ಮಾಸ್ಟರ್‌ ಯೋಜನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ “ಗುಡ್‌ ಸರ್ವೀಸ್‌ ಎಂಟ್ರಿ”


Team Udayavani, Oct 2, 2020, 6:32 PM IST

ಮಾಸ್ಟರ್‌ ಯೋಜನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ “ಗುಡ್‌ ಸರ್ವೀಸ್‌ ಎಂಟ್ರಿ”

ಕಾಸರಗೋಡು: ಕೋವಿಡ್‌ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಾರಿಗೊಳಿಸುವ ಮಾಸ್ಟರ್‌ ಯೋಜನೆಯಲ್ಲಿ ಅತ್ಯುತ್ತಮ ಚಟುವಟಿಕೆ ನಡೆಸಿದ ಶಿಕ್ಷಕರಿಗೆ ಗುಡ್‌ ಸರ್ವೀಸ್‌ ಎಂಟ್ರಿ ನೀಡಲು ಶಿಫಾರಸು ಮಾಡುವುದಾಗಿ ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ ಬಾಬು ತಿಳಿಸಿದರು. ಐ.ಇ.ಸಿ. ಜಿಲ್ಲಾ ಮಟ್ಟದ ಏಕೀಕರಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ವಾರ್ಡ್‌ ಮಟ್ಟದಲ್ಲಿ ಸತತ 14 ದಿನಗಳ ಕೋವಿಡ್‌ ರೋಗಿಗಳ ಸಂಖ್ಯೆ ಪೂರ್ಣಪ್ರಮಾಣದಲ್ಲಿ ಸೊನ್ನೆಯಾಗಿ, ಮುಂದಿನ 14 ದಿನಗಳ ಕಾಲ ರೋಗ ಭಾದೆ ಇಲ್ಲವಾದಲ್ಲಿ ಅಂಥ ಶಿಕ್ಷಕರಿಗೆ 10 ಅಂಕ ನೀಡಲಾಗುವುದು. ಹೀಗೆ 100 ಅಂಕ ಪಡೆಯುವ ವಾರ್ಡ್‌ ಮಟ್ಟದ ಶಿಕ್ಷಕರನ್ನು ಗುಡ್‌ ಸರ್ವೀಸ್‌ ಎಂಟ್ರಿಗೆ ಶಿಫಾರಸು ಮಾಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿ ಶಿಕ್ಷಕರ ಚಟುವಟಿಕೆಗಳನ್ನು ಜಿಲ್ಲಾ ಮಟ್ಟದಲ್ಲಿ ಸಂಗ್ರಹಿಸಿ ವರದಿ ಸಿದ್ಧಪಡಿಸಲಾಗುವುದು.

800ರಿಂದ 1600 ಕ್ಕೆ ಶಿಕ್ಷಕರ ಸಂಖ್ಯೆ
ಈಗ ಜಿಲ್ಲೆಯ ಮಾಸ್ಟರ್‌ ಯೋಜನೆಯಲ್ಲಿ 800 ಶಿಕ್ಷಕರಿದ್ದಾರೆ. ಅದನ್ನು 1,600ಕ್ಕೇರಿಸಲಾಗುವುದು. ಪ್ರತಿ ವಾರ್ಡ್‌ನಲ್ಲಿ ತಲಾ ಇಬ್ಬರು ಶಿಕ್ಷಕರನ್ನು ನೇಮಿಸಲಾಗುವುದು. ಜಿಲ್ಲೆಯ ವಿವಿಧ ಪಂಚಾಯತ್‌ಗಳಲ್ಲಿ ಮಾಸ್ಟರ್‌ ಯೋಜನೆ ಅತ್ಯುತ್ತಮ ರೀತಿ ನಡೆಸುತ್ತಿರುವುದು ಸೋಂಕು ನಿಯಂತ್ರಣಕ್ಕೆ ಪೂರಕವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಹಲ್ಲೆ ನಡೆಸುವವರ ವಿರುದ್ಧ ಕೇಸು
ಕೋವಿಡ್‌ ತಡೆ ಚಟುವಟಿಕೆಗಳಲ್ಲಿ ನಿರತರಾಗಿರುವ ಶಿಕ್ಷಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕೇಸು ದಾಖಲಿಸುವಂತೆ ಜಿಲ್ಲಾಧಿಕಾರಿ ಪೊಲೀಸರಿಗೆ ಆದೇಶ ನೀಡಿದರು. ಮಾಸ್ಟರ್‌ ಯೋಜನೆ ಸಂಬಂಧ ಕರ್ತವ್ಯದಲ್ಲಿದ್ದ ಶಿಕ್ಷಕ ವಿನೋದ್‌ ಕುಮಾರ್‌ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸುವಂತೆ ಚೀಮೇನಿ ಪೊಲೀಸರಿಗೆ ಆದೇಶ ನೀಡಿದರು.

ಹೆಚ್ಚುವರಿ ದಂಡನಾಧಿಕಾರಿ, ಸಂಚಾಲಕ ಮಧೂಸೂದನನ್‌ ಎಂ., ಸಹಾಯಕ ಮಾಸ್‌ ಮೀಡಿಯಾ ಅಧಿಕಾರಿ ಸಯಾನಾ, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್‌ ಎಂ.ಸಾಲ್ಯಾನ್‌, ಮಾಸ್ಟರ್‌ ಯೋಜನೆಯ ಜಿಲ್ಲಾ ಸಮಿತಿ ಸಂಚಾಲಕ ಜಿಷೋ ಜೇಮ್ಸ್‌, ಸಹಾಯಕ ಸಂಚಾಲಕರಾದ ವಿದ್ಯಾ ಪಾಲಾಟ್‌, ಕೆ.ಜಿ.ಮೋಹನನ್‌, ಶುಚಿತ್ವ ಮಿಷನ್‌ ಸಹಾಯಕ ಸಂಚಾಲಕ ಪ್ರೇಮರಾಜನ್‌, ಐ.ಸಿ.ಡಿ.ಎಸ್‌. ಪ್ರಧಾನ ಲೆಕ್ಕಾಧಿಕಾರಿ ರಾಜೇಶ್‌ ಕೃಷ್ಣನ್‌, ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.