ಗಂಗೊಳ್ಳಿ: ಮೀನುಗಾರಿಕಾ ಋತುವಿಗೆ ಆರಂಭದಲ್ಲೇ ವಿಘ್ನ


Team Udayavani, Aug 2, 2018, 6:45 AM IST

3107kdpp2.jpg

ಗಂಗೊಳ್ಳಿ: ಎರಡು ತಿಂಗಳ ಮೀನುಗಾರಿಕೆ ನಿಷೇಧ ಅವಧಿ ಜು. 31 ಕ್ಕೆ ಮುಕ್ತಾಯಗೊಂಡಿದೆ. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಆ. 1ರಿಂದ ಗಂಗೊಳ್ಳಿಯಲ್ಲಿ ಬೋಟುಗಳು ಕಡಲಿಗಿಳಿಯುತ್ತಿಲ್ಲ, ಬದಲಿಗೆ ಆ. 15ರಿಂದ ಇಳಿಯುವ ನಿರೀಕ್ಷೆ ಇದೆ. 

ಸದ್ಯ ಕಡಲು ಪ್ರಕ್ಷುಬ್ಧಗೊಂಡಿದ್ದು, ಅಲೆಗಳ ಅಬ್ಬರವು ಜೋರಾಗಿದೆ. ಗಾಳಿಯ ರಭಸವು ತೀವ್ರವಾಗಿರುವುದರಿಂದ ಮೀನುಗಾರರು ಕಡಲಿಗಿಳಿಯಲು ಹಿಂದೇಟು ಹಾಕಿದ್ದಾರೆ. ಮಳೆಗಾಲದಲ್ಲಿ ಮೇಲಿರಿಸಿದ ಬೋಟುಗಳ ಪೈಕಿ ಕೆಲವನ್ನು ಮಾತ್ರ ಕಡಲಿಗಿಳಿಸಲಾಗಿದೆ.
 
ಸಿದ್ಧತೆಯೇ ಆರಂಭವಾಗಿಲ್ಲ
ಬಂದರು ವಠಾರದ ಸ್ವತ್ಛತೆ ಸೇರಿದಂತೆ ಇನ್ನಿತರ ಕಾರ್ಯಗಳು ಇನ್ನೂ ನಡೆದಿಲ್ಲ. ಬಲೆಗಳ ನೇಯುವಿಕೆ, ಬೋಟುಗಳ ದುರಸ್ತಿ, ಬೋಟುಗಳಿಗೆ ಬಣ್ಣ ಬಳಿದು ಅಗತ್ಯ ಸಾಮಗ್ರಿಗಳನ್ನು ಸೇರಿಸುವ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಬೋಟುಗಳು ಮ್ಯಾಂಗನೀಸ್‌ ವಾರ್ಫ್‌ನಲ್ಲಿ ಲಂಗರು ಹಾಕಿವೆ. ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಅಂತ್ಯವಾದರೂ ಗಂಗೊಳ್ಳಿ ಬಂದರಿನಲ್ಲಿ ಮೀನುಗಾರಿಕೆ ಆರಂಭವಾಗುವ ಲಕ್ಷಣ ಕಾಣುತ್ತಿಲ್ಲ.

ಮೀನುಗಾರರೊಳಗೆ ಗೊಂದಲ
ಯಾವ ಬೋಟುಗಳನ್ನು ಮೊದಲು ಕಡಲಿಗೆ ಇಳಿಸಬೇಕು ಎನ್ನುವ ಗೊಂದಲ ಬೋಟು ಮಾಲಕರೊಳಗೆ ಇದ್ದು, ಇದರಿಂದ ಇನ್ನೂ ಗಂಗೊಳ್ಳಿ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆ ಆರಂಭವಾಗಿಲ್ಲ. ಈ ಬಾರಿ ಲೈಟ್‌ ಫಿಶಿಂಗ್‌ಗೆ ಕೂಡ ನಿಷೇಧ ಇರುವುದರಿಂದ 370 ಅಥವಾ ಬುಲ್‌ ಟ್ರಾಲ್‌ ಇಳಿಸಬೇಕೋ ಎನ್ನುವ ಗೊಂದಲಗಳಿವೆ.
 
