ಕಾಸರಗೋಡು ನಗರದ ವಾಹನ ದಟ್ಟಣೆಗೆ ಕೂಡಲೇ ಪರಿಹಾರ ಕಲ್ಪಿಸಿ’


Team Udayavani, Jul 1, 2019, 5:51 AM IST

kasaragodu

ಕಾಸರಗೋಡು: ವಿವಿಧ ಬೇಡಿಕೆ ಗಳನ್ನು ಮುಂದಿಟ್ಟುಕೊಂಡು ಆಟೋರಿಕ್ಷಾ ಮಜ್ದೂರ್‌ ಸಂಘ (ಬಿಎಂಎಸ್‌)ದ ನೇತೃತ್ವದಲ್ಲಿ ಆಟೋರಿಕ್ಷಾ ಚಾಲಕರು ಕಾಸರಗೋಡು ನಗರಸಭಾ ಕಚೇರಿಗೆ ಪ್ರತಿಭಟನಾ ಮಾರ್ಚ್‌ ಮತ್ತು ಧರಣಿ ಸತ್ಯಾಗ್ರಹ ನಡೆಸಿದರು.

ಪ್ರತಿಭಟನಾ ಧರಣಿಯನ್ನು ಉದ್ಘಾಟಿಸಿದ ಬಿಎಂಎಸ್‌ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕೆ.ಎ.ಶ್ರೀನಿವಾಸನ್‌ ಮಾತನಾಡಿ, ನೂರಾರು ಜನರ ಆಶ್ರಯ ಕೇಂದ್ರವಾಗಿರುವ ಕಾಸರಗೋಡು ನಗರದಲ್ಲಿ ಜನರಿಗೆ ಸುಗಮವಾಗಿ ನಡೆದುಕೊಂಡು ಹೋಗಲು ಸಾಧ್ಯವಾಗದ ದುಸ್ಥಿತಿಯಿದೆ. ಕಾಸರಗೋಡು ನಗರದ ಟ್ರಾಫಿಕ್‌ ದಟ್ಟಣೆಯಿಂದಾಗಿ ನಗರದಲ್ಲಿ ಸಮರ್ಪಕವಾದ ವಾಹನ ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾಸರಗೋಡು ನಗರಸಭೆಯಲ್ಲಿ ಆಡಳಿತ ನಡೆಸುವ ಮುಸ್ಲಿಂಲೀಗ್‌ನ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.

ನಗರಗಳನ್ನು ಅತ್ಯಾಧುನಿಕ ರೀತಿಯಲ್ಲಿ ಮಾರ್ಪಾಡುಗೊಳಿಸಲು ಹಾಗೂ ನಗರ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಕೋಟ್ಯಾಂತರ ರೂ. ಗಳನ್ನು ಮಂಜೂರು ಮಾಡುತ್ತಿದ್ದರೂ, ಕೇರಳದ ಸಿಪಿಎಂ ಸರಕಾರ ಮಾತ್ರ ಈ ಮೊತ್ತವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿ ಅವ್ಯವಹಾರ ಮಾಡುತ್ತಿದೆ ಎಂದು ಕೆ.ಶ್ರೀನಿವಾಸನ್‌ ಆಕ್ರೋಶ ವ್ಯಕ್ತಪಡಿಸಿದರು.

ಬಿಎಂಎಸ್‌ ಜಿಲ್ಲಾ ಕಚೇರಿ ಪರಿಸರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ನಗರಸಭಾ ಕಚೇರಿಯ ಮುಂಭಾಗದಲ್ಲಿ ಸಮಾಪ್ತಿಗೊಂಡಿತು.

ಮೆರವಣಿಗೆಗೆ ನೇತಾರರಾದ ಕೆ.ಉಮೇಶ್‌, ಕೆ.ವಿಶ್ವನಾಥ ಶೆಟ್ಟಿ , ರಿಜೇಶ್‌ ಜೆ.ಪಿ.ನಗರ, ಕೆ.ಅರವಿಂದನ್‌, ಪ್ರಸಾದ್‌, ಸತೀಶ್‌ ಮೊದಲಾದವರು ನೇತೃತ್ವ ವಹಿಸಿದ್ದರು.

ಬಳಿಕ ಜಿಲ್ಲಾ ಆಟೋರಿಕ್ಷಾ ಮಜ್ದೂರ್‌ ಸಂಘ (ಬಿಎಂಎಸ್‌)ದ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಕುರಿತಾದ ಮನವಿಯನ್ನು ನಗರಸಭಾ ಕಾರ್ಯದರ್ಶಿಯವರಿಗೆ ಸಮರ್ಪಿಸಿದರು.

ಕಾಸರಗೋಡು ನಗರದ ವಾಹನ ದಟ್ಟಣೆಗೆ ಕೂಡಲೇ ಪರಿಹಾರ ಕಲ್ಪಿಸಬೇಕು, ಕಾಸರಗೋಡು ಜನರಲ್ ಆಸ್ಪತ್ರೆ ರಸ್ತೆ, ಹೊಸ ಬಸ್‌ ನಿಲ್ದಾಣ ಪರಿಸರದ ಕೋಟೆಕಣಿ ರಸ್ತೆ, ಕೆಪಿಆರ್‌ ರಾವ್‌ ರಸ್ತೆಯನ್ನು ತತ್‌ಕ್ಷಣ ಡಾಮರೀಕರಣಗೊಳಿಸಬೇಕು, ನಗರದ ಬೀದಿ ದೀಪಗಳು ರಾತ್ರಿ ಹೊತ್ತಿನಲ್ಲಿ ಉರಿಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು, ನಗರದಲ್ಲಿ ಸ್ಥಾಪಿಸಿದ ಸಿಸಿ ಟಿವಿ ಕ್ಯಾಮರಾಗಳನ್ನು ಸರಿಯಾಗಿ ಕಾರ್ಯಾಚರಿಸುವಂತೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ನಗರಸಭಾ ಆಡಳಿತದ ಮುಂದಿರಿಸಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.