು ಭಾಗವ ಹಿಸುವ ನಿರೀಕ್ಷೆದೆಯೆಂದು ಡಾ| ಎನ್‌.ರಾಧಾಕೃಷ್ಣನ್‌ ಹೇಳಿದರು.

ಮುಖ್ಯ ಅತಿಥಿಗಳಾಗಿ ವಿ.ಕೆ.ಮೋಹನನ್‌, ಆರ್‌.ಪಿ.ರವೀಂದ್ರನ್‌, ಫಾದರ್‌ ಸ್ಕರಿಯಾ, ಶಿವನ್‌ ಅರುಣಾಚಲಂ, ರಂಜಿತ್‌ ಸರಕಾರ್‌, ಮಮತಾ ದಿವಾಕರ್‌, ಜೀನ್‌ ಲವೀನಾ ಮೊಂತೇರೋ, ಶಂಶಾದ್‌ ಶುಕೂರ್‌, ಕ್ಯಾಪ್ಟನ್‌ ನಂಬ್ಯಾರ್‌, ಪ್ರೋ.ಮೇರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಿವಾಕರ್‌ ಎಸ್‌ ಜೆ ಸ್ವಾಗತಿಸಿ, ಉಮ್ಮರ್‌ ಬೋರ್ಕಳ ವಂದಿಸಿದರು.

ಮರು ವ್ಯಾಖ್ಯಾನ
ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಬದುಕು ಮತ್ತು ಬೋಧನೆಗಳೇ ದಾರಿದೀಪವಾಗಿವೆ. ಈ ನಿಟ್ಟಿನಲ್ಲಿ ಗಾಂಧೀಜಿಯವರನ್ನು ಕಂಡು ಕೇಳರಿಯದ ಹೊಸ ತಲೆಮಾರಿಗೆ ಗಾಂಧೀಜಿಯವರ ಚಿಂತನೆಗಳು ಸೀÌಕೃತವಾಗುವ ರೀತಿಯಲ್ಲಿ ಮರು ವ್ಯಾಖ್ಯಾನಗೊಳಿಸಬೇಕಾದ ಜವಾಬ್ದಾರಿ ನಮಗಿದೆ ಎಂದು ಡಾ| ಎನ್‌.ರಾಧಾಕೃಷ್ಣನ್‌ ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.