ಕಾರ್ನಾಡ್‌ ಕನ್ನಡ ರಂಗಭೂಮಿ ವಿಶ್ವಮಟ್ಟಕ್ಕೇರಿಸಿದ ಶ್ರೇಷ್ಠ ರಂಗತಜ್ಞ, ಸಾಹಿತಿ : ಚಿನ್ನಾ


Team Udayavani, Jun 13, 2019, 6:08 AM IST

karnad

ಕಾಸರಗೋಡು: ಕನ್ನಡ ನಾಟಕ ಸೃಷ್ಟಿಯಲ್ಲಿ ತನ್ನ ವಿನೂತನ ತಂತ್ರವನ್ನು ಬಳಸಿ ಹೊಸ ಮನ್ವಂತರ ಆರಂಭಿಸಿದ ರಂಗತಜ್ಞ ಡಾ| ಗಿರೀಶ್‌ ಕಾರ್ನಾಡ್‌ ಪುರಾಣ, ಐತಿಹಾಸಿಕ ಘಟನೆಗಳಿಗೆ ಆಧುನಿಕ ಸ್ಪರ್ಶ ನೀಡಿ ನೂತನ ನಾಟಕ ಪ್ರಕಾರವನ್ನಾಗಿ ಸೃಜಿಸಿ ಅದಕ್ಕೆ ಜೀವ ತುಂಬಿದ ಖ್ಯಾತ ಸಾಹಿತಿ ಎಂದು ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ರಂಗಕರ್ಮಿ, ಸಿನೆಮಾ ಕಲಾವಿದ ಕಾಸರಗೋಡು ಚಿನ್ನಾ ಅವರು ಹೇಳಿದರು.

ಅವರು ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕನ್ನಡ ಅಧ್ಯಾಪಕ ಭವನದಲ್ಲಿ ಆಯೋಜಿಸಿದ ಡಾ| ಗಿರೀಶ್‌ ಕಾರ್ನಾಡ್‌ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದರು.

ತಾರುಣ್ಯದಲ್ಲಿಯೇ ತಮ್ಮ ಹೊಸ ಆವಿಷ್ಕಾರದಿಂದ ಕನ್ನಡ ನಾಟಕ ಸಾಹಿತ್ಯ ಚರಿತ್ರೆಯಲ್ಲಿಯೇ ಹೊಸ ಅಧ್ಯಾಯ ತೆರೆದ ನಾಟಕಕಾರ. ರಂಗಭೂಮಿಯಲ್ಲಿ ಅದನ್ನು ಅಭೂತಪೂರ್ವವಾಗಿ ಪ್ರದರ್ಶಿಸಿ ನಾಟಕವನ್ನು ಅಸಂಖ್ಯಾತ ಪ್ರೇಕ್ಷಕ ಲೋಕ ಮನಸಾ ಮೆಚ್ಚಿ, ಅವರನ್ನು ಮಂತ್ರಮುಗ್ಧಗೊಳಿಸಿದ ಬಹುಭಾಷಾ ರಂಗತಜ್ಞ. ಯಯಾತಿಯಿಂದ ಮೊದಲ್ಗೊಂಡು ಇವರಿಂದ ಸೃಷ್ಟಿಸಲ್ಪಟ್ಟಿ ರುವ ತುಘಲಕ್‌, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಹಿಟ್ಟಿನ ಹುಂಜ, ಈಡಿಪಸ್‌ ಮೊದಲಾದವು ಇದಕ್ಕೆ ಜ್ವಲಂತ ನಿದರ್ಶನ. ಕೆಲವು ವಿಷಯಗಳಲ್ಲಿ ತನಗೆ ಹಾಗೂ ಹಲವರಿಗೆ ಅವರ ಕುರಿತು ಅಭಿಪ್ರಾಯ ವ್ಯತ್ಯಾಸವಿದ್ದರೂ ಸಾಹಿತ್ಯ ಲೋಕಕ್ಕೆ, ಕಲಾರಂಗಕ್ಕೆ ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ಯಾರೂ ಅಲ್ಲಗಳೆಯಲು ಸಾಧ್ಯವೇ ಇಲ್ಲ. ನಿಜಕ್ಕೂ ಡಾ| ಗಿರೀಶ್‌ ಕಾರ್ನಾಡ್‌ ಕನ್ನಡ ರಂಗಭೂಮಿಯನ್ನು ಶ್ರೀಮಂತಗೊಳಿಸಿ ವಿಶ್ವಮಟ್ಟಕ್ಕೇರಿಸಿದ ಮೇರುನಟ, ರಂಗತಜ್ಞ, ಬಹುಭಾಷಾ ಪಾರಂಗತ, ಹಿರಿಯ ಸಾಹಿತಿ, ಪ್ರಖ್ಯಾತ ಸಿನೆಮಾ ಕಲಾವಿದ, ನಿರ್ದೇಶಕರೂ ಹೌದು ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಗಡಿನಾಡ ಘಟಕದ ಅಧ್ಯಕ್ಷ ಎಸ್‌. ವಿ. ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಥೆಗಾರ, ಚಿಂತಕ ಶಶಿ ಭಾಟಿಯಾ ಕಾರ್ನಾಡರ ಆತ್ಮ ಚರಿತ್ರೆಯಲ್ಲಿ ಉಲ್ಲೇಖೀಸಲ್ಪಟ್ಟ ಕೆಲವು ಘಟನೆಗಳನ್ನು ವಿವರಿಸಿದರು. ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್‌ ಸಾಲಿಯಾನ್‌, ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಸುಮ ಕೊಡಗು, ಸಹಪ್ರಾಧ್ಯಾಪಕ ಡಾ| ರತ್ನಾಕರ ಮಲ್ಲಮೂಲೆ, ಲೇಖಕ ಸುಕುಮಾರ ಆಲಂಪಾಡಿ ಮೊದಲಾ ದವರು ಮಾತನಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಕೆ.ವಿ. ರಮೇಶ್‌, ಎಂ. ಶಶಿಕಲಾ ಟೀಚರ್‌, ಬಾಲಕೃಷ್ಣ ಮಾಸ್ತರ್‌, ವಿರೂಪಾಕ್ಷ ಹೊಸದುರ್ಗ, ಹರಿಣಾಕ್ಷಿ, ನಾರತಿ, ಶ್ರೀಕಾಂತ್‌ ಮೊದಲಾದವರು ಉಪಸ್ಥಿತರಿದ್ದರು. ಪರಿಷತ್ತಿನ ಪದಾಧಿಕಾರಿ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ರಾಮಚಂದ್ರ ಭಟ್ ಪಿ. ವಂದಿಸಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.