ಅವಧಿಗೆ ಮುನ್ನವೇ ಅಂತ್ಯ
ಕಳೆದ ಋತುವಿನಲ್ಲಿ ಮತ್ಸé ಕ್ಷಾಮ ಹಾಗೂ ವಾತಾವರಣದ ಬಿಸಿಯಿಂದಾಗಿ ಅವಧಿಗೆ ಮುನ್ನವೇ ಅಂದರೆ ಫೆಬ್ರವರಿಯಲ್ಲಿಯೇ ಮೀನುಗಾರಿಕೆ ಅಂತ್ಯವಾಗಿತ್ತು. ಕಳೆದ ಸಾಲಿನಲ್ಲಿ 33,115 ಮೆಟ್ರಿಕ್‌ ಟನ್‌ ಮೀನು ಸಂಗ್ರಹವಾಗಿದ್ದು, 37,458.5 ಲಕ್ಷ ರೂ. ಆದಾಯ ಬಂದಿದೆ.

ಗಂಗೊಳ್ಳಿ ಬಂದರಿನಲ್ಲಿರುವ ಒಟ್ಟು ದೋಣಿಗಳು
ದೋಣಿಯ ವಿಧ                           ಸಂಖ್ಯೆ
ಟ್ರಾಲರ್‌                                     338
ಪಸೀìನ್‌                                  36
ಗಿಲ್‌ನೆಟ್‌                                  1,945
ಯಾಂತ್ರೀಕೃತವಲ್ಲದ ದೋಣಿಗಳು      1,456
ಪಾತಿ                                         23

ದುರಸ್ತಿಗೆ ಪ್ರಸ್ತಾವನೆ ಸಲ್ಲಿಕೆ
ಆ. 1ರಿಂದ ಬೋಟುಗಳು ಕಡಲಿಗೆ ಇಳಿಯಬಹುದು. ಆದರೆ ಈ ಬಾರಿ ಪ್ರತಿಕೂಲ ಹವಾಮಾನ ಇರುವುದರಿಂದ ವಿಳಂಬವಾಗುವ ಸಾಧ್ಯತೆಗಳಿವೆ. ಬಂದರಿನ ಕಟ್ಟಡದ ಶೀಟುಗಳ ದುರಸ್ತಿ, 2 ಕಟ್ಟಡಗಳಿಗೆ ವಿದ್ಯುತ್‌ ಪೂರೈಕೆ, ಸ್ಲಾéಬ್‌ ದುರಸ್ತಿ ತುರ್ತಾಗಿ ಆಗಬೇಕಾಗಿದ್ದು, ಅದಕ್ಕಾಗಿ ಈಗಾಗಲೇ ಇಲಾಖೆ ಹಾಗೂ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 
– ಅಂಜನಾದೇವಿ, 
ಸಹಾಯಕ ನಿರ್ದೇಶಕಿ, ಗಂಗೊಳ್ಳಿ ಮೀನುಗಾರಿಕಾ ಬಂದರು

ತಡವಾಗಿ ಆರಂಭ 
ಈ ಬಾರಿ ಒಂದು ವಾರ ತಡವಾಗಿ ಮೀನುಗಾರಿಕೆ ಆರಂಭ  ನಿರೀಕ್ಷೆಯಿದೆ. ಗಂಗೊಳ್ಳಿ ಬಂದರು ಮಲ್ಪೆಯನ್ನೇ ಹೆಚ್ಚಾಗಿ ಅವಲಂಬಿಸಿರುವುದರಿಂದ ಸಾಮಾನ್ಯವಾಗಿ ಆ. 10 ರ ಅನಂತರವೇ ಅಧಿಕೃತವಾಗಿ ಆರಂಭವಾಗುತ್ತದೆ. ಬೋಟುಗಳನ್ನು ಮೊದಲು ಇಳಿಸಬೇಕು ಎನ್ನುವ ಗೊಂದಲವಿದೆ.
– ರಮೇಶ್‌ ಕುಂದರ್‌, ಅಧ್ಯಕ್ಷರು, ಪರ್ಸಿನ್‌ ಮೀನುಗಾರರ ಸ್ವಸಹಾಯ ಸಂಘ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